ಸಿದ್ದಗಂಗಾ ಶ್ರೀಗಳ ಹೆಸರು ಗಿನ್ನೆಸ್ ದಾಖಲೆಗೆ?
Recommended Video

ತುಮಕೂರು, ನವೆಂಬರ್ 06 : ನಡೆದಾಡುವ ದೇವರೇಂದೇ ಖ್ಯಾತರಾದ ಸಿದ್ದಗಂಗಾ ಶ್ರೀಗಳ ಹೆಸರು ಗಿನ್ನೆಸ್ ದಾಖಲೆ ಸೇರಲಿದೆ. ಸಿದ್ದಗಂಗಾ ಶ್ರೀಗಳ ಆಧ್ಯಾತ್ಮಿ ಹಾಗೂ ಸಮಾಜ ಸೇವಾಕಾರ್ಯಗಳನ್ನು ಅಂಕಿ ಅಂಶ ಸಮೇತ ಸಿದ್ದಗಂಗಾ ಮಠದ ನಿವೃತ್ತ ಪ್ರಾಂಶುಪಾಲರೊಬ್ಬರು ಸಂಗ್ರಹಿಸಿದ್ದು ಅವುಗಳನ್ನು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ಗೆ ಕೆಲವೇ ದಿಗಳಲ್ಲಿ ಸಲ್ಲಿಸಲಿದ್ದಾರೆ.
ಮಠದಲ್ಲೇ ಹಲವು ವರ್ಷ ಶಿಕ್ಷಕ ವೃತ್ತಿ ಮಾಡಿ ನಿವೃತ್ತ ಪಾಂಶುಪಾಲರಾದ ಚಂದ್ರಶೇಖರಯ್ಯ ಶ್ರೀಗಳ ಬಗ್ಗೆ ಮಹತ್ವಪೂರ್ಣ ಹಾಗೂ ಆಸಕ್ತಿಕರ ಸಂಗತಿಗಳನ್ನು ಕಲೆ ಹಾಕಿದ್ದು ಗಿನ್ನೆಸ್ ದಾಖಲೆಗೆ ನೀಡಲು ಎಲ್ಲ ರೀತಿಯ ತಯಾರಿ ನಡೆಸಿದ್ದಾರೆ. ಚಂದ್ರಶೇಖರಯ್ಯ ಕಲೆ ಹಾಕಿರುವ ಅಂಕಿ ಅಂಶ ಹೀಗಿವೆ.

ಮೂರು ಬಾರಿ ಶಿವಪೂಜೆ
ಶ್ರಿಗಳು ದೀಕ್ಷೆ ಪಡೆದು 88 ವರ್ಷಗಳಾಗಿವೆ, ದಿನದಲ್ಲಿ ಮೂರು ಬಾರಿ ತಪ್ಪದೇ ಶಿವಪೂಜೆ ಮಾಡುವ ಅವರು 88 ವರ್ಷಗಳಲ್ಲಿ ಅವರು 96,426 ಕ್ಕೂ ಹೆಚ್ಚು ಬಾರಿ ಶಿವಪೂಜೆ ಮಾಡಿದ್ದಾರೆ. ಬಹುಷಾ ಶ್ರೀಗಳಷ್ಟು ಶಿವಾರಾಧನೆ ಮಾಡಿರುವವರು ಸದ್ಯದ ಪರಿಸ್ಥಿತಿಯಲ್ಲಿ ಯಾಊ ಇಲ್ಲವೇನೊ

6 ಗಂಟೆ ಧ್ಯಾನ, ಪೂಜೆ
ಶ್ರೀಗಳು ಪ್ರತಿದಿನ 6 ಗಂಟೆ ಧ್ಯಾನ ಮತ್ತು ಪೂಜೆಯಲ್ಲಿ ತಪ್ಪದೆ ತಮ್ಮನ್ನು ತೊಡಗಿಕೊಳ್ಳುತ್ತಾರೆ ಅಂದರೆ ಸುಮಾರು 1.89.930ಗಂಟೆಗೂ ಅಧಿಕ ಸಮಯ ಧ್ಯಾನ ಮತ್ತು ಪೂಜೆ ಮಾಡಿದ್ದಾರೆ . 14 ಗಂಟೆ ಸಮಾಜ ಸೇವೆಯಲ್ಲಿ ತೊಡಗುವ ಶ್ರೀಗಳು ಇಲ್ಲಿಯವರೆಗೆ 4,49,680 ಗಂಟೆಗಳ ಕಾಲ ಸಮಾಜ ಸೇವೆಗೈದಿದ್ದಾರೆ.

ಲಕ್ಷಾಂತರ ವಿದ್ಯಾರ್ಥಿಗಳು
ಸಿದ್ದಗಂಗಾ ಮಠದ ಬೃಹತ್ ಶಿಕ್ಷಣ ದಾಸೋಹದ ಅಂಕಿ-ಅಂಶಗಳನ್ನೂ ಚಂದ್ರಶೇಖರಯ್ಯ ಅವರು ಸಂಗ್ರಹಿಸಿದ್ದಾರೆ. 1935 ರಿಂದ 2017ರ ವರೆಗೆ 2,67,545 ವಿದ್ಯಾರ್ಥಿಗಳು ಮಠದಲ್ಲಿ ವ್ಯಾಸಾಂಗ ಮಾಡಿದ್ದಾರೆ, ಇನ್ನು ಗ್ರಾಮೀಣ ಭಾಗದಲ್ಲಿರುವ ಮಠದ 100 ಕ್ಕೂ ಅಧಿಕ ವಿದ್ಯಾಸಂಸ್ಥೆಗಳಲ್ಲಿ 6,06,312 ಮಂದಿ ವಿದ್ಯಾರ್ಥಿಗಳು ವಿದ್ಯೆ ಕಲಿತಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿರುವ ಶಿಕ್ಷಕರ ಸಂಖ್ಯೆ 23,854, ಬೋದಕೇತರ ಸಿಬ್ಬಂದಿ ಸಂಖ್ಯೆ 23,845.

ಕೋಟ್ಯಾಂತರ ಭಕ್ತರಿಗೆ ದಾಸೋಹ
ಶ್ರೀ ಮಠಕ್ಕೆ ಭೇಟಿ ನೀಡಿದ ಭಕ್ತಾದಿಗಳ ಸಂಖ್ಯೆಯನ್ನು ಕ್ರೂಡೀಕಸಿರಿವ ಚಂದ್ರಶೇಖರಯ್ಯ. ಈ ವರೆಗೆ ಮಠಕ್ಕೆ ಭೇಟಿ ನೀಡಿರುವ ಭಕ್ತಾದಿಗಳ ಸಂಖ್ಯೆ 6,68,29,200 ಎಂದು ಲೆಕ್ಕಾ ಹಾಕಿದ್ದಾರೆ. ಜಾತ್ರಾ ಸಮಯದಲ್ಲಿ ಮಠದಲ್ಲಿ ದಾಸೋಹ ಸ್ವೀಕರಿಸಿರುವ ಭಕ್ತರ ಸಂಖ್ಯೆ 3,62,೦೦,೦೦೦ . ಇನ್ನು ಸಿದ್ದಗಂಗಾ ಶ್ರೀಗಳ ಪಾದ ಸ್ಪರ್ಶಿಸಿದವರ ಸಂಖ್ಯೆ 23,12,64,000 ಅನ್ನೂ ದಾಟಿದೆಯಂತೆ.

ಭಾರತ ರತ್ನ ನೀಡಲು ಹಿಂದೇಟು
ದಾಖಲೆಗೆ ಅರ್ಹವಾದ ಅಂಕಿ ಅಂಶಗಳನ್ನೇ ಚಂದ್ರಶೇಖರಯ್ಯ ಅವರು ಸಂಗ್ರಹಿಸಿದ್ದಾರೆ, ನಮ್ಮವರೇ ಶ್ರೀಗಳಿಗೆ ಭಾರತ ರತ್ನ ನೀಡಲು ಹಿಂದೆ ಮುಂದೆ ನೋಡುತ್ತಿರುವ ಸಮಯದಲ್ಲಿ ಅನ್ಯ ದೇಶಿಯರು ಸಿದ್ದಗಂಗಾ ಶ್ರೀಗಳ ಸಾಧನೆ ಗೌರವಿಸಿ ಗಿನ್ನೆಸ್ ಬುಕ್ ಆಪ್ ರೆಕಾರ್ಡ್ ಗೆ ಹೆಸರು ಸೇರಿದರೆ ಅದು ಕನ್ನಡಿಗರ ಹೆಮ್ಮೆ ಎಂದೇ ಪರಿಗಣಿತವಾಗುತ್ತದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications