ರೇಪಿಸ್ಟ್ ಎಎಸ್ ಐ ಉಮೇಶ್ ವಿರುದ್ಧ ಗುಬ್ಬಿಯಲ್ಲಿ ತೀವ್ರ ಆಕ್ರೋಶ
32ವರ್ಷದ ಮಾನಸಿಕ ಅಸ್ವಸ್ಥೆಯನ್ನು ಮನೆಗೆ ಬಿಡುತ್ತೇವೆ ಎಂದು ಹೇಳಿ ಜೀಪಿನಲ್ಲಿ ಹತ್ತಿಸಿಕೊಂಡ ಪೊಲೀಸರು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿ ತುಮಕೂರು ಗ್ರಾಮಾಂತರ ಠಾಣೆ ಎಎಸ್ಐ ಉಮೇಶ್ ಅವರನ್ನು ಬಂಧಿಸಿ, ಅಮಾನತುಗೊಳಿಸಲಾಗಿದೆ.
ತುಮಕೂರು, ಜನವರಿ 16: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಅಮಾನುಷ ಕೃತ್ಯ ನಡೆದಿದೆ.
32ವರ್ಷದ ಮಾನಸಿಕ ಅಸ್ವಸ್ಥೆಯನ್ನು ಮನೆಗೆ ಬಿಡುತ್ತೇವೆ ಎಂದು ಹೇಳಿ ಜೀಪಿನಲ್ಲಿ ಹತ್ತಿಸಿಕೊಂಡ ಪೊಲೀಸರು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿ ತುಮಕೂರು ಗ್ರಾಮಾಂತರ ಠಾಣೆ ಎಎಸ್ಐ ಉಮೇಶ್ ಅವರನ್ನು ಬಂಧಿಸಿ, ಅಮಾನತುಗೊಳಿಸಲಾಗಿದೆ.

ಅಂತರಸನಹಳ್ಳಿ ಬೈಪಾಸ್ ರಸ್ತೆಯಲ್ಲಿ ಶನಿವಾರ ರಾತ್ರಿ ಗೃಹರಕ್ಷಕ ಸಿಬ್ಬಂದಿ ಜತೆಗೆ ಉಮೇಶ್ ಅತ್ಯಾಚಾರ ಎಸಗಿದ್ದಾರೆ ಎಂದು ಅಸ್ವಸ್ಥೆ ಮನೆಯವರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಆರೋಪದ ಮೇರೆಗೆ ಉಮೇಶ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಇಶಾಪಂತ್ ಅಮಾನತುಗೊಳಿಸಿದ್ದಾರೆ.
ಸಹಾಯಕ ಸಬ್ಇನ್ಸ್ಪೆಕ್ಟರ್ ಉಮೇಶ್, ಪೊಲೀಸ್ ಇಲಾಖೆ ವಾಹನದಲ್ಲಿಯೇ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತ ಯುವತಿಯ ತಾಯಿ ಆರೋಪಿಸಿದ್ದಾರೆ.












Click it and Unblock the Notifications