ಭಕ್ತರಿಗೆ ಸಿಹಿ ಸುದ್ದಿ: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ
ತುಮಕೂರು, ಜನವರಿ 18: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ವಾಮೀಜಿಗಳ ಆರೋಗ್ಯ ಗುರುವಾರ ಸಂಜೆಯಿಂದ ಸುಧಾರಿಸಿದೆ. ಅವರೀಗ ಸಂಪೂರ್ಣವಾಗಿ ಕೃತಕ ಉಸಿರಾಟ ಪಡೆಯುತ್ತಿಲ್ಲ. ಒಂದು ಗಂಟೆ ಕೃತಕ ಉಸಿರಾಟ ನಡೆಸಿದರೆ, ಇನ್ನು ಒಂದು ಗಂಟೆ ವೆಂಟಿಲೇಟರ್ ತೆಗೆಯಲಾಗುತ್ತಿದ್ದು, ಸ್ವಾಮೀಜಿಗಳು ಸ್ವಂತ ಉಸಿರಾಡುತ್ತಿದ್ದಾರೆ.
ಅಲ್ಲದೆ, ಅವರ ರಕ್ತ ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಸೋಂಕು ಕಡಿಮೆಯಾಗಿರುವುದು ಗೊತ್ತಾಗಿದೆ. ಅವರಾಗಿಯೇ ಉಸಿರಾಡುವುದನ್ನು ಟ್ರಯಲ್ ನೋಡುತ್ತಿದ್ದೇವೆ. ಕಣ್ಣುಬಿಟ್ಟು ಎಲ್ಲರನ್ನೂ ನೋಡುತ್ತಾರೆ. ಕೈಆಡಿಸುವಷ್ಟು ಶಕ್ತಿ ಅವರಲ್ಲಿದೆ. ಆದರೆ, ಬಂದವರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ವಾಮೀಜಿಗಳ ಆಪ್ತ ವೈದ್ಯ ಡಾ. ಪರಮೇಶ್ ತಿಳಿಸಿದ್ದಾರೆ.

ಅವರ ದೇಹದಲ್ಲಿನ ಪ್ರೋಟೀನ್ ಅಂಶ ನಿನ್ನೆ 2.7ರಷ್ಟಿತ್ತು. ಬಾಹ್ಯ ಶಕ್ತಿ ಪೂರೈಕೆ ತಗ್ಗಿಸಿರುವುದರಿಂದ ಅದು 2.5ಕ್ಕೆ ಇಳಿದಿದೆ.
ಆಲ್ಬುಮಿನ್ ಮಟ್ಟ ಸುಧಾರಣೆಯಾಗಲು ಎರಡು ಮೂರು ವಾರ ಬೇಕು. ಅದು ಸ್ಥಿರವಾದರೆ ಅವರ ಆರೋಗ್ಯ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತದೆ. ಶ್ವಾಸಕೋಶದಲ್ಲಿ ನೀರು ತುಂಬಿಕೊಳ್ಳುತ್ತಿತ್ತು. ಈಗ ಅದು ಕಡಿಮೆಯಾಗಿದೆ.
ಕಿರಿಯ ಸ್ವಾಮೀಜಿಗಳು ಶ್ರೀಗಳ ಪಕ್ಕದಲ್ಲಿ ಕುಳಿತು ಇಷ್ಟಲಿಂಗ ಪೂಜೆ ಮಾಡುತ್ತಿದ್ದಾರೆ. ಮಠದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗುವುದು ಎಂದು ಪರಮೇಶ್ ವಿವರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications