ತುಮಕೂರು: ಕರಡಿ ದಾಳಿಗೆ ಬಲಿಯಾದ ರೈತ
ತುಮಕೂರು, ನ. 21 : ಜನರೆಲ್ಲ ನೋಡುತ್ತಲೇ ಇದ್ದರು, ಆತನ ಆರ್ತನಾದ ಮುಗಿಲು ಮುಟ್ಟಿತ್ತು. ಭಯಾನಕ ಕರಡಿ ದಾಳಿಗೆ ತತ್ತರಿಸಿದ್ದವ ಜೀವ ಭಯದಿಂದ ನಡುಗುತ್ತಿದ್ದ. ಕೆಳಕ್ಕೆ ಬಿದ್ದವನ ಕುತ್ತಿಗೆಯನ್ನು ಮನಸೋ ಇಚ್ಛೆ ಕಚ್ಚುತ್ತಿದ್ದ ಕರಡಿ ಬಳಿ ಯಾರೂ ಧಾವಿಸಲಿಲ್ಲ. ನೋಡು ನೋಡುತ್ತಿದ್ದಂತೆಯೇ ಆತನ ಪ್ರಾಣ ಪಕ್ಷಿ ಹಾರಿ ಹೋಯಿತು.
ಇದು ನಡೆದದ್ದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ. ಮೇವು ತರಲು ಕಾಡಿಗೆ ತೆರಳಿದ್ದ ರೈತರ ಮೇಲೆ ದಾಳಿ ಮಾಡಿದ ನರಭಕ್ಷಕ ಕರಡಿ ಸೋಮಣ್ಣ ಎಂಬ ರೈತನನ್ನು ಬಲಿ ಪಡೆಯಿತು. ನಂತರ ಕರಡಿಯನ್ನು ಗುಂಡಿಟ್ಟು ಕೊಲ್ಲಲಾಯಿತಾದರೂ ಘಟನೆಯಲ್ಲಿ ಗಂಭೀರ ಗಾಯಗೊಂಡ ತಿಮ್ಮಣ್ಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.[ದೆಹಲಿ ಝೂನಲ್ಲಿ ಶಾಲಾಬಾಲಕನನ್ನು ಕೊಂದ ಬಿಳಿಹುಲಿ]

ಮೇವು ತರಲು ಕಾಡಿಗೆ ಹೋಗಿದ್ದ ರೈತರನ್ನು ಪೊದೆಯಲ್ಲಿ ಅವಿತುಕೊಂಡಿದ್ದ ಕರಡಿ ಗಮನಿಸುತ್ತಿತ್ತು. ಇದಕ್ಕಿದ್ದಂತೆ ಸೋಮಣ್ಣನ ಮೇಲೆ ಕರಡಿ ದಾಳಿ ಮಾಡಿದೆ. ಈ ವೇಳೆ ಎಲ್ಲರೂ ಭಯಭೀತರಾಗಿ ಓಡಿದ್ದಾರೆ. ಮತ್ತೆ ಕರಡಿ ಪೊದೆಯ ಹಿಂದೆ ಮರೆಯಾಗಿದೆ.
ನಂತರ ಕೆಲ ಹೊತ್ತಿನ ನಂತರ ಕರಡಿ ಮತ್ತೆ ಸೋಮಣ್ಣನ ಮೇಲೆ ದಾಳಿ ಮಾಡಿದೆ. ಕೈಗೆ ಸಿಕ್ಕ ಸೋಮಣ್ಣನ ಪ್ರಾಣ ತೆಗೆಯುವವರೆಗೆ ಕರಡಿ ಹಿಂದೆ ಸರಿದಿಲ್ಲ. ಸುಮಾರು ಸಾವಿರಕ್ಕೂ ಅಧಿಕ ಜನ ಜಮಾಯಿಸಿದರೂ ಕರಡಿ ಸೋಮಣ್ಣನನ್ನು ಬಿಟ್ಟು ಕದಲಲಿಲ್ಲ.[ಚಿಕ್ಕಮಗಳೂರು : ಮಹಿಳೆ ಕೊಂದಿದ್ದ ಹುಲಿ ಸೆರೆ]
ಇನ್ನೂ ಎರಡು ಕರಡಿಗಳು ಮಧುಗಿರಿಯ ಹೊಲಗಳಲ್ಲಿ ಓಡಾಡಿಕೊಂಡಿದ್ದು ಜನರು ಭಯದಿಂದ ದಿನ ದೂಡುವಂತಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅಲ್ಲದೇ ಕರಡಿ ದಾಳಿಯ ದೃಶ್ಯವನ್ನು ಕೆಲವರು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications