ಸಿದ್ದಗಂಗಾ ಮಠದ ಬಳಿ ತುರ್ತಾಗಿ ಹತ್ತು ಹೆಲಿಪ್ಯಾಡ್ ನಿರ್ಮಾಣ
ತುಮಕೂರು, ಜ 17: ಸಿದ್ದಗಂಗಾ ಮಠದ ಆಸುಪಾಸಿನಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸುವ ಕಾರ್ಯ ಭರದಿಂದ ಸಾಗುತ್ತಿದೆ. ತುಮಕೂರು ನಗರದ ಹತ್ತಿರ ನಾಲ್ಕು ಜಾಗಗಳಲ್ಲಿ ಹೆಲಿಪ್ಯಾಡ್ ನಿರ್ಮಾಣಗೊಳ್ಳುತ್ತಿದೆ.
ನಡೆದಾಡುವ ದೇವರು, ಶತಾಯುಷಿ ಡಾ. ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ನಿರೀಕ್ಷಿತ ಪ್ರಮಾಣದ ಚೇತರಿಕೆ ಕಾಣದೇ ಇರುವ ಹಿನ್ನಲೆಯಲ್ಲಿ, ಮಠದತ್ತ ಭಕ್ತರು, ವಿಐಪಿಗಳ ದಂಡೇ ಹರಿದು ಬರಲಾರಂಭಿಸಿದೆ.
ಚಿಕಿತ್ಸೆಗೆ ಶ್ರೀಗಳ ದೇಹ ನಿರೀಕ್ಷಿಸಿದಷ್ಟು ಸ್ಪಂದನೆ ನೀಡುತ್ತಿಲ್ಲ. ವೈದ್ಯಕೀಯವಾಗಿ ನಾವು ಏನನ್ನೂ ಹೇಳುವ ಸ್ಥಿತಿಯಲ್ಲಿಲ್ಲ. ಎಲ್ಲವನ್ನೂ ಕಾಲವೇ ನಿರ್ಧರಿಸಬೇಕು ಎಂದು ಅವರನ್ನು ನೋಡಿಕೊಳ್ಳುತ್ತಿರುವ ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡ ಹತಾಶೆ ವ್ಯಕ್ತ ಪಡಿಸಿದೆ.

Z ಪ್ಲಸ್ ಸೆಕ್ಯೂರಿಟಿ ಇರುವ ಗಣ್ಯರು ಮಠದತ್ತ ಆಗಮಿಸುವ ಸಾಧ್ಯತೆಯಿರುವುದರಿಂದ, ಒಂದು ವೇಳೆ ಎಲ್ಲರೂ ಶ್ರೀಗಳನ್ನು ನೋಡಲು ಏಕಕಾಲದಲ್ಲಿ ಆಗಮಿಸಿದರೆ, ಯಾವುದೇ ಅನಾನುಕೂಲ ಆಗದೇ ಇರಲಿ ಎನ್ನುವ ಕಾರಣಕ್ಕಾಗಿ, ಮುಂಜಾಗ್ರತಾ ಕ್ರಮವಾಗಿ ಹತ್ತು ಹೆಲಿಪ್ಯಾಡ್ ನಿರ್ಮಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಪಂಡಿತನಹಳ್ಳಿ ಗೇಟ್ ಬಳಿ 3, ಮಹಾತ್ಮಗಾಂಧಿ ಸ್ಟೇಡಿಯಂ ಬಳಿ 1, ತುಮಕೂರು ವಿವಿ ಆವರಣದಲ್ಲಿ 4, ಎಸ್ಐಟಿ ಕಾಲೇಜಿನಲ್ಲಿ 2 ಹೀಗೆ ಒಟ್ಟು 10 ಹೆಲಿಪ್ಯಾಡ್ಗಳನ್ನ ನಿರ್ಮಾಣ ಮಾಡಲಾಗುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications