ತುಮಕೂರು-ಚಿತ್ರದುರ್ಗ-ದಾವಣಗೆರೆ ಹಾಗೂ ತುಮಕೂರು-ರಾಯದುರ್ಗ ನೂತನ ರೈಲು ಮಾರ್ಗ ಉದ್ಘಾಟನೆ ಬಗ್ಗೆ ಬಿಗ್ ಅಪ್ಡೇಟ್
New Railway Line: ರಾಜ್ಯದಲ್ಲಿ ರೈಲ್ವೆ ಜಾಲ ವಿಸ್ತರಣೆ ಆಗುತ್ತಲೇ ಇದೆ. ಇನ್ನು ಇದೀಗ ಬಹುನಿರೀಕ್ಷಿತ ತುಮಕೂರು - ಚಿತ್ರದುರ್ಗ - ದಾವಣಗೆರೆ ಹಾಗೂ ತುಮಕೂರು - ರಾಯದುರ್ಗ ನೂತನ ರೈಲು ಮಾರ್ಗ ಯಾವಾಗ ಉದ್ಘಾಟನೆ ಆಗಲಿದೆ ಎನ್ನುವ ಪ್ರಶ್ನೆ ಬಹುತೇಕ ಮಂದಿ ತಲೆಯಲ್ಲಿದೆ. ಈ ಬಗ್ಗೆ ಸಚಿವ ವಿ.ಸೋಮಣ್ಣ ಅವರು ಮಹತ್ವದ ಅಪ್ಡೇಟ್ವೊಂದನ್ನು ನೀಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ವಿವರ.
ಇದೀಗ ರಾಜ್ಯದಲ್ಲಿ ರೈಲ್ವೆ ಮಾರ್ಗ ವಿಸ್ತರಣೆಯಲ್ಲಿ ಬಹುದೊಡ್ಡ ಕ್ರಾಂತಿಯೇ ಆಗುತ್ತಿದೆ. ಇನ್ನು ಬಹುನಿರೀಕ್ಷಿತ ನೂತನ ತುಮಕೂರು - ಚಿತ್ರದುರ್ಗ - ದಾವಣಗೆರೆ ನೂತನ ರೈಲು ಮಾರ್ಗದ ತಿಮ್ಮರಾಜನಹಳ್ಳಿ-ಊರುಕೆರೆ ಭಾಗದ ಕಾಮಗಾರಿಯನ್ನ ವಿ.ಸೋಮಣ್ಣ ಅವರು ಪರಿಶೀಲನೆ ನಡೆಸಿದರು. ಟ್ರಾಲಿಯಲ್ಲಿ ಕುಳಿತುಕೊಂಡು ಈ ಮಾರ್ಗದ ಹಳಿಗಳನ್ನು ತಪಾಸಣೆ ನಡೆಸಿದರು. ಬಳಿಕ ಈ ಮಾರ್ಗ ಯಾವಾಗ ಪೂರ್ಣಗೊಂಡು ಉದ್ಘಾಟನೆ ಆಗಲಿದೆ ಎನ್ನುವ ಮಹತ್ವದ ಅಪ್ಡೇಟ್ ನೀಡಿದ್ದಾರೆ.

ಈ ಬಗ್ಗೆ ಮಾತನಡಿದ ಅವರು ತುಮಕೂರು-ದಾವಣಗೆರೆ ಹಾಗೂ ತುಮಕೂರು - ರಾಯದುರ್ಗ ಯೋಜನೆಗಳು 2027ರ ವೇಳೆಗೆ ಲೋಕಾರ್ಪಣೆ ಆಗಲಿದೆ ಎಂದು ತಿಳಿಸಿದರು. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಈ ಮೂಲಕ ರೈಲ್ವೆ ಯೋಜನೆಗಳನ್ನು ಬೇಗನೇ ಪೂರ್ಣಗೊಳಿಸಲು ಕಾಮಗಾರಿಗೆ ವೇಗ ನೀಡಿರುವುದಾಗಿ ಹೇಳಿದರು.
ಈ ನೂತನ ರೈಲು ಮಾರ್ಗ ಯೋಜನೆಗಳು ಹಿಂದೆ ಹಳ್ಳ ಹಿಡಿದಿದ್ದವು. ಆದರೆ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭ ಮಾಡಲಾಗಿದೆ. ತಿಮ್ಮರಾಜನಹಳ್ಳಿ - ಊರುಕೆರೆ 13 ಕಿಲೋ ಮೀಟರ್ ಮಾರ್ಗದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಇದಕ್ಕೆ 120 ಕೋಟಿ ರೂಪಾಯಿ ವೆಚ್ಚ ಆಗಿದೆ. 193 ಹೆಕ್ಟೇರ್ ಭೂಸ್ವಾಧೀನವನ್ನ ಪೂರ್ಣಗೊಳಿಸಿ ಶೀಘ್ರದಲ್ಲೇ ಕಾಮಗಾರಿಯನ್ನು ಮುಕ್ತಾಯ ಮಾಡಲಾಗುವುದು ಎಂದು ಭರವಸೆ ನೀಡಿದರು.
ವಿ.ಸೋಮಣ್ಣ ಅವರು ರೈಲ್ವೆ ಖಾತೆ ಅಲಂಕರಿದಾಗಿನಿಂದ ರಾಜ್ಯದ ರೈಲ್ವೆ ವಿಭಾಗದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಮಾರ್ಗದ ಕಾಮಗಾರಿ ಯಾವಾಗ ಪೂರ್ಣಗೊಂಡು ಸೇವೆಗೆ ಲಭ್ಯವಾಗಲಿದೆ ಎಂದು ಜನರು ಕಾದು ಕುಳಿತಿದ್ದರು.
ಈ ಹಿಂದೆ ಈ ಮಾರ್ಗದ ಕಾಮಗಾರಿ ಆಮೆಗತಿಯಲ್ಲಿ ಸಾಗಿತ್ತು. ಆದರೆ, ವಿ.ಸೋಮಣ್ಣ ಇದರ ಬಗ್ಗೆ ಹೆಚ್ಚು ಗಮನಹರಿಸಿ ಕಾಮಗಾರಿಗೆ ವೇಗ ನೀಡಿದ್ದಾರೆ. ಅಲ್ಲದೆ, 2027ರ ವೇಳೆಗೆ ಲೋಕಾರ್ಪಣೆ ಆಗಲಿದೆ ಅಂತಲೂ ಭರವಸೆ ನೀಡಿದ್ದಾರೆ. ಒಂದು ವೇಳೆ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭ ಆದರೆ, ತುಂಬಾ ಜನರಿಗೆ ಭಾರೀ ಅನುಕೂಲ ಆದಂತಾಗಲಿದೆ.
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದಿಂದ ತುಂಬಾ ಪ್ರಯೋಜನೆಗಳಿವೆ. ಪ್ರಯಾಣ ಅವಧಿ ಕಡಿಮೆ ಆಗಲಿದ್ದು, ಇದರಿಂದ ಪ್ರಯಾಣಿಕರಿಗೆ ಸಮಯ ಉಳಿದಂತಾಗಲಿದೆ. ಆದ್ದರಿಂದ ಈ ರೈಲು ಮಾರ್ಗ ಯಾವಾಗ ಪೂರ್ಣಗೊಂಡು ಪ್ರಯಾಣಕ್ಕೆ ಮುಕ್ತ ಆಗಲಿದೆಯೋ ಎಂದು ಪ್ರಯಾಣಿಕರು ಕಾತರದಲ್ಲಿದ್ದಾರೆ.
ಈ ರೈಲು ಮಾರ್ಗದ ಬಗ್ಗೆ ವಿ.ಸೋಮಣ್ಣ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದರು. 18 ವರ್ಷಗಳಿಂದ ಬಾಕಿ ಉಳಿದಿದ್ದ ಬಹುನಿರೀಕ್ಷಿತ ತುಮಕೂರು-ದಾವಣಗೆರೆ ರೈಲು ಮಾರ್ಗ ಯೋಜನೆ ಕಾಮಗಾರಿಗೆ ಇದೀಗ ವೇಗ ಸಿಕ್ಕಿದೆ. ಭೂಮಿ ಸ್ವಾಧೀನ ಪ್ರಕ್ರಿಯೆ ಮುಗಿಯುತ್ತಾ ಬಂದಿದೆ ಎಂದು ಮಾಹಿತಿ ನೀಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications