ಬಡವರ ಯಾವುದೇ ಸಬ್ಸಿಡಿ ಕಡಿತಕ್ಕೆ ಸಿಎಂ ವಿರೋಧ
ತುಮಕೂರು, ನ. 28: ವಿವಿಧ ಯೋಜನೆಗಳಿಗೆ ನೀಡುತ್ತಿರುವ ಸಹಾಯಧನವನ್ನು ರದ್ದುಗೊಳಿಸುವ ಕುರಿತು ಕೇಂದ್ರ ವಿತ್ತ ಸಚಿವ ಅರುಣ ಜೇಟ್ಲಿ ನೀಡಿರುವ ಹೇಳಿಕೆಗೆ ಮಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
ಬಡವರಿಗೆ ನೀಡುತ್ತಿರುವ ಯಾವುದೇ ಸಹಾಯಧನ ರದ್ದುಗೊಳಿಸಿದರೂ ವಿರೋಧಿಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ 575 ಕೋಟಿ ರೂ. ಅಂದಾಜು ವೆಚ್ಚದ ಪಾವಗಡದಿಂದ ಮಳವಳ್ಳಿವರೆಗಿನ 193 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. [ಸಬ್ಸಿಡಿ ಸಹಿತ ಎಲ್ ಪಿಜಿ ಬೆಲೆ ಏರಿಕೆ]

ಬಡವರ ಆರ್ಥಿಕ ಸಬಲೀಕರಣ ಹಾಗೂ ಅವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಹಾಯಧನ ಅತ್ಯಗತ್ಯ ಎಂದು ಸಮರ್ಥಿಸಿದರು. ಬಿಜೆಪಿ ಬಡವರ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಪೊರೆಟ್ ಹಾಗೂ ಬಂಡವಾಳ ಶಾಹಿಗಳ ಪರ ನೀತಿ ಅನುಸರಿಸುತ್ತಿದೆ. ಆದ್ದರಿಂದಲೇ ಅರುಣ ಜೈಟ್ಲಿ ಹೀಗೆ ಮಾತನಾಡುತ್ತಿದ್ದಾರೆಂದು ಟೀಕಿಸಿದರು.
ವಿದ್ಯಾರ್ಥಿಗಳಿಗೆ ಶೂ ಭಾಗ್ಯ: ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ನೀಡುವ ಕುರಿತು ಸರ್ಕಾರ ಯೋಚಿಸುತ್ತಿದೆ. ಇದರ ಸಾಧಕ- ಬಾಧಕಗಳನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಶಾಲೆಯಲ್ಲಿ ವಾರಕ್ಕೆ ಐದು ದಿನ ಹಾಲು ನೀಡುವ ಕುರಿತೂ ಚಿಂತಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಮಡೆ ಸ್ನಾನಕ್ಕೆ ವಿರೋಧ: ಮಡೆ ಸ್ನಾನ ಕುರಿತು ಹೈ ಕೋರ್ಟ್ ನೀಡಿರುವ ಆದೇಶವನ್ನು ನಾನು ಗೌರವಿಸುತ್ತೇನೆ. ಆದರೆ, ವೈಯಕ್ತಿಕವಾಗಿ ಈ ಪದ್ಧತಿಯನ್ನು ವಿರೋಧಿಸುತ್ತೇನೆಂದು ಸ್ಪಷ್ಟಪಡಿಸಿದರು.
ಲೋಕೋಪಯೋಗಿ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ, ಶಾಸಕ ಕೆ.ಎನ್. ರಾಜಣ್ಣ, ಸಂಸದ ಮುದ್ದಹನುಮೇಗೌಡ ಇತರರು ಪಾಲ್ಗೊಂಡಿದ್ದರು.
-
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications