Copra Price: ನಾಫೆಡ್ ಕೇಂದ್ರಗಳ ಮೂಲಕ ಕೊಬ್ಬರಿ ಖರೀದಿ ವಿಳಂಬ: ತೆಂಗು ಬೆಳೆಗಾರರ ಆಕ್ರೋಶ
ನಾಫೆಡ್ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವ ಕ್ರಮಕ್ಕೆ ತೆಂಗು ಬೆಳೆಗಾರರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಬ್ಬರಿ ಖರೀದಿ ಮಾಡದೆ ಬೆಳೆಗಾರರನ್ನು ನಿರ್ಲಕ್ಷಿಸಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 1ರಿಂದ ತುಮಕೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ನಾಫೆಡ್ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿ ಮಾಡಬೇಕಿತ್ತು. ಜನವರಿ 20ರಿಂದ ಖರೀದಿ ಕೇಂದ್ರ ಆರಂಭವಾಗಬೇಕಿತ್ತಾದರೂ, ಅದನ್ನು ಫೆಬ್ರವರಿ 1ಕ್ಕೆ ಮುಂದೂಡಲಾಗಿತ್ತು. ಈಗ ಮತ್ತೆ ಮುಂದೂಡಿದ್ದು ತೆಂಗು ಬೆಳೆಗಾರರಲ್ಲಿ ಆತಂಕ ಮೂಡಿಸಿದೆ.

ಅನಿರ್ದಿಷ್ಟಾವಧಿಗೆ ನಾಫೆಡ್ ಕೇಂದ್ರಗಳ ಮೂಲಕ ಕೊಬ್ಬರಿ ಖರೀದಿಯನ್ನು ಮುಂದೂಡಿದ್ದು, ಇದಕ್ಕೆ ನಿರ್ದಿಷ್ಟ ಕಾರಣವನ್ನು ರಾಜ್ಯ ಸಹಕಾರ ಮಾರಾಟ ಮಂಡಳ ಹೇಳಿಲ್ಲ, ಇದು ತೆಂಗು ಬೆಳೆಗಾರರನ್ನು ಮತ್ತಷ್ಟು ಕೆರಳಿಸಿದೆ.
ನಾಫೆಟ್ ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳು, ವರ್ತಕರ ಹಾವಳಿ ತಪ್ಪಿಸಲು ತೆಂಗು ಬೆಳೆಗಾರರಿಂದ ಬಯೋ ಮೆಟ್ರಿಕ್ ಪಡೆದು ಕೊಬ್ಬರಿ ಖರೀದಿಗೆ ನಿರ್ಧಾರ ಮಾಡಲಾಗಿತ್ತು. ಇದಕ್ಕಾಗಿ ತಂತ್ರಾಂಶ ಅಭಿವೃದ್ಧಿ ಮಾಡಲಾಗುತ್ತಿದ್ದು ಇನ್ನೂ ಕೂಡ ಅದು ಪೂರ್ತಿಯಾಗದ ಕಾರಣ ಕೊಬ್ಬರಿ ಖರೀದಿ ಮುಂದೂಡಲಾಗಿದೆ ಎನ್ನಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತುಮಕೂರಿನಲ್ಲಿ ಜ.24ರಂದು ಎಪಿಎಂಸಿ ಪ್ರಾಂಗಣದಲ್ಲಿ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟನೆ ಮಾಡಿದ್ದರು. ಫೆಬ್ರವರಿ 1ರಿಂದ ಕೊಬ್ಬರಿ ಖರೀದಿ ಕೇಂದ್ರ ಆರಂಭವಾಗಲಿದ್ದು, ಮುಂದೂಡುವುದಿಲ್ಲ ಎಂದು ಕೃಷಿ ಸಚಿವ ಶಿವಾನಂದ ಎಸ್. ಪಾಟೀಲ ಹೇಳಿದ್ದರೂ ಇನ್ನೂ ಕೊಬ್ಬರಿ ಖರೀದಿ ಪ್ರಕ್ರಿಯೆ ಶುರುವಾಗಿಲ್ಲ.
ಬಯೋ ಮೆಟ್ರಿಕ್ ಮೂಲಕವೇ ಕೊಬ್ಬರಿ ಖರೀದಿ ಮಾಡಬೇಕು. ತಕ್ಷಣವೇ ಖರೀದಿ ಪ್ರಕ್ರಿಯೆ ಶುರುಮಾಡಬೇಕು ಎಂದು ತೆಂಗು ಬೆಳೆಗಾರರು ಆಗ್ರಹಿಸಿದ್ದಾರೆ. ಸರ್ಕಾರಗಳು ರೈತರ ಭಾವನೆಗಳ ಜೊತೆ ಚಲ್ಲಾಟ ಆಡುವುದನ್ನು ನಿಲ್ಲಿಸಬೇಕು. ವಿಳಂಬ ನೀತಿಯನ್ನು ಬಿಟ್ಟು ತಕ್ಷಣವೇ ಕೊಬ್ಬರಿ ಖರೀದಿ ಮಾಡಿ, ರೈತರ ಸಮಸ್ಯೆಗೆ ಸ್ಪಂದಿಸಲಿ ಎಂದು ಆಗ್ರಹಿಸಿದ್ದಾರೆ.
ವಿಳಂಬ ನೀತಿ ಅನುಸರಿಸಿ ನಂತರ ಕೊನೆಯಲ್ಲಿ ಬಯೋ ಮೆಟ್ರಿಕ್ ಇಲ್ಲದೆ ಕೊಬ್ಬರಿ ಖರೀದಿ ಮಾಡುವ ಮೂಲಕ ಅಧಿಕಾರಿಗಳು ಮಧ್ಯವರ್ತಿಗಳು, ಮಾರಾಟಗಾರರಿಗೆ ಅನುಕೂಲ ಮಾಡಲು ಈ ಸಂಚು ಮಾಡಲಾಗಿದೆ ಎನ್ನುವ ಆರೋಪಗಳನ್ನು ತೆಂಗು ಬೆಳೆಗಾರರು ಮಾಡಿದ್ದಾರೆ. ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆಯಾದರೂ ಅದನ್ನು ಖರೀದಿ ಮಾಡದೆ ಸರ್ಕಾರಗಳು ನಿರ್ಲಕ್ಷ್ಯ ತೋರಿರುವುದು ದುರಂತವೇ ಸರಿ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications