ಶಿರಾ ಉಪಚುನಾವಣೆ ಸೋಲು: ಡಾ.ಪರಮೇಶ್ವರ್ ವಿರುದ್ದ ದೂರು? ಸ್ಪಷ್ಟನೆ
ತುಮಕೂರು, ನ 20: ಶಿರಾ ಅಸೆಂಬ್ಲಿ ಉಪಚುನಾವಣೆಯ ಸೋಲಿನ ಹಿನ್ನಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಡಾ.ಪರಮೇಶ್ವರ್ ವಿರುದ್ದ ಕೆಪಿಸಿಸಿ ಪ್ರಮುಖರಾಗಿ ದೂರಲಾಡಗಿದೆ ಎಂದು ಹರಿದಾಡುತ್ತಿದ್ದ ಸುದ್ದಿಗೆ ಮತ್ತೋರ್ವ ಹಿರಿಯ ಮುಖಂಡ ಕೆ.ಎನ್.ರಾಜಣ್ಣ ತೆರೆ ಎಳಿದಿದ್ದಾರೆ.
ಈ ಬಗ್ಗೆ ಮಾತನಾಡುತ್ತಿದ್ದ ರಾಜಣ್ಣ, "ನಾನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಶಿರಾ ಉಪಚುನಾವಣೆಯ ಸೋಲಿನ ನಂತರ ಭೇಟಿಯಾಗಿದ್ದು ನಿಜ. ಆದರೆ, ನಾನು ಪರಮೇಶ್ವರ್ ವಿರುದ್ದ ದೂರನ್ನು ನೀಡಿಲ್ಲ"ಎಂದು ಹೇಳಿದ್ದಾರೆ.
"ನಾನು, ಪರಮೇಶ್ವರ್ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಟಿ.ಬಿ.ಜಯಚಂದ್ರ ಗೆಲುವಿಗೆ ಶ್ರಮಿಸಿದ್ದೇವೆ. ಆದರೆ, ಬಿಜೆಪಿಯವರ ಅತಿಯಾದ ಸುಳ್ಳು ಮತ್ತು ಭರವಸೆಯಿಂದಾಗಿ ಡಾ.ರಾಜೇಶ್ ಗೌಡ ವಿಜಯ ಸಾಧಿಸಿದರು"ಎಂದು ರಾಜಣ್ಣ ಅಭಿಪ್ರಾಯ ಪಟ್ಟರು.

ಕಾಂಗ್ರೆಸ್ ಪಕ್ಷದ ಸೋಲಿಗೆ ಡಾ.ಪರಮೇಶ್ವರ್ ಆದಿಯಾಗಿ ಕೆಲವು ಮುಖಂಡರು ಆತ್ಮಸಾಕ್ಷಿಯಾಗಿ ಕೆಲಸ ಮಾಡಿಲ್ಲ, ಹಾಗಾಗಿ, ಅವರ ವಿರುದ್ದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದೂರು ನೀಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.
ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿ.ಬಿ.ಜಯಚಂದ್ರ ಜೊತೆ ಕೆ.ಎನ್.ರಾಜಣ್ಣ ಕೂಡಾ ಟಿಕೆಟ್ ಬಯಸಿದ್ದರು. ಆದರೆ, ಡಿಕೆಶಿ, ಇಬ್ಬರೂ ನಾಯಕರನ್ನು ಕರೆಸಿ ಮಾತುಕತೆ ನಡೆಸಿ, ರಾಜಣ್ಣ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಡಾ.ಜಿ.ಪರಮೇಶ್ವರ್ ಅವರಿಗೆ ಶಿರಾ ಉಪಚುನಾವಣೆಯ ಉಸ್ತುವಾರಿಯನ್ನು ವಹಿಸಲಾಗಿತ್ತು.
ಪರಮೇಶ್ವರ್ ಅವರಿಗೆ ಶಿರಾ ಉಸ್ತುವಾರಿ ವಹಿಸಿದ್ದರೂ ಅವರು ಚುನಾವಣಾ ಕೆಲಸದಲ್ಲಿ ಹೆಚ್ಚು ತೊಡಗಿಸಿಕೊಳ್ಳಲಿಲ್ಲ. ಜೊತೆಗೆ, ಬಿಜೆಪಿಯವರಿಗಿದ್ದಷ್ಟು ಕಾರ್ಯಕರ್ತರ ಬಲ ಮತ್ತು ಸಂಪನ್ಮೂಲ ಕೂಡಾ ನಮ್ಮಲ್ಲಿ ಇರಲಿಲ್ಲ ಎಂದು ಕೆ.ಎನ್.ರಾಜಣ್ಣ ಅವರು, ಸಿದ್ದರಾಮಯ್ಯವರ ಬಳಿ ದೂರಿದ್ದರು ಎಂದು ಹೇಳಲಾಗುತ್ತಿತ್ತು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications