ತುಮಕೂರಿನ ತ್ರಿವಳಿ ಕೊಲೆ ಪ್ರಕರಣ, ಸೈಕೋ ಜೈ ಶಂಕರ್ ಖುಲಾಸೆ
ತುಮಕೂರು, ಅಕ್ಟೋಬರ್ 30 : ತುಮಕೂರಿನ ತ್ರಿವಳಿ ಕೊಲೆ ಪ್ರಕರಣದಲ್ಲಿ ಸೈಕೋ ಜಯಶಂಕರ್ ಖುಲಾಸೆಗೊಂಡಿದ್ದಾನೆ. ಚಿತ್ರದುರ್ಗದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದ ಜಯಶಂಕರ್ನನ್ನು 2017ರ ಸೆಪ್ಟೆಂಬರ್ನಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿತ್ತು.
ಸೋಮವಾರ ಬೆಂಗಳೂರು ಗ್ರಾಮಾಂತರ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೃಷ್ಣಭಟ್ ಸೈಕೋ ಜಯಶಂಕರ್ನನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. 2011ರ ಮಾರ್ಚ್ 29ರಂದು ತುಮಕೂರಿನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ಜೈಶಂಕರ್ ಆರೋಪಿಯಾಗಿದ್ದ.

ತುಮಕೂರಿನ ಗಿರಿಯನಹಳ್ಳಿಯಲ್ಲಿ ದೊಡ್ಡಯ್ಯ, ಪುಟ್ಟಮ್ಮ ದಂಪತಿಗಳು ಹಾಗೂ ಅವರ ಪುತ್ರಿ ರಾಜಮ್ಮ ಕೊಲೆ ಮಾಡಿದ ಆರೋಪ ಸೈಕೋ ಜಯಶಂಕರ್ ಮೇಲಿತ್ತು. ಸೂಕ್ತ ಸಾಕ್ಷಿಗಳು ದೊರೆಯದ ಹಿನ್ನಲೆಯಲ್ಲಿ ಖುಲಾಸೆಗೊಳಿಸಲಾಗಿದೆ.
ಜೋಡಿ ಕೊಲೆ ಪ್ರಕರಣದಲ್ಲಿಯೂ ಖುಲಾಸೆ : 2011ರ ಏಪ್ರಿಲ್ 27ರಂದು ಚಿತ್ರದುರ್ಗದ ಎಂ.ಕೆ.ಹಟ್ಟಿಯಲ್ಲಿ ಚಂದ್ರಮ್ಮ ಎಂಬುವವರ ಮೇಲೆ ಜೈಶಂಕರ್ ಅತ್ಯಾಚಾರ ನಡೆಸಿದ್ದ. ಬಳಿಕ ಅಲ್ಲಿಗೆ ಆಕೆಯ ಪತಿ ಹನುಮಂತಪ್ಪ ಬಂದಿದ್ದರು. ಇಬ್ಬರನ್ನು ಕೊಲೆ ಮಾಡಿದ ಆರೋಪ ಜೈಶಂಕರ್ ಮೇಲಿತ್ತು.
ಬೆಂಗಳೂರು ಗ್ರಾಮಾಂತರ ಸೆಷನ್ಸ್ ನ್ಯಾಯಾಲಯ 2017ರ ಸೆಪ್ಟೆಂಬರ್ನಲ್ಲಿ ಈ ಕೊಲೆ ಪ್ರಕರಣದಲ್ಲಿಯೂ ಜಯಶಂಕರ್ನನ್ನು ಖುಲಾಸೆಗೊಳಿಸಿತ್ತು. ಈಗ ತುಮಕೂರಿನ ತ್ರಿವಳಿ ಕೊಲೆ ಪ್ರಕರಣದಲ್ಲಿಯೂ ಆತ ಖುಲಾಸೆಗೊಂಡಿದ್ದಾನೆ.
ವಿಜಯಪುರದಲ್ಲಿ ಜೈ ಶಂಕರ್ನನ್ನು ಪೊಲೀಸರು ಬಂಧಿಸಿದಾಗ ಹಲವು ಕೊಲೆ ಪ್ರಕರಣಗಳು ಹೊರಬಂದಿದ್ದವು. ಕರ್ನಾಟಕದ ಮೂರು ಪ್ರಕರಣಗಳಲ್ಲಿ ಜೈ ಶಂಕರ್ ಈಗಾಗಲೇ ಖುಲಾಸೆಗೊಂಡಿದ್ದು, ಇನ್ನೂ 2 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ತಮಿಳುನಾಡಿನಲ್ಲಿಯೂ ಜೈ ಶಂಕರ್ ಮೇಲೆ ಹಲವು ಕೇಸುಗಳಿವೆ.
ಜೈಲಿನಿಂದ ಪರಾರಿಯಾಗಿದ್ದ : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸೈಕೋ ಜಯಶಂಕರ್ 2013ರ ಸೆಪ್ಟೆಂಬರ್ನಲ್ಲಿ ಪರಾರಿಯಾಗಿದ್ದ. ಕಾಲಿಗೆ ಗಾಯ ಮಾಡಿಕೊಂಡಿದ್ದ ಆತ, ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications