ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ವಿವಿಧ ಬ್ಯಾಂಕುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸಾಲವನ್ನು ಹೊಂದಿದ್ದ ಕುಟುಂಬ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿತ್ತು ಎನ್ನಲಾಗಿದೆ. ಸಿದ್ದಪ್ಪ (41), ತಾಯಮ್ಮ(40) ಮತ್ತು ಉಮಾದೇವಿ(18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ತುಮಕೂರು, ಮಾರ್ಚ್ 8: ಸಾಲದ ಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೊಸಬಿಜ್ಜನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಿವಿಧ ಬ್ಯಾಂಕುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸಾಲವನ್ನು ಹೊಂದಿದ್ದ ಕುಟುಂಬ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿತ್ತು ಎನ್ನಲಾಗಿದೆ. ಸಿದ್ದಪ್ಪ (41), ತಾಯಮ್ಮ(40) ಮತ್ತು ಉಮಾದೇವಿ(18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.











Click it and Unblock the Notifications