ಅಂಧತ್ವಕ್ಕೆ ಸವಾಲು: ಯುಪಿಎಸ್ಸಿಯಲ್ಲಿ ಯಶಸ್ಸು ಗಳಿಸಿದ ಕೆಂಪಹೊನ್ನಯ್ಯ
ಮೈಸೂರಿನ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ತುಮಕೂರು ಮೂಲಕದ ಕೆಂಪಹೊನ್ನಯ್ಯ ಅವರು ಯುಪಿಎಸ್ ಸಿ ಯಲ್ಲಿ 340ನೇ ಸ್ಥಾನಗಳಿಸಿದ್ದಾರೆ. ಅಂಧತ್ವಕ್ಕೆ ಸವಾಲು ಹಾಕಿ ಯಶ ಪಡೆದಿದ್ದಾರೆ
ತುಮಕೂರು, ಜೂನ್ 01 : ಮೈಸೂರಿನ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ತುಮಕೂರು ಮೂಲಕದ ಕೆಂಪಹೊನ್ನಯ್ಯ ಅವರು ಯುಪಿಎಸ್ ಸಿ ಯಲ್ಲಿ 340ನೇ ಸ್ಥಾನಗಳಿಸಿದ್ದಾರೆ. ಅಂಧತ್ವಕ್ಕೆ ಸವಾಲು ಹಾಕಿ ಯಶ ಪಡೆದಿದ್ದಾರೆ. ಕೆಂಪಹೊನ್ನಯ್ಯ ಅವರ ಸಾಧನೆಯತ್ತ ಒಂದು ನೋಟ ಇಲ್ಲಿದೆ...
'ಯಶಸ್ಸು ಸಿಗುವ ತನಕ ಮರಳಿ ಯತ್ನವಾ ಮಾಡು..' ಎಂಬ ವಾಕ್ಯದ ಮೇಲೆ ನಂಬಿಕೆ ಇರಿಸಿಕೊಂಡಿರುವ ಕೆಂಪಹೊನ್ನಯ್ಯ ಅವರು ಮೂರನೇ ಬಾರಿಗೆ ಕೇಂದ್ರ ಲೋಕಸೇವಾ ಆಯೋಗ(ಯು ಪಿಎಸ್ ಸಿ) ಪರೀಕ್ಷೆಯಲ್ಲಿ ಯಶಸ್ಸುಗಳಿಸಿದ್ದಾರೆ.

ಕನ್ನಡದಲ್ಲೇ ಯುಪಿ ಎಸ್ ಸಿ ಪರೀಕ್ಷೆ: 'ಯುಪಿಎಸ್ಸಿ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆದಿದ್ದೇನೆ, ಸಂದರ್ಶವನ್ನು ಕನ್ನಡದಲ್ಲಿಯೇ ನಡೆಸಲಾಯಿತು. ಈ ರ್ಯಾಂಕ್ ಖುಷಿ ನೀಡಿದೆ' ಎಂದು ಕೆಂಪಹೊನ್ನಯ್ಯ ಅವರು ಡೆಕ್ಕನ್ ಹೆರಾಲ್ಡ್ ಪತ್ರಿಕೆ ಜತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ.
ನನ್ನ ಯಶಸ್ಸಿನಲ್ಲಿ ಪತ್ನಿ ಅಂಚಿತಾ ಪಾಲು ಅಧಿಕ. ನನಗೆ ಓದಲು, ನೋಟ್ಸ್ ಮಾಡಿಕೊಡಲು, ರೆಕಾರ್ಡಿಂಗ್ ಕೇಳಿಸುವ ಸಹಾಯ ಮಾಡಿದರು ಎಂದು ಕೆಂಪಹೊನ್ನಯ್ಯ ಹೇಳಿದ್ದಾರೆ.
ಮೈಸೂರು ಒಂಟಿಕೊಪ್ಪಲು ಸರ್ಕಾರಿ ಪಿಯು ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿರುವ ಕೆಂಪಹೊನ್ನಯ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದವರು.
ಬಾಲ್ಯದಲ್ಲೇ ದೃಷ್ಟಿ ದೋಷ: ತಮ್ಮ ಊರಿನ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದಾಗ ಕಣ್ಣಿನ ರೆಟಿನಾ ಪೊರೆ ಕಳಚಿ ಕೆಂಪಹೊನ್ನಯ್ಯ ಅವರು ಸಂಪೂರ್ಣ ದೃಷ್ಟಿ ಕಳೆದುಕೊಂಡರು.ಕೆಲವು ವರ್ಷಗಳ ಕಾಲ ಭವಿಷ್ಯದ ಬಗ್ ಯೋಚಿಸಿ, ಚಿಂತಿತರಾಗಿದ್ದರು.
ನಂತರ ಮೈಸೂರಿನ ಅಂಧ ಮಕ್ಕಳ ಪಾಠಶಾಲೆಯಲ್ಲಿ ಓದು ಮುಂದುವರಿಸಿದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಈಗ ಅಂಗವಿಕಲ ಕೋಟಾದಡಿಯಲ್ಲಿ ಐಎಎಸ್ ಹುದ್ದೆ ಸಿಗುವ ನಿರೀಕ್ಷೆಯಲ್ಲಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications