ತುಮಕೂರಿನ TGMC ಬ್ಯಾಂಕ್ನಲ್ಲಿ ಭಾರೀ ಅವ್ಯವಹಾರ: ಆಗಿದ್ದೇನು?
ತುಮಕೂರು, ಮೇ 03: ತುಮಕೂರಿನ ಟಿಜಿಎಂಸಿ ಬ್ಯಾಂಕಿನ 12 ಶಾಖೆಗಳ 20ಕ್ಕೂ ಹೆಚ್ಚು ಖಾತೆಗಳಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ದೂರು ದಾಖಲಾಗಿದೆ. ಈ ದೂರಿನ ಮೇರೆಗೆ ತನಿಖೆ ನಡೆಸಿದ ಸಹಕಾರ ಸಂಘಗಳ ಉಪನಿಬಂಧಕರು, ಬ್ಯಾಂಕಿನಲ್ಲಿ ಅವ್ಯವಹಾರವಾಗಿರುವುದು ದೃಢಪಟ್ಟಿದೆ ಎಂದು ವರದಿ ಸಲ್ಲಿಸಿದ್ದಾರೆ.
ಇದರಿಂದ ಬ್ಯಾಂಕಿಗೆ ಅಪಾರ ನಷ್ಟವಾಗಿದ್ದು, ಆಗಿರುವ ನಷ್ಟವನ್ನು ಬ್ಯಾಂಕಿನ ಅಧಿಕಾರಿಗಳು, ಆಡಳಿತ ಮಂಡಳಿ ನಿರ್ದೇಶಕರಿಂದ ವಸೂಲಿ ಮಾಡಬೇಕು ಎಂದು ವರದಿಯಲ್ಲಿ ತಿಳಿಸಿದ್ದು, ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಟಿಜಿಎಂಸಿ ಬ್ಯಾಂಕ್ ಸದಸ್ಯರಾದ ಜಿ.ಎಸ್.ಬಸವರಾಜು ಆಗ್ರಹಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು ಟಿಜಿಎಂಸಿ ಬ್ಯಾಂಕ್ ನ 12 ಶಾಖೆಗಳ 20ಕ್ಕೂ ಹೆಚ್ಚು ಖಾತೆಗಳಿಂದ ನೂರಾರು ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎಂದು ಸಹಕಾರ ಸಂಘಗಳ ನಿಬಂಧಕರು ಹಾಗೂ ಜಂಟಿ ನಿಬಂಧಕರಿಗೆ ದೂರು ಸಲ್ಲಿಸಿ ಸೂಕ್ತ ಕ್ರಮಕ್ಕೆ ಕೋರಿದ್ದೆ. ಆದರೆ ಇವರು ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಬ್ಯಾಂಕ್ ಆಡಳಿತ ಮಂಡಳಿ ಜೊತೆಗೆ ಸಹಕಾರ ಸಂಘಗಳ ಅಧಿಕಾರಿಗಳನ್ನು ಸೇರಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.
ದೂರು ದಾಖಲಿಸಿದ ಲೋಕಾಯುಕ್ತರು, ಟಿಜಿಎಂಸಿ ಬ್ಯಾಂಕ್ ದೂರಿನ ತನಿಖೆ ನಡೆಸಿ ವರದಿ ನೀಡುವಂತೆ ಸಹಕಾರ ಸಂಘದ ನಿಬಂಧಕರಿಗೆ ಆದೇಶ ನೀಡಿದ್ದರು. ಅದರಂತೆ ಸಹಕಾರ ಸಂಘಗಳ ನಿಬಂಧಕರು ಕೋ ಆಪರೇಟಿವ್ ಆಕ್ಟ್ 1959ರ ಸೆಕ್ಷನ್ ಅಡಿಯಲ್ಲಿ ತನಿಖೆ ನಡೆಸಿ ವರದಿ ನೀಡಲು ತುಮಕೂರು ಉಪ ನಿಬಂಧಕರಿಗೆ ಆದೇಶ ಮಾಡಿದ್ದರು ಎಂದು ಜಿ.ಎಸ್.ಬಸವರಾಜು ಹೇಳಿದ್ದಾರೆ.
ಟಿಜಿಎಂಸಿ ಬ್ಯಾಂಕ್ ಅವ್ಯವಹಾರ ಸಂಬಂಧ 20 ಆರೋಪಗಳ ಪೈಕಿ ಒಂದು ಆರೋಪಕ್ಕೆ ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದು, ಉಳಿದ 19 ಅಂಶಗಳ ತನಿಖೆ ನಡೆಸಿ ಲೋಕಾಯುಕ್ತಕ್ಕೆ ಉಪ ನಿಬಂಧಕರು ವರದಿ ಸಲ್ಲಿಸಿದ್ದಾರೆ. ಸಲ್ಲಿಸಿರುವ ವರದಿ ಪ್ರಕಾರ ಜಿ.ಎಸ್.ಬಸವರಾಜು ಟಿಜಿಎಂಸಿ ಬ್ಯಾಂಕ್ ವಿರುದ್ಧ ಮಾಡಿದ್ದ ಎಲ್ಲ ಆರೋಪಗಳು ದೃಢಪಟ್ಟಿದ್ದು, ಬ್ಯಾಕಿನಲ್ಲಿ ಸುಮಾರು 250 ಕೋಟಿ ರೂ.ಗಳಿಗೂ ಹೆಚ್ಚು ಅವ್ಯವಹಾರವಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಇದರಿಂದ ಬ್ಯಾಂಕಿಗೆ ಅಪಾರವಾದ ನಷ್ಟವಾಗಿದ್ದು, ಈ ನಷ್ಟಕ್ಕೆ ಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿಗಳು, ಸಾಲದ ಉಪಸಮಿತಿ ಸಂಪೂರ್ಣ ಜವಾಬ್ದಾರಿಯಾಗಿದೆ. ಆಗಿರುವ ನಷ್ಟವನ್ನು ನಿಯಮಾನುಸಾರ ಬಡ್ಡಿ ಸಮೇತ ಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿಗಳಿಂದ ವಸೂಲಿ ಮಾಡಲು ತಿಳಿಸಲಾಗಿದೆ. ಮುಂದೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 69ರ ಅಡಿಯಲ್ಲಿ ಅಧಿಭಾರ ಪ್ರಕರಣ ದಾಖಲಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಟಿಜಿಎಂಸಿ ಬ್ಯಾಂಕಿನ ಅವ್ಯವಹಾರದ ವಿರುದ್ಧದ ನಿರಂತರ ಕಾನೂನು ಹೋರಾಟಕ್ಕೆ ಈ ಮೂಲಕ ಜಯ ದೊರಕಿದೆ. ಬ್ಯಾಂಕ್ ಅವ್ಯವಹಾರದ ವಿರುದ್ಧ ಆರೋಪ ಮಾಡಿ ದೂರು ಸಲ್ಲಿಸಿದ್ದಕ್ಕೆ ಬ್ಯಾಂಕಿನ ನಿಯಮಾವಳಿ ಮೀರಿ ಸದಸ್ಯತ್ವದಿಂದ ತೆಗೆಯಲಾಗಿತ್ತು. ಸದಸ್ಯತ್ವ ತೆಗೆದಿರುವುದರ ವಿರುದ್ಧ ಹಾಗೂ ಸಹಕಾರ ಸಂಘಗಳ ಉಪನಿಬಂಧಕರು ಮಾಡಿದ್ದ ಆದೇಶವನ್ನು ಮಾನ್ಯ ಮಾಡಿ ಕೆಎಟಿಯನ್ನು ನ್ಯಾಯಾಲಯ ರದ್ದುಪಡಿಸಿ, ಟಿಜಿಎಂಸಿ ಬ್ಯಾಂಕಿನಲ್ಲಿ ಸದಸ್ಯತ್ವ ಮುಂದುವರೆಸಬೇಕೆಂದು ಆದೇಶ ಮಾಡಿದೆ ಎಂದು ದೂರುದಾರ ಜಿ.ಎಸ್.ಬಸವರಾಜು ಹೇಳಿದ್ದಾರೆ. ಒಟ್ಟಾರೆಯಾಗಿ ಸದ್ಯ ಟಿಜಿಎಂಸಿ ಬ್ಯಾಂಕ್ ಮೇಲೆ ಬಂದಿರುವ ಆರೋಪದ ಕುರಿತಂತೆ ಸಂಬಂಧಿಸಿದವರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications