ತಿಪಟೂರು ನಗರ ಅಭಿವೃದ್ಧಿಗೆ ಕೈ ಜೋಡಿಸಿದ ರೋಟರಿ ಬೆಂಗಳೂರು ಗುಲ್ಮೊಹರ್
ತಿಪಟೂರು, ಜುಲೈ 25 : ತುಮಕೂರು ಜಿಲ್ಲೆಯಲ್ಲಿ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಿಪಟೂರು ನಗರ, ರೋಟರಿ ಬೆಂಗಳೂರು ಗುಲ್ಮೊಹರ್ ಹಮ್ಮಿಕೊಳ್ಳಲು ಉದ್ದೇಶಿಸಿರುವ ಸಾಮಾಜಿಕ ಚಟುವಟಿಕೆಗಳ ಲಾಭವನ್ನು ಪಡೆಯುವ ಪ್ರಮುಖ ನಗರವಾಗಿದೆ. ಈ ಚಟುವಟಿಕೆಗಳ ಮೂಲಕ ರೋಟರಿ ಬೆಂಗಳೂರು ಗುಲ್ಮೊಹರ್, ಸ್ಥಳೀಯ ಸಮುದಾಯಗಳಿಗೆ ಪ್ರಯೋಜನವಾಗುವ ಸುಸ್ಥಿರ ಯೋಜನೆಗಳನ್ನು ಮರಳಿ ಸಮಾಜಕ್ಕೆ ನೀಡಲಿದೆ.
ತಿಪಟೂರಿನಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳ ಬಗ್ಗೆ ವಿವರ ನೀಡಿದ ರೊಟೇರಿಯನ್ ಪಿಎಚ್ಎಫ್ ಮುರಳೀಕೃಷ್ಣನ್ "ರೋಟರಿ ಬೆಂಗಳೂರು ಗುಲ್ಮೊಹರ್ ತಿಪಟೂರು ಹಾಗೂ ಸುತ್ತಮುತ್ತಲಿನ ಎಂಟು ಸರ್ಕಾರಿ ಶಾಲೆಗಳನ್ನು ಮೂಲಸೌಕರ್ಯ ಅಭಿವೃಧ್ಧಿಗಾಗಿ ಆಯ್ಕೆ ಮಾಡಿಕೊಳ್ಳಲಿದೆ. ಇನ್ನೊಂದು ಮೆಗಾ ಸಾರ್ವಜನಿಕ- ಖಾಸಗಿ ಪಾಲುದಾರಿಕೆ ಯೋಜನೆಯಲ್ಲಿ ತಿಪಟೂರಿನ ಎರಡು ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗುತ್ತದೆ ಹಾಗೂ ಸುಮಾರು 36 ಎಕರೆ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ಪರಿಸರವನ್ನು ಸುಧಾರಿಸುವ ಉದ್ದೇಶ ಹೊಂದಿದೆ. ಇದರ ಜತೆಗೆ ತಿಪಟೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಾ ಸಾಧನ ಸಲಕರಣೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ" ಎಂದು ವಿವರಿಸಿದರು.
ರೊಟೇರಿಯನ್ ಪಿಎಚ್ಎಫ್ ಮುರಳೀಕೃಷ್ಣನ್ ಮತ್ತಷ್ಟು ವಿವರ ನೀಡಿ, "ರೋಟರಿ ಬೆಂಗಳೂರು ಗುಲ್ಮೊಹರ್ ತಿಪಟೂರಿನ ಕೆ.ಬಿ.ಕ್ರಾಸ್ ಬಳಿ ಅರಣ್ಯ ಅಭಿವೃದ್ಧಿ ಯೋಜನೆಯನ್ನು ಕೂಡಾ ಉದ್ದೇಶಿಸಿದೆ. ಅಂತೆಯೇ 12 ರಿಂದ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗಾಗಿ ನಾಲ್ಕು ಇಂಟರ್ಯಾಕ್ಟ್ ಕ್ಲಬ್ಗಳನ್ನು ಕೂಡಾ ಆರಂಭಿಸಲು ಉದ್ದೇಶಿಸಲಾಗಿದೆ. ಇದು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ನೆರವಾಗಲಿದೆ,'' ಎಂದು ಬಣ್ಣಿಸಿದರು.

ರೊಟೇರಿಯನ್ ಸುಧಾರಾಣಿ ಮಾತನಾಡಿ, ''ಈ ಮಿಷಿನ್ನ ಅಂಗವಾಗಿ ಸಹ ರೊಟೇರಿಯನ್ನರು ಸಮಾಜಕ್ಕೆ ಮರಳಿ ನೀಡುವ ನಿಟ್ಟಿನಲ್ಲಿ ಈ ಉಪಕ್ರಮಗಳಿಗೆ ದೇಣಿಗೆ ನೀಡಿದ್ದಾರೆ. ಇದು ಎಲ್ಲ ಅರ್ಹ ಯೋಜನೆಗಳಿಗೆ ಸಮಪ್ರಮಾಣದ ಜಾಗರಿಕ ಅನುದಾನಕ್ಕೆ ಪೂರಕವಾಗಿರುತ್ತದೆ. ರೋಟರಿ ಬೆಂಗಳೂರು ಗುಲ್ಮೊಹರ್ ಈ ಯೋಜನೆಗಳ ಅನುಷ್ಠಾನಕ್ಕಾಗಿ ಕಾಲಮಿತಿಯಲ್ಲಿ ನಿಧಿ ಕ್ರೋಢೀಕರಿಸಲು ಉದ್ದೇಶಿಸಿದೆ,'' ಎಂದು ಹೇಳಿದರು.
100 ವರ್ಷ ಹಳೆಯ ಶಾಲೆಯನ್ನು ದತ್ತು ಪಡೆಯುವ ಸಂಬಂಧ ಕೂಡಾ ಕರ್ನಾಟಕ ಸರ್ಕಾರದ ಜತೆ ಒಪ್ಪಂದ ಮಾಡಿಕೊಳ್ಳಲಿದೆ. ಇದರಡಿ ಪ್ರಮುಖ ರಾಚನಿಕ ಪುನರುಜ್ಜೀವನವನ್ನು ನಾಲ್ಕು ಲಕ್ಷ ರೂಪಾಯಿಗಳ ಸ್ವಯಂ ನೆರವು ನಿಧಿಯೊಂದಿಗೆ ಕೈಗೊಳ್ಳಲಿದೆ. ಇದರ ಜತೆಗೆ ರೋಟರಿ ಬೆಂಗಳೂರು ಗುಲ್ಮೊಹರ್ ವತಿಯಿಂದ ತಿಪಟೂರಿನಲ್ಲಿರುವ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜು ಪುನರ್ ನವೀಕರಣ ಯೋಜನೆಯನ್ನೂ ಕೈಗೆತ್ತಿಕೊಂಡಿದ್ದು, ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications