ಜಿಎಸ್ ಬಿ, ಜ್ಯೋತಿಗಣೇಶ್ ಕೊಳಕುಮಂಡಲ : ಶಿವಣ್ಣ ಕೆಂಡಾಮಂಡಲ
ತುಮಕೂರು, ಜನವರಿ 7: ಮಾಜಿ ಸಚಿವ ಸೊಗಡು ಶಿವಣ್ಣ ವಿಪರೀತ ಸಿಟ್ಟಾಗಿದ್ದಾರೆ. ತಾವು ಪಕ್ಷ ಬಿಡುವುದಾಗಿ ಯಾರ್ಯಾರೋ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅದರ ಹಿಂದೆ ಇರೋದು ಮಾಜಿ ಸಂಸದ ಜಿ.ಎಸ್.ಬಸವರಾಜು ಹಾಗೂ ಅವರ ಮಗ-ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್ ಎಂದು ಆರೋಪಿಸಿದ್ದಾರೆ.
ಮಾಜಿ ಸಚಿವ ಶಿವಣ್ಣ ಜೆಡಿಎಸ್ ಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದರು. ನಾವು ಕಟ್ಟಿರುವ ಹುತ್ತಕ್ಕೆ ಕೊಳಕ ಮಂಡಲ ಹಾವು ಸೇರಿಕೊಂಡಂತೆ ಆಗಿದೆ ಎಂದು ಶನಿವಾರ ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.[ಅಂತ್ಯಸುಬ್ರಹ್ಮಣ್ಯ ಪಾವಗಡದ ನಾಗಲಮಡಿಕೆಯಲ್ಲಿ ರಥೋತ್ಸವ]

ಚೆನ್ನಿಗಪ್ಪ ನನ್ನ ಸ್ನೇಹಿತರು. ಹೀಗಾಗಿ ಬೇಟಿ ಮಾಡಿದ್ದೆ ವಿನಾ ಬೇರೇನೂ ವಿಚಾರ ಇಲ್ಲ. ಆದರೆ ಅಪ್ಪ-ಮಕ್ಕಳು ನನ್ನ ವಿರುದ್ಧ ಬೇಕೆಂತಲೆ ಇಂಥ ಚಿತಾವಣೆ ಮಾಡುತ್ತಿದ್ದಾರೆ. ತುಮಕೂರಿನಲ್ಲಿ ಬಿಜೆಪಿ ಒಡೆದ ಮನೆಯಾಗಲು ಜಿ.ಎಸ್.ಬಸವರಾಜು ಹಾಗೂ ಜ್ಯೋತಿಗಣೇಶ್ ಕಾರಣ ಎಂದು ಆರೋಪಿಸಿದರು.['ಜೈ ಗಂಗಾಜಲ್' ಸಿನಿಮಾ ಖ್ಯಾತಿಯ ಇಶಾ ಪಂತ್ ತುಮಕೂರು ಎಸ್ಪಿ]
ಆ ನಂತರ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಶಿವಣ್ಣ, ಕಾಂಗ್ರೆಸ್ ಸರಕಾರಕ್ಕೆ ಮಾನ-ಮರ್ಯಾದೆ ಇಲ್ಲ. ಗೃಹಸಚಿವರಿಗೆ ಇಲಾಖೆ ಮೇಲೆ ನಿಯಂತ್ರಣವೇ ಇಲ್ಲ. ಪರಮೇಶ್ವರ್ ಹೇಳಿಕೆ ಗಮನಿಸಿದರೆ ವಿದೇಶಿ ಸಂಸ್ಕೃತಿ ಅವರದು ಅನಿಸುತ್ತದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಘಟನೆಗಳಿಗೆ ನೈತಿಕ ಹೊಣೆ ಹೊತ್ತು ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.[ರಾಯಣ್ಣ ಬ್ರಿಗೇಡ್: ಮಾಜಿ ಸಚಿವ ಸೊಗಡು ಶಿವಣ್ಣ ಸಂದರ್ಶನ]
ಈಗ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರಕ್ಕೆ ಆರು ತಿಂಗಳು ಮಾತ್ರ ಆಯಸ್ಸು. ಇವರಿಗೆ ಅಕ್ರಮಕ್ಕೆ ಕಡಿವಾಣ ಹಾಕುವ ಶಕ್ತಿ ಇಲ್ಲ ಎಂದು ವ್ಯಂಗ್ಯವಾಡಿದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications