ತುಮಕೂರು: ಗೋಡೆಕೆರೆ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ನಿಧನ

ತುಮಕೂರು, ಅಕ್ಟೋಬರ್ 4: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಮಠದ ಶ್ರೀಗಳಾದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ನಿಧನ ಇಂದು ನಿಧನರಾಗಿದ್ದಾರೆ.

ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದಾಗಿ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆಂದು ಮಠದ ಮೂಲಗಳು ತಿಳಿಸಿವೆ.

ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಯು ಗೋಡೆಕೆರೆ ಶ್ರೀ ಮಠಕ್ಕೆ 9 ನೇ ಗುರುಗಳಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಧಾರ್ಮಿಕವಾಗಿ ಸಾಕಷ್ಟು ಕೆಲಸ ಕಾರ್ಯದಲ್ಲಿ ತೊಡಗಿದ್ದರು. ಶ್ರೀ ಮಠದಿಂದ ಶಾಲಾ-ಕಾಲೇಜುಗಳು, ವಸತಿ ನಿಲಯ ಹಾಗೂ ಅನಾಥಾಶ್ರಮಗಳನ್ನು ತೆರೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೆರವಾಗಿದ್ದರು.

 Tumkur: Siddarama Deshikendra Swamiji Of Godekere Math Passed Away

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷರಾಗಿದ್ದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮ ದೇಶಿಕೇಂದ್ರ ಶ್ರೀಗಳ ಅಕಾಲಿಕ ಅಗಲಿಕೆ ನೋವು ತಂದಿದೆ ಎಂದಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ಶ್ರೀಗಳ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಅಪಾರ ಭಕ್ತ ವೃಂದಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+