ತುಮಕೂರು: ಸ್ವಂತ ಹಣವನ್ನು ಜನರಿಗಾಗಿ ಮೀಸಲಿಟ್ಟು ರಸ್ತೆ ಸರಿ ಮಾಡಿಸಿದ ರೈತ
ತುಮಕೂರು, ನ.16: ಇಂದಿನ ಜನಪ್ರತಿನಿಧಿಗಳು ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವುದು ಅಷ್ಟರಲ್ಲೇ ಇದೆ. ಯಾವುದೇ ಜನಪ್ರತಿನಿಧಿ ತಾನು ಕೊಟ್ಟ ಭರವಸೆಯ ಅರ್ಧದಷ್ಟು ಪೂರ್ತಿ ಮಾಡುವುದು ಕೂಡ ಕನಸಾಗಿದೆ. ಇಂಥ ಸಮಯದಲ್ಲಿ ತಾನು ಕೊಟ್ಟ ಭರವಸೆಯನ್ನು ಈಡೇರಿಸಲು ಕೊಬ್ಬರಿ ಮಾರಿ ಜನರಿಗಾಗಿ ರಸ್ತೆ ನಿರ್ಮಿಸಿದ್ದಾರೆ ರೈತನಾಗಿರುವ ಗ್ರಾಮ ಪಂಚಾಯಿತಿ ಸದಸ್ಯ.
ಇದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯಲ್ಲಿ ನಡೆದಿರುವ ಘಟನೆ. ಇಲ್ಲಿನ ರೈತ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ಅರೇಹಳ್ಳಿ ನಂಜೇಗೌಡ ನಟರಾಜು ಎಂಬುವವರು ತಾನು ದುಡಿದ ಹಣದಿಂದ 1.5 ಲಕ್ಷ ರೂಪಾಯಿ ವ್ಯಯಿಸಿ ಗ್ರಾಮದ ರಸ್ತೆಯನ್ನು ನವೀಕರಣಗೊಳಿಸಿದ್ದಾರೆ.
ಎರಡು ದಶಕಗಳಿಂದ ಚುನಾಯಿತ ಪ್ರತಿನಿಧಿಗಳು ರಸ್ತೆಯನ್ನು ದುರಸ್ತಿ ಮಾಡದ ಕಾರಣ ಇತ್ತಿಚೇಗೆ ಶಿವನೇಹಳ್ಳಿ ರಸ್ತೆಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕಂದಾಯ ಇಲಾಖೆಯ ಗುಮಾಸ್ತರಾಗಿದ್ದ ನಾರಾಯಣಪ್ಪ ಎಂಬುವವರು ಸಾವನ್ನಪ್ಪಿದ್ದರು. ಇದನ್ನು ಕಂಡು ನಟರಾಜು ರಸ್ತೆ ದುರಸ್ತಿಗೆ ಇಳಿದಿದ್ದಾರೆ.

ತಮ್ಮ ತೋಟದಲ್ಲಿ ಬೆಳೆದ ಕೊಬ್ಬರಿಯನ್ನು ಮಾರಿ ಬಂದ ಹಣದಲ್ಲಿ ಗ್ರಾಮದ ಸುಮಾರು 400 ಮೀಟರ್ ಉದ್ದದ ರಸ್ತೆಯಲ್ಲಿ ಇದ್ದ ಗುಂಡಿಗಳನ್ನು ಮುಚ್ಚಿಸಿದ್ದಾರೆ.
ಈ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಒಂದು ಮತದಿಂದ ಸೋಲು ಕಂಡಿದ್ದ ನಟರಾಜು ನ್ಯಾಯಾಲಯದ ಮೊರೆ ಹೋಗಿದ್ದರು. ಬಳಿಕ ನ್ಯಾಯಾಲಯ ಅವರ ಗೆಲುವನ್ನು ಘೋಷಿಸಿದೆ. ತಾನು ಇರುವುದು ಜನಸೇವೆ ಮಾಡಲು ಎಂದು ಹೇಳಿಕೊಳ್ಳುವ ನಟರಾಜು, ಮುಂದೆ ತಾಲೂಕು, ಜಿಲ್ಲಾ ಪಂಚಾಯಿತಿಗಳ ಮೇಲೆ ಕಣ್ಣಿಟ್ಟಿದ್ದಾರೆ.
ನಟರಾಜು ಅವರಿಗೆ ತಾಲ್ಲೂಕು ಪಂಚಾಯಿತಿ ಅಥವಾ ಜಿಲ್ಲಾ ಪಂಚಾಯಿತಿಗೆ ಬಡ್ತಿ ನೀಡುವಂತೆ ಗ್ರಾಮದ ನಿವಾಸಿಗಳು ಒತ್ತಾಯಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ ನಟರಾಜು ಅವರ ಜೆಡಿಎಸ್ ಪಕ್ಷದೊಂದಿಗೆ ಲಾಬಿ ಆರಂಭಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications