ನಮ್ಮಿಂದ ತಪ್ಪಾಯ್ತು ಬಿಟ್ಬಿಡಿ: ಲಂಚ ಪಡೆಯುವಾಗ ಸಿಕ್ಕಿಬಿದ್ದು ಅಂಗಲಾಚಿದ ಪೊಲೀಸರು
ತುಮಕೂರು, ಜೂನ್ 9: ರಾಷ್ಟ್ರೀಯ ಹೆದ್ದಾರಿಯಲ್ಲಿ ಕುರು ಸಾಗಾಣಿಕೆ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಪೊಲೀಸರು ಹಣ ಪಡೆಯುತ್ತಿದ್ದ ಘಟನೆ ಬೆಳಕಿಗ ಬಂದಿದೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಮೇಲೆ ಲಂಚ ಪಡೆದ ಆರೋಪ ಮಾಡಲಾಗಿದೆ.
ಹೈವೇಗಳಲ್ಲಿ ಸಾಗುವ ಕಂಟೇನರ್ ಗಳನ್ನು ತಡೆದು ಲಂಚಕ್ಕಾಗಿ ಬೇಡಿಕೆ ಇಡುವ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಪೊಲೀಸರು ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದಸ್ವಾಮಿ, ಜೀಪ್ ಚಾಲಕ ಚಿಕ್ಕಹನುಮಯ್ಯ ಎನ್ನುವವರೇ ಹಣ ವಸೂಲಿ ಮಾಡುವಾಗ ಸಿಕ್ಕಿ ಬಿದ್ದಿರುವ ಪೊಲೀಸ್ ಅಧಿಕಾರಿಗಳಾಗಿದ್ದಾರೆ.
ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಈ ವಿಡಿಯೋ ಮಾಡಿದ್ದು, ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಆರಂಭದಲ್ಲಿ ಏನೂ ಆಗಿಲ್ಲ ಎನ್ನುವಂತೆ ಸುಮ್ಮನಿದ್ದ ಪೊಲೀಸರು, ನಂತರ ತಾವು ಪಡೆದಿದ್ದ ಹಣವನ್ನು ಲಾರಿ ಚಾಲಕನಿಗೆ ವಾಪಸ್ ಕೊಟ್ಟಿದ್ದಾರೆ.
ಎಪಿಎಂಸಿ ಮಾರುಕಟ್ಟೆಗಳನ್ನು ಕುರಿ, ಮೇಕೆಗಳನ್ನು ಖರೀದಿ ಮಾಡಿ, ಸಾಗಾಣೆ ಮಾಡುತ್ತಿರುವುದಕ್ಕೆ ಅಗತ್ಯವಾಗಿ ದಾಖಲೆಗಳು ಇದ್ದರೂ ಹಣ ಯಾಕೆ ವಸೂಲಿ ಮಾಡಿದ್ದೀರಾ ಎಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು, ನಮ್ಮಿಂದ ತಪ್ಪಾಗಿದೆ ಬಿಟ್ಟುಬಿಡಿ ಅಣ್ಣಾ ಎಂದು ಕ್ಷಮೆ ಕೇಳಿದ್ದಾರೆ.
ಇಷ್ಟಕ್ಕೇ ಸುಮ್ಮನಾಗದ ಕಾರ್ಯಕರ್ತರು, ನೀವೂ ರೈತರ ಮಕ್ಕಳೇ ಅಲ್ಲವೇ, ದಿನವೆಲ್ಲಾ ಕಷ್ಟಪಟ್ಟು ದುಡಿದರೂ 200 ರುಪಾಯಿ ಸಿಗಲ್ಲ, ನೀವು ನೋಡಿದ್ರೆ ಈ ರೀತಿ ಸುಲಿಗೆ ಮಾಡ್ತೀದ್ದೀರಿ, ಈ ದುಡ್ಡಲ್ಲಿ ನಿಮ್ಮ ಮನೆಗೆ ತಿಂಡಿ ತೆಗೆದುಕೊಂಡು ಹೋಗ್ತೀರಿ, ಅವರು ನಿಮ್ಮ ಶ್ರಮದ ದುಡಿಮೆಯಲ್ಲಿ ತಿನ್ನುತ್ತಿದ್ದಾರ? ಇನ್ನಾದರೂ ಬದಲಾಗಿ ಎಂದು ಪೊಲೀಸರಿಗೆ ಬುದ್ದಿ ಹೇಳಿದ್ದಾರೆ.
ಈ ಹೆದ್ದಾರಿಯಲ್ಲಿ ಲಾರಿಗಳಿಂದ ಪೊಲೀಸರು 200-300 ರುಪಾಯಿ ಲಂಚ ಪಡೆಯುವುದು ಸಾಮಾನ್ಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರ ತವರು ಜಿಲ್ಲೆಯಲ್ಲೇ ಈ ರೀತಿ ಲಂಚಾವತಾರ ಇದ್ದರೆ ಬೇರೆ ಜಿಲ್ಲೆಗಳ ಗತಿಯೇನು ಎಂದು ಸಾರ್ವಜನಿರಕು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಬ್ಬರು ಪೊಲೀಸರು ಅಮಾನತು
ಇನ್ನು ಲಂಚ ಪಡೆದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಎಸ್ಐ ಮತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications