ಬಡವರ ಯಾವುದೇ ಸಬ್ಸಿಡಿ ಕಡಿತಕ್ಕೆ ಸಿಎಂ ವಿರೋಧ
ತುಮಕೂರು, ನ. 28: ವಿವಿಧ ಯೋಜನೆಗಳಿಗೆ ನೀಡುತ್ತಿರುವ ಸಹಾಯಧನವನ್ನು ರದ್ದುಗೊಳಿಸುವ ಕುರಿತು ಕೇಂದ್ರ ವಿತ್ತ ಸಚಿವ ಅರುಣ ಜೇಟ್ಲಿ ನೀಡಿರುವ ಹೇಳಿಕೆಗೆ ಮಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
ಬಡವರಿಗೆ ನೀಡುತ್ತಿರುವ ಯಾವುದೇ ಸಹಾಯಧನ ರದ್ದುಗೊಳಿಸಿದರೂ ವಿರೋಧಿಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ 575 ಕೋಟಿ ರೂ. ಅಂದಾಜು ವೆಚ್ಚದ ಪಾವಗಡದಿಂದ ಮಳವಳ್ಳಿವರೆಗಿನ 193 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. [ಸಬ್ಸಿಡಿ ಸಹಿತ ಎಲ್ ಪಿಜಿ ಬೆಲೆ ಏರಿಕೆ]

ಬಡವರ ಆರ್ಥಿಕ ಸಬಲೀಕರಣ ಹಾಗೂ ಅವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಹಾಯಧನ ಅತ್ಯಗತ್ಯ ಎಂದು ಸಮರ್ಥಿಸಿದರು. ಬಿಜೆಪಿ ಬಡವರ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಪೊರೆಟ್ ಹಾಗೂ ಬಂಡವಾಳ ಶಾಹಿಗಳ ಪರ ನೀತಿ ಅನುಸರಿಸುತ್ತಿದೆ. ಆದ್ದರಿಂದಲೇ ಅರುಣ ಜೈಟ್ಲಿ ಹೀಗೆ ಮಾತನಾಡುತ್ತಿದ್ದಾರೆಂದು ಟೀಕಿಸಿದರು.
ವಿದ್ಯಾರ್ಥಿಗಳಿಗೆ ಶೂ ಭಾಗ್ಯ: ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ನೀಡುವ ಕುರಿತು ಸರ್ಕಾರ ಯೋಚಿಸುತ್ತಿದೆ. ಇದರ ಸಾಧಕ- ಬಾಧಕಗಳನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಶಾಲೆಯಲ್ಲಿ ವಾರಕ್ಕೆ ಐದು ದಿನ ಹಾಲು ನೀಡುವ ಕುರಿತೂ ಚಿಂತಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಮಡೆ ಸ್ನಾನಕ್ಕೆ ವಿರೋಧ: ಮಡೆ ಸ್ನಾನ ಕುರಿತು ಹೈ ಕೋರ್ಟ್ ನೀಡಿರುವ ಆದೇಶವನ್ನು ನಾನು ಗೌರವಿಸುತ್ತೇನೆ. ಆದರೆ, ವೈಯಕ್ತಿಕವಾಗಿ ಈ ಪದ್ಧತಿಯನ್ನು ವಿರೋಧಿಸುತ್ತೇನೆಂದು ಸ್ಪಷ್ಟಪಡಿಸಿದರು.
ಲೋಕೋಪಯೋಗಿ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ, ಶಾಸಕ ಕೆ.ಎನ್. ರಾಜಣ್ಣ, ಸಂಸದ ಮುದ್ದಹನುಮೇಗೌಡ ಇತರರು ಪಾಲ್ಗೊಂಡಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications