ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಈಗ ಹೇಗಿದ್ದಾರೆ?
ತುಮಕೂರು, ಡಿಸೆಂಬರ್ 06: ಅನಾರೋಗ್ಯದಿಂದ ಬಳಲುತ್ತಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದ್ದು ಭಕ್ತರು ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಮಠದ ಕಿರಿಯ ಸ್ವಾಮೀಜಿ ಶ್ರೀ ಸಿದ್ದಲಿಂಗ ಶ್ರೀ ಹೇಳಿದ್ದಾರೆ.
ಭಕ್ತರು ಶ್ರೀಗಳ ದರ್ಶನಕ್ಕೆ ಸ್ವಲ್ಪ ದಿನ ಕಾಯುವುದು ಒಳ್ಳೆಯದು. 111 ವರ್ಷ ವಯಸ್ಸಿನ ಶ್ರೀಗಳ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.
ಡಾ. ರವೀಂದ್ರ ಅವರ ನೇತೃತ್ವದಲ್ಲಿ ತುಮಕೂರಿನ ಹಳೆಯ ಮಠದಲ್ಲಿ ಚಿಕಿತ್ಸೆನಡೆಯುತ್ತಿದೆ.

ಶ್ರೀಗಳ ಆರೋಗ್ಯದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ, ಶ್ರೀಗಳನ್ನು ಭೇಟಿಯಾಗಿದ್ದ ಉಪಮುಖ್ಯಮಂತ್ರಿ ಡಾ.ಪರಮೇಶ್ವರ್, ನಿನ್ನೆ ಸಂಜೆ ಶ್ರೀಗಳ ಹೃದಯ ಬಡಿತದಲ್ಲಿ ಏರುಪೇರಾಗಿತ್ತು. ಸ್ವಲ್ಪ ಜ್ವರವೂ ಕಂಡು ಬಂದಿತ್ತು. ಹಾಗಾಗಿ ಡಾ. ರವೀಂದ್ರ ಅವರ ವೈದ್ಯರ ತಂಡ ಚಿಕಿತ್ಸೆ ನೀಡಿ ಹೋಗಿದೆ. ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಸ್ವಾಮೀಜಿ ರಾತ್ರಿ ಪೂಜೆ ನೆರವೇರಿಸಿದ್ದಾರೆ." ಎಂದರು.
ಹಾಗೇ ಮುಂದುವರಿದು, "ಸ್ಟೆಂಟ್ ಅಳವಡಿಕೆ ವಿಚಾರದಲ್ಲಿ ನುರಿತ ವೈದ್ಯರ ಸಲಹೆಗಳನ್ನು ಪಡೆಯಬೇಕಿದೆ. ಹಾಗಾಗಿ ಮದರಾಸಿನ ಡಾ. ಮಹಮದ್ ರಿಲ್ಲಾ, ತಮಿಳುನಾಡು ಮೂಲದ ಪಳನಿ ವೇಲುರವರ ಸಲಹೆ ಪಡೆಯಬೇಕಿದೆ. ನಮ್ಮ ವೈದ್ಯರ ತಂಡವೇ ಮದರಾಸ್ ಹಾಗೂ ತಮಿಳುನಾಡಿಗೆ ತೆರಳಿ ಅವರ ಅಭಿಪ್ರಾಯ ಪಡೆಯುತ್ತೇವೆ. ಸದ್ಯ ಸ್ವಾಮೀಜಿ ಅವರನ್ನು ಶಿಫ್ಟ್ ಮಾಡಲ್ಲ. ಈಗಾಗ್ಲೇ 11 ಸ್ಟೆಂಟ್ ಅಳವಡಿಸಲಾಗಿದೆ. ಆ ಸ್ಟಂಟ್ ಗಳನ್ನು ತೆಗೆಯುವುದು ಬಹಳಷ್ಟು ಕಷ್ಟ. ಅದಕ್ಕೆ ನುರಿತ ವೈದ್ಯರ ಸಲಹೆ ಪಡೆಯುತ್ತೇವೆ" ಎಂದರು.

"ಸರ್ಜರಿ ಮುಖಾಂತರ ಸ್ಟಂಟ್ ತೆಗೆಯ ಬಹುದಾ ಅಥವಾ ಬೇರೆನಾದ್ರೂ ಮಾಡಬಹುದಾ ಎಂದು ಚರ್ಚೆ ಮಾಡುತ್ತೇವೆ. ಎಂಡೋಸ್ಕೋಪಿ ಮುಖಾಂತರ ಏನಾದ್ರೂ ಮಾಡಬಹುದಾ ಎಂದು ಅಭಿಪ್ರಾಯ ಪಡೆಯುತ್ತೇವೆ" ಎಂದು ಡಾ.ಪರಮೇಶ್ವರ್ ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications