Tumakuru Railway Station: ಹೈಟೆಕ್ ಆಗಲಿದೆ ತುಮಕೂರು ರೈಲ್ವೆ ನಿಲ್ದಾಣ: ವಿಡಿಯೋ ನೋಡಿ
ಅಮೃತ ಭಾರತ ನಿಲ್ದಾಣ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಯಾಗಲಿದೆ. ಕಲ್ಪತರು ನಾಡಿನ ಹೊಸ ರೈಲ್ವೆ ನಿಲ್ದಾಣ ಸಾಕಷ್ಟು ಹೈಟೆಕ್ ಆಗಿರಲಿದ್ದು, ಇದರ ವಿಡಿಯೋವನ್ನು ನೈಋತ್ಯ ರೈಲ್ವೆ ತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿದೆ.
"ತುಮಕೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಪರಿವರ್ತನೆಗೆ ಸಾಕ್ಷಿಯಾಗಿ, ಅಮೃತ್ ಭಾರತ್ ನಿಲ್ದಾಣಗಳ ಯೋಜನೆಯಡಿ ಅಭಿವೃದ್ಧಿಯನ್ನು ಬಿಂಬಿಸುವ ದರ್ಶನ." ಎನ್ನುವ ಶೀರ್ಷಿಕೆಯಡಿ ಹೊಸ ರೈಲ್ವೆ ನಿಲ್ದಾಣ ಹೇಗಿರಲಿದೆ ಎನ್ನುವ ವಿಡಿಯೋವನ್ನು ಹಂಚಿಕೊಂಡಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನಗರದಲ್ಲಿ ರೈಲ್ವೆ ನಿಲ್ದಾಣದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಈಗ ರೈಲ್ವೆ ನಿಲ್ದಾಣ ಕೂಡ ಹೈಟೆಕ್ ಆಗಲಿದ್ದು ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಹೆಚ್ಚಿನ ರೈಲುಗಳಿಗೆ ಬೇಡಿಕೆ
ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಈ ಭಾಗದ ರೈಲು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದು, ಹೆಚ್ಚಿನ ರೈಲುಗಳಿಗೆ ಬೇಡಿಕೆ ಇಟ್ಟಿದ್ದಾರೆ. ಟ್ವೀಟ್ ಮಾಡಿರುವ ಪ್ರಯಾಣಿಕರೊಬ್ಬರು, "ಕೇವಲ 70 ಕಿಮೀ ಪ್ರಯಾಣಿಸಲು ನಾವು 1 ಗಂಟೆ ಕಾಯಬೇಕು ಮತ್ತು 3 ಗಂಟೆಗಳ ಪ್ರಯಾಣ ಮಾಡಬೇಕು,! ದಯವಿಟ್ಟು ತುಮಕೂರಿಗೆ ಮೀಸಲಾದ ರೈಲನ್ನು ಪರಿಚಯಿಸಿ" ಎಂದು ಮನವಿ ಮಾಡಿದ್ದಾರೆ.
Witness the transformation underway at Tumakuru Railway Station, a walkthrough depicting development under Amrit Bharat Stations Scheme.#AmritStations#RailInfra4Karnataka@RailMinIndia @drmsbc @PIBBengaluru pic.twitter.com/thxh1d5Bzh
— South Western Railway (@SWRRLY) November 29, 2023
"ಹೊಸ ತುಮಕೂರು-ದಾವಣಗೆರೆ ಮತ್ತು ಪಾವಗಡ-ರಾಯದುರ್ಗ ರೈಲು ಮಾರ್ಗಕ್ಕಾಗಿ ತುಮಕೂರು ನಿಲ್ದಾಣದಲ್ಲಿ ಹೆಚ್ಚಿನ ಪ್ಲಾಟ್ಫಾರ್ಮ್ಗಳನ್ನು ಒದಗಿಸಬೇಕು." ಎಂದು ಮತ್ತೊಬ್ಬರು ಮನವಿ ಮಾಡಿಕೊಂಡಿದ್ದಾರೆ.
"ಆಕರ್ಷಕ ನಿರ್ಮಾಣಗಳು ಮತ್ತು ಬಣ್ಣಗಳೊಂದಿಗೆ ಕೇವಲ ಫೇಸ್ ಲಿಫ್ಟ್, ಹುಲ್ಲುಹಾಸುಗಳು ನಿಜವಾದ ಉದ್ದೇಶವನ್ನು ಪೂರೈಸುವುದಿಲ್ಲ ಸರ್, ದಯವಿಟ್ಟು ಸಾಮಾನ್ಯ ಅಗತ್ಯಗಳನ್ನು ಪೂರೈಸಲು ಪ್ಯಾಸೆಂಜರ್ ರೈಲುಗಳನ್ನು ಓಡಿಸಲು ಯೋಚಿಸಿ. ಗಣ್ಯ ವರ್ಗವನ್ನು ಮಾತ್ರ ನೋಡಬೇಡಿ. ರೈಲ್ವೆಗೆ ಲಾಭ ಮಾಡುವ ಉದ್ದೇಶ ಇರಬಾರದು. ಸೇವಾ ಮನೋಭಾವನೆ ಇರಬೇಕು." ಎಂದು ಮತ್ತೊಬ್ಬರು ಮನವಿ ಮಾಡಿದ್ದಾರೆ.
ರಾಜ್ಯದ ಈ ನಿಲ್ದಾಣಗಳು ಮೇಲ್ದರ್ಜೆಗೆ
ಅಮೃತ ಭಾರತ ನಿಲ್ದಾಣ ಯೋಜನೆಯಡಿ ಕರ್ನಾಟಕದ ಹಲವು ರೈಲ್ವೇ ನಿಲ್ದಾಣಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಬೆಂಗಳೂರು ಕೇಂದ್ರ, ಬಿಜಾಪುರ, ಹೊಸಪೇಟೆ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಟೌನ್, ತೋರಣಗಲ್ಲು, ಬೆಳಗಾವಿ, ಬಳ್ಳಾರಿ, ಯಶವಂತಪುರ, ಅಳ್ನಾವರ, ಬೆಂಗಳೂರು ನಗರ, ಬಂಗಾರಪೇಟೆ, ದಾವಣಗೆರೆ, ಧಾರವಾಡ, ಗದಗ, ಹಾಸನ, ಕೃಷ್ಣರಾಜಪುರ ಮತ್ತು ತುಮಕೂರು ರೈಲ್ವೆ ನಿಲ್ದಾಣಗಳು ಹೊಸದಾಗಿ ನಿರ್ಮಾಣವಾಗಲಿದೆ.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications