ಪಾವಗಡದ ಗುಜ್ಜುನಡು ಪಂಚಾಯಿತಿಯ ಜನತಾ ಕಾಲೋನಿ ಜನರ ಗೋಳಿನ ಕೂಗು!
ತುಮಕೂರು, ಜು1: ಸ್ವಾಮಿ ನಮಗೆ ಚರಂಡಿಗಳಿಲ್ಲ, ವಿಪರೀತ ಸೊಳ್ಳೆಗಳ ಕಾಟ, ವಿದ್ಯುತ್ ಕಂಬಗಳಿಲ್ಲ ಹೀಗೆ ಸಾಲು ಸಾಲು ಕುಂದು ಕೊರತೆಗಳನ್ನು ನೊಂದ ಜನರು ಅಲವತ್ತುಕೊಂಡ ದೃಶ್ಯ ಕಂಡು ಬಂದಿದ್ದು ಪಾವಗಡ ತಾಲ್ಲೂಕಿನ ಗುಜ್ಜುನಡು ಪಂಚಾಯಿತಿ ವ್ಯಾಪ್ತಿಯ ಟಿಎನ್ ಬೆಟ್ಟದ ಜನತಾ ಕಾಲೋನಿಯ ಜನರು.
ಹೌದು, ಸುಮಾರು 180 ಮನೆಗಳಿರುವ ಇಲ್ಲಿ ಅರ್ಧದಷ್ಟು ಕಾಲೋನಿಯ ಭಾಗದಲ್ಲಿ ಚರಂಡಿಗಳಿಲ್ಲದೆ ಮನೆಯ ಬಚ್ಚಲು ಗುಂಡಿ ನೀರು ಸೀದ ಮನೆಗಳ ಮುಂದಿನ ರಸ್ತೆಗಳಿಗೆ ಬಂದು ಕೊಳಚೆಯಾಗಿ ಮಾರ್ಪಡುತ್ತಿದೆ. ಪರಿಣಾಮ ಇಲ್ಲಿನ ಜನರು ಪ್ರತಿದಿನವೂ ದುರ್ವಾಸನೆ, ವಿಪರೀತ ಸೊಳ್ಳೆಗಳ ಕಾಟದಿಂದ ಬೇಸತ್ತಿದ್ದಾರೆ. ಇನ್ನು ರಾತ್ರಿ ವೇಳೆಯಲ್ಲಂತೂ ಸೊಳ್ಳೆಗಳ ಸಂಗೀತಕ್ಕೆ ಮನೆ ಬಿಟ್ಟು ಹೊರ ಬರಲು ಸಾಧ್ಯವಾಗದೆ ಇರುವ ದೃಶ್ಯ ಸಾಮಾನ್ಯವಾಗಿದೆ ಎಂದು ಅಲವತ್ತುಕೊಂಡಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸಲು ಕಾಲೋನಿ ಜನರ ಆಗ್ರಹ
ಈ ಜನರು ಹೇಳಿ ಕೇಳಿ ಶ್ರೀಮಂತರಲ್ಲ, ದಿನ ಬೆಳಗಾದರೆ ಕೂಲಿ ನಾಲಿ ಮಾಡಲು ಓಡೋ ಜನರು ಒಂದಿಲ್ಲ ಒಂದು ರೀತಿಯ ಮೂಲಭೂತ ಸಮಸ್ಯೆಗಳಿಂದ ಇಲ್ಲಿ ಬಳಲುತ್ತಿದ್ದಾರೆ. ಅದಕ್ಕೆ ಮತ್ತೊಂದು ನಿದರ್ಶನವೆಂದರೆ ಸುಮಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸೊ ವಿದ್ಯುತ್ ಕಂಬಗಳೆ ಇಲ್ಲದೆ ಸುಮಾರು 200 ಮೀಟರ್ ದೂರದಿಂದ ವಿದ್ಯುತ್ ಸಂಪರ್ಕ ತೆಗೆದುಕೊಂಡಿದ್ದಾರೆ. ಮನೆಗಳ ಮುಂಭಾಗದಲ್ಲಿ ಹಾದು ಹೋದ ವಿದ್ಯುತ್ ವೈರ್ ಗಳು ಪೂರ್ಣ ಪ್ರಮಾಣದಲ್ಲಿ ನೆಲಕ್ಕೆ ಜಗ್ಗಿ ನಿಂತಿವೆ, ಯಾವಾಗ ವಿದ್ಯುತ್ ವೈರ್ ಕಟ್ ಆಗಿ ಕೆಳಗೆ ಬೀಳುತ್ತದೆಯೋ ಎಂಬ ಆತಂಕದಲ್ಲಿ ಸ್ಥಳೀಯರಿದ್ದಾರೆ. ಜೊತೆಗೆ ಹಲವು ಬಾರಿ ವೈರ್ ಕಟ್ ಆಗಿ ಬಿದ್ದಿವೆ ಎಂದು ಮಹಿಳೆಯರು ಗೋಳಿಡ್ತಾರೆ.

ಕಣ್ಮುಚ್ಚಿ ಕುಳಿತಿರುವ ಗುಜ್ಜುನಡು ಪಂಚಾಯಿತಿ ಅಧಿಕಾರಿಗಳು
ಚರಂಡಿ ಮಾಡಿಸಬೇಕು ಇಲ್ಲ ನೀರನ್ನು ಇಂಗಿಸಲು ಬಚ್ಚಲು ಗುಂಡಿ ತೆಗೆಸಿ ಅನುಕೂಲ ಮಾಡಬೇಕಾದ ಗುಜ್ಜುನಡು ಪಂಚಾಯಿತಿ ಅಧಿಕಾರಿಗಳು ಇದ್ದಾರೆಯೋ ಇಲ್ಲ ಕಣ್ಮುಚ್ಚಿ ಕುಳಿತಿದ್ದಾರೆನೋ ಅನ್ನಿಸುತ್ತಿದೆ. ಗುಡಿಸಲು ಮುಕ್ತ ಗ್ರಾಮ ಮಾಡುವ ಸರ್ಕಾರದ ನಿಲುವಿನ ನಡುವೆ ಈ ಕಾಲೋನಿಯ ಕೆಲವರಿಗೆ ನಿವೇಶನಗಳಲ್ಲಿದೆ ಗುಡಿಸಲುಗಳಲ್ಲಿ ವಾಸವಾಗಿದ್ದಾರೆ.

ಜನರ ನಡುವೆ ವೈಮನಸ್ಸಿನ ವಾತಾವರಣ
ಏನೇ ಇರಲಿ ಟಿ.ಎನ್ ಬೆಟ್ಟದ ಜನತಾ ಕಾಲೋನಿ ಜನರಿಗೆ ಸಮರ್ಪಕವಾಗಿ ನೀರು ಬರ್ತಿಲ್ಲ ಮತ್ತು ರಸ್ತೆಗೆ ಕೊಳಚೆ ನೀರು ಬರ್ತಿವೆ, ವಿದ್ಯುತ್ ಕಂಬಗಳಿಲ್ಲ ಎಂದು ಇಲ್ಲಿನ ಜನರ ನಡುವೆ ವೈಮನಸ್ಸಿನ ವಾತಾವರಣ ಶುರುವಾಗಿದೆ, ಬಚ್ಚಲು ನೀರಿನ ಸಮಸ್ಯೆ ಜನರ ನಡುವಿನ ಜಗಳ ಇನ್ನಷ್ಟು ತಾರಕಕ್ಕೇರುವ ಮುನ್ನ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಗುಜ್ಜುನಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚೆತ್ತು ಇಲ್ಲಿನ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವ ಅನಿವಾರ್ಯತೆಯಿದೆ.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications