ತುಮಕೂರಿನ ಎಚ್ ಎಂಟಿ 120 ಎಕರೆ ಜಾಗ ಇಸ್ರೋಗೆ?
ಈಗಾಗಲೇ ಮುಚ್ಚಿರುವ ಎಚ್ ಎಂಟಿಯ ತುಮಕೂರು ಘಟಕದ ನೂರಿಪ್ಪತ್ತು ಎಕರೆ ಜಾಗವನ್ನು ಇಸ್ರೋಗೆ ನೀಡಬೇಕು ಎಂದು ಸಂಸದ ಎಸ್ ಪಿ ಮುದ್ದುಹನುಮೇಗೌಡರು ಕೇಂದ್ರ ಹಣಕಾಸು ಸಚಿವ ಅರಣ್ ಜೇಟ್ಲಿ ಅವರಿಗೆ ಮನವಿ ಮಾಡಿದ್ದಾರಂತೆ. ಈ ಬಗ್ಗೆ ಸಂಸದರೇ ಹೇಳಿದ್ದಾರೆ
ತುಮಕೂರು, ಫೆಬ್ರವರಿ 23: ಬೆಂಗಳೂರಿನಿಂದ ತುಮಕೂರಿಗೆ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಕ್ಯಾತ್ಸಂದ್ರ ಬಿಟ್ಟ ನಂತರ ಬಲಭಾಗಕ್ಕೆ ಎಚ್ ಎಂಟಿ ಎಂಬ ದೊಡ್ಡ ಅಕ್ಷರಗಳು ಕಾಣುತ್ತವೆ. ಹೌದು, ಇದು ದೇಶದ ಹೆಮ್ಮೆಯಾಗಿದ್ದ ಎಚ್ ಎಂಟಿ ಕೈಗಡಿಯಾರ ತಯಾರಿಸುತ್ತಿದ್ದ ಕಂಪೆನಿಯ ಜಾಗ. ಆ ಜಾಗವನ್ನು ಕೇಂದ್ರ ಸರಕಾರ ಸ್ವಾಮ್ಯದ ಇಸ್ರೋ, ಐಒಸಿಎಲ್, ಬಿಪಿಸಿಎಲ್, ಬಿಇಎಲ್ ಕಂಪನಿಗಳು ಕೇಳಿವೆಯಂತೆ.
ಆದರೆ, ಇಸ್ರೋದವರಿಗೆ ನೀಡಿ ಎಂದು ಸಂಸದ ಎಸ್.ಪಿ.ಮುದ್ದುಹನುಮೇಗೌಡ ಅವರು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಮನವಿ ಮಾಡಿದ್ದಾರಂತೆ. ಈ ವಿಚಾರವನ್ನು ಸ್ವತಃ ಸಂಸದರೇ ತುಮಕೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ಮಾಡಿ ಹೇಳಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿ, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ತೀವಿ ಅಂತ ಅರುಣ್ ಜೇಟ್ಲಿಯವರೂ ಹೇಳಿದ್ದಾರಂತೆ.[ಟಿಕ್ ಟಿಕ್ ಓಟವನ್ನು ನಿಲ್ಲಿಸಿದ ತುಮಕೂರಿನ ಎಚ್ಎಂಟಿ!]

ಒಂದು ವೇಳೆ ಎಚ್ ಎಂಟಿ ಜಾಗವನ್ನು ಇಸ್ರೋಗೆ ನೀಡಿದರೆ ತುಮಕೂರಿನಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆ. ಜತೆಗೆ ತುಮಕೂರಿನ ಹೆಸರು ವಿಶ್ವ ಭೂಪಟದಲ್ಲಿ ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಮುದ್ದಹನುಮೇಗೌಡ. ಅಂದಹಾಗೆ, ಎಚ್ ಎಂಟಿಯ ತುಮಕೂರು ಘಟಕ ಈಗಾಗಲೇ ಮುಚ್ಚಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಎಕರೆಗಟ್ಟಲೆ ಸ್ಥಳ ಇದು.[ಕಗ್ಗೆರೆ ತೋಂಟದ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಮಹಾರಥೋತ್ಸವ]
ಕಾರ್ಖಾನೆ ಮುಚ್ಚಿದ ನಂತರ ಆ ಜಾಗವನ್ನು ಏನು ಮಾಡಬೇಕು ಎಂಬ ಪ್ರಶ್ನೆಗೆ ನಾನಾ ಸಲಹೆಗಳು ಕೇಳಿಬಂದಿದ್ದವು. ಇದೀಗ ಇಸ್ರೋಗೆ ಜಾಗ ನೀಡಿ ಎಂಬ ಮನವಿ ಮಾಡಿದ್ದಾರೆ ಸಂಸದ ಎಸ್ ಪಿಎಂ, ಕೇಂದ್ರ ಸರಕಾರ ಯಾವ ನಿರ್ಧಾರಕ್ಕೆ ಬರುತ್ತದೋ?
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications