ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀಗಳ ಪುಣ್ಯಸ್ಮರಣೆ: ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಂದ ಸಾಮೂಹಿಕ ಕೇಶ ಮುಂಡನೆ

By ತುಮಕೂರು ಪ್ರತಿನಿಧಿ
|
Google Oneindia Kannada News

ತುಮಕೂರು, ಜನವರಿ 27: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಜನವರಿ 29ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ವಿದ್ಯಾರ್ಥಿಗಳು ಸಾಮೂಹಿಕ ಕೇಶ ಮುಂಡನೆ ಮಾಡಿಸಿಕೊಳ್ಳಲಿದ್ದಾರೆ.

ಶ್ರೀಗಳು ಅಗಲಿದ ಬಳಿಕ ವಿದ್ಯಾರ್ಥಿಗಳು ಅನಾಥ ಭಾವದಿಂದ ನೊಂದಿಕೊಂಡಿದ್ದರು. ಈಗ ತಮ್ಮ ಕೇಶ ಮುಂಡನೆ ಮಾಡಿಸುವ ಮೂಲಕ ವಿದ್ಯಾರ್ಥಿಗಳು ಶ್ರೀಗಳಿಗೆ ನಮನ ಸಲ್ಲಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ, ಇಷ್ಟೊಂದು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೇಶ ಮುಂಡನೆಯನ್ನು ಉಚಿತವಾಗಿ ಮಾಡಲು ಅಖಿಲ ಕರ್ನಾಟಕ ಸವಿತಾ ಸಮಾಜ ಯುವಕರ ಸಂಘದವರು ಮುಂದಾಗಿದ್ದಾರೆ.

ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡದಿರುವುದಕ್ಕೆ ಡಿಕೆಶಿ ಏನಂದ್ರು?
ಇದಕ್ಕಾಗಿ ಅಖಿಲ ಕರ್ನಾಟಕ ಸವಿತಾ ಸಮಾಜ ಯುವಕರ ಸಂಘದವರಿಗೆ ಸಿದ್ದಗಂಗಾ ಮಠದಿಂದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಆಶೀರ್ವಾದ ಪತ್ರವನ್ನು ಬರೆದಿದ್ದು,ಪತ್ರದ ವಿವರ ಹೀಗಿದೆ...

Students of the Siddaganga Mutt will do kesha mundana

"ಅಖಿಲ ಭಾರತ ಸವಿತಾ ಸಮಾಜ ಯುವಕರ ಸಂಘದವರು ಜನವರಿ 29ರ ಮಂಗಳವಾರದಂದು ಶ್ರೀಕ್ಷೇತ್ರದ ವಿದ್ಯಾರ್ಥಿಗಳಿಗೆ ಉಚಿತ ಕೇಶ ಮುಂಡನ ಸೇವೆ ಮಾಡಲು ಮುಂದೆ ಬಂದಿರುವುದು ತುಂಬಾ ಸಂತೋಷದ ವಿಷಯ.

ಗದ್ದುಗೆಯಲ್ಲಿ ಐಕ್ಯರಾದ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳುಗದ್ದುಗೆಯಲ್ಲಿ ಐಕ್ಯರಾದ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳು

ಸವಿತಾ ಸಮಾಜದ ಎಲ್ಲಾ ಕಾರ್ಯಕರ್ತರಿಗೆ ಪರಮಾತ್ಮನು ಹಾಗೂ ಶ್ರೀ ಸಿದ್ದಗಂಗಾ ಗುರುಪರಂಪರೆ ಸಕಲ ಸನ್ಮಂಗಳವನ್ನುಂಟು ಮಾಡಲೆಂದು ಹಾರೈಸುತ್ತೇವೆ" ಎಂದು ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಆಶೀರ್ವಾದ ಪತ್ರ ಬರೆದಿದ್ದಾರೆ.

English summary
Dr. Sri Shivakumar Swamiji Punya smarane: Students of the Siddaganga Mutt will do kesha mundana on January 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X