ಪೋಷಕರು, ಅಜ್ಜಿಯ ಸಾವಿನ ಖಿನ್ನತೆ? ಮೂವರು ಸಹೋದರಿಯರು ಸಾವಿಗೆ ಶರಣು
ತುಮಕೂರು, ಜನವರಿ 19: ಪೋಷಕರ ಸಾವಿನಿಂದ ಖಿನ್ನತೆಗೊಳಗಾಗಿದ್ದ ಮೂವರು ಸಹೋದರಿಯರು ಸಾವಿಗೆ ಶರಣಾಗಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ.
ರಂಜಿತಾ(24), ಬಿಂದು(21) ಹಾಗೂ ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಮೃತದೇಹ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ 9 ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಕೊಳೆತ ವಾಸನೆ ಬಂದ ಬಳಿಕ ಗುರುವಾರ ಪ್ರಕರಣ ಬೆಳಕಿಗೆ ಬಂದಿದೆ.
ಮೃತ ಮೂವರು ಸಹೋದರಿಯರು ಹಲವು ವರ್ಷಗಳ ಹಿಂದೆಯೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದರು. ತಂದೆ ತಾಯಿಯನ್ನು ಕಳೆದುಕೊಂಡ ಮೂವರು ಮಕ್ಕಳ ಪಾಲಿಗೆ ಅಜ್ಜಿಯೇ ಆಸರೆಯಾಗಿದ್ದರು. ಪೋಷಕರ ಅಗಲಿಕೆಯ ಬಳಿಕ ಅಜ್ಜಿಯ ಆಶ್ರಯದಲ್ಲೇ ಮೂವರು ಬೆಳೆದಿದ್ದರು. ಆದರೆ ದುರಾದೃಷ್ಟವಶಾತ್ ಜೊತೆಯಾಗಿದ್ದ ಅಜ್ಜಿಯೂ ಇತ್ತೀಚಿಗೆ ಮರಣ ಹೊಂದಿದ್ದರು. ಆಸರೆಯಾಗಿದ್ದ ಅಜ್ಜಿಯನ್ನೂ ಕಳೆದುಕೊಂಡು ಅನಾಥರಾದ ಮೂವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಾನಸಿಕ ಖಿನ್ನತೆಯಿಂದಲೇ ಮೂವರು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಎಎಸ್ಪಿ ಸಿದ್ದಾರ್ಥ್ ಗೋಯೆಲ್, ಸಿಪಿಐ ನಿರ್ಮಲಾ, ಪಿಎಸ್ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಜಿಲ್ಲೆ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications