ತುಮಕೂರಿನ ಬಳಿಯ ಹೆದ್ದಾರಿಯಲ್ಲಿ ಕಂಟೇನರ್‌-ಬೈಕ್‌ ನಡುವೆ ಭೀಕರ ಅಪಘಾತ: ಮೂವರು ಸಾವು

ತುಮಕೂರು, ಜೂನ್‌, 6: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಹಾಗೆಯೇ ಇದೀಗ ಕಂಟೇನರ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಬೈಕ್‌ ಸವಾರರು ಸಾವನ್ನಪ್ಪಿದ ಘಟನೆ ತುಮಕೂರಿನ ಬಳಿ ನಡೆದಿದೆ.

ದಾಬಸಪೇಟೆಯ ಎಂ.ಇ ಸೋಲಾರ್ ಪ್ಲಾಂಟ್‌ನಲ್ಲಿ ಕೆಲಸ ಮುಗಿಸಿಕೊಂಡು ಬರುವ ವೇಳೆ ತುಮಕೂರು ತಾಲೂಕಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾಜೇಶ್ (25), ಧನಂಜಯ್ (27), ಧನುಷ್ (23) ಸ್ಥಳದಲ್ಲೇ ಸಾವನ್ನಪ್ಪಿದವರಾಗಿದ್ದಾರೆ. ಸದ್ಯ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸಿಪಿಐ ರಾಮ್ ಪ್ರಸಾದಗ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Terrible Accident Between Container Truck-Bike in Highway Near Tumakuru Three Death

ಐವರು ಸಾವು: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನಲ್ಲಿ ಚಿಕ್ಕಿಂದುವಾಡಿ ಬಳಿಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗಷ್ಟೇ ಈ ಅಪಘಾತ ಸಂಭವಿಸಿತ್ತು.

ಈ ವೇಳೆ ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇವರು ಮಂಡ್ಯ ಮೂಲದವರು ಎಂದು ತಿಳಿದುಬಂದಿತ್ತು. ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ನಡೆಯುತ್ತಿದ್ದು, ಈ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದ ಈ ಅಪಘಾತ ಸಂಭವಿಸಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

8 ಜನ ಸಾವು: ಲಾರಿ ಮತ್ತು ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದ, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಕೆಲವು ತಿಂಗಳುಗಳ ಹಿಂದೆಯಷ್ಟೇ ಧ್ರಪ್ರದೇಶದಲ್ಲಿ ನಡೆದಿತ್ತು.

ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿತ್ತು. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು.

ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ಇನ್ನು ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಈ ಭೀಕರ ಅಪಘಾತ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಅದೇ ರಸ್ತೆಯಲ್ಲಿ ಕಬ್ಬಿಣದ ಲೋಡ್‌ನೊಂದಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡು ವಾಹನಗಳು ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತದ ತೀವ್ರತೆ ಹೆಚ್ಚಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+