ಮತ್ತೊಂದು ದುರಂತ: ವಿಷ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ತುಮಕೂರು, ಮೇ 22: ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದಲ್ಲಿ ವಿಷ ಪೂರಿತ ಪ್ರಸಾದ ಸೇವಿಸಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ದುರಂತ ಸಂಭವಿಸಿದೆ.
ತುಮಕೂರಿನ ಪಾವಗಡ ತಾಲ್ಲೂಕಿನ ನಿಡಗಲ್ಲು ಗ್ರಾಮದಲ್ಲಿರುವ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ವಿಷಪೂರಿತ ಪ್ರಸಾದ ಸ್ವೀಕರಿಸಿದ ಒಬ್ಬ ಬಾಲಕ ಮೃತಪಟ್ಟಿದ್ದಾನೆ. ಸುಮಾರು 20 ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಇನ್ನೂ ಗಂಭೀರವಾಗಿದೆ.
ಮೃತಬಾಲಕನನ್ನು ವೀರಭದ್ರ (11) ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನು ಬೆಂಗಳೂರು, ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಸ್ವಸ್ಥರು ತೀವ್ರ ವಾಂತಿ ಬೇಧಿಯಿಂದ ಬಳಲುತ್ತಿದ್ದಾರೆ.

ದೇವಸ್ಥಾನಕ್ಕೆ ನೂರಾರು ಭಕ್ತರು ಭೇಟಿ ನೀಡುತ್ತಿದ್ದು, ಸೋಮವಾರ ದೇವಸ್ಥಾನದ ಸಮೀಪದಲ್ಲಿಯೇ ಪ್ರಸಾದ ತಯಾರಿಸಲಾಗಿತ್ತು. ಅಲ್ಲಿ ನೀರು ದೊರಕದ ತೊಟ್ಟಿಯಲ್ಲಿದ್ದ ನೀರನ್ನು ಪ್ರಸಾದ ತಯಾರಿಕೆಗೆ ಬಳಸಿಕೊಂಡಿದ್ದರು. ಈ ನೀರು ಶುದ್ಧವಾಗಿರಲಿಲ್ಲ ಎನ್ನಲಾಗಿದೆ. ಅದನ್ನು ಸೇವಿಸಿದ ಭಕ್ತರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತು. ಬಳಿಕ ವಾಂತಿ ಬೇಧಿಗೆ ಒಳಗಾದರು ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications