ಶ್ರೀಗಳ ಸ್ಥಿತಿ ಚಿಂತಾಜನಕ, ಆದರೆ ಪ್ರಯತ್ನ ಕೈಬಿಟ್ಟಿಲ್ಲ: ವೈದ್ಯ ಪರಮೇಶ್
ತುಮಕೂರು, ಜನವರಿ 21: ಸಿದ್ದಗಂಗಾ ಶ್ರೀಗಳ ಆರೋಗ್ಯ ಚಿಂತಾಜನಕ ಸ್ಥಿತಿಯಲ್ಲಿದೆ ಆದರೆ ನಾವು ಪ್ರಯತ್ನ ಕೈಬಿಟ್ಟಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ವರ್ ಹೇಳಿದರು.
ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಪ್ರೊಟೀನ್ ಅಂಶ ಪೂರ್ಣವಾಗಿ ಕಡಿಮೆ ಆಗಿದೆ ಇದು ಆತಂಕಕಾರಿ ಎಂದು ಅವರು ಹೇಳಿದರು.
ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಲಾಗಿದೆ. ಅಲ್ಬುಮಿನ್ ಉತ್ಪಾದನೆ ಪೂರ್ಣವಾಗಿ ನಿಂತಿದೆ. ಆದರೆ ನಾವು ಪ್ರಯತ್ನ ಕೈಬಿಟ್ಟಿಲ್ಲ. ನಮ್ಮ ತಂಡ ಚಿಕಿತ್ಸೆಯಲ್ಲಿ ನಿರತವಾಗಿದೆ ಎಂದು ಅವರು ಹೇಳಿದರು.

ಶ್ರೀಗಳ ರಕ್ತದೊತ್ತಡ, ಶ್ವಾಸಕೋಶದ ಕಾರ್ಯದಲ್ಲಿ ವ್ಯತ್ಯಾಸವಾಗಿದೆ. ನಾವು ಪೂರ್ಣ ಶ್ರಮವಹಿಸಿ ಚಿಕಿತ್ಸೆ ನೀಡುತ್ತಿದ್ದೇವೆ. ಆದರೆ ಎಷ್ಟರ ಮಟ್ಟಿಗೆ ಯಶಸ್ವಿ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ವೈದ್ಯ ಪರಮೇಶ್ವರ್ ಹತಾಶೆ ವ್ಯಕ್ತಪಡಿಸಿದರು.
ನಮ್ಮ ಎಂಟು ಜನರ ವೈದ್ಯರ ತಂಡದೊಂದಿಗೆ ಬಿಜಿಎಸ್ನ ಹಲವು ತಜ್ಞ ವೈದ್ಯರು ಕೈಜೋಡಿಸಿದ್ದು, ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಪರಮೇಶ್ವರ್ ಅವರು ಹೇಳಿದರು.
-
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications