ಮುಂದಿನ ದಿನದಲ್ಲಿ ಯಾರು ಕಂಸ ತಿಳಿಯಲಿದೆ: ಬಿಎಸ್ ವೈ
ತುಮಕೂರು, ಡಿಸೆಂಬರ್ 28; ಕರ್ನಾಟಕದಲ್ಲಿ ಭೀಕರ ಬರ ಆವರಿಸಿರುವುದರಿಂದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬುಧವಾರ ತುಮಕೂರಿನಿಂದ ಬರ ಅಧ್ಯಯನ ಪ್ರವಾಸವನ್ನು ಆರಂಭಿಸಿದ್ದು, ಈ ವೇಳೆ ಈ ಶ್ವರಪ್ಪ ಮಾತಿಗೆ ಪ್ರತ್ಯುತ್ತರವಾಗಿ ಮುಂದಿನ ದಿನಗಳಲ್ಲಿ ಯಾರು ಕಂಸ ಯಾರು ಅರ್ಜುನ ತಿಳಿಯಲಿದೆ ಎಂದರು.
ಬುಧವಾರ ಬೆಳಗ್ಗೆ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದು ರಾಜ್ಯದಲ್ಲಿ ರೈತರಿಗೆ ಆಗಿರುವ ತೊಂದರೆ, ಮತ್ತು ಬೆಳೆ ನಷ್ಟ ಕುರಿತಂತೆ ಅಧ್ಯಯನ ನಡೆಸಲು ಪ್ರವಾಸ ಪ್ರಾರಂಭಿಸಿದರು. ಈ ವೇಳೆ ಮಾತನಾಡಿದ ಬಿಎಸ್ ವೈ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ . ಈಗಲಾದರೂ ಸರಕಾರ ಎಚ್ಚೆತ್ತುಕೊಂಡು ಕುಡಿವ ನೀರು ಮತ್ತು ಪಶುಗಳಿಗೆ ಉಚಿತ ಮೇವು ಸರಬರಾಜು ಮಾಡಬೇಕು. ಎಲ್ಲೆಡೆ ಗೋಶಾಲೆ, ಮೇವು ಬ್ಯಾಂಕ್ ಸ್ಥಾಪಿಸಬೇಕು. ಕೆರೆಗಳ ಹೂಳೆತ್ತುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.[ಈಶ್ವರಪ್ಪ ವಿರುದ್ದ 'ದಲಿತ ಬ್ರಹ್ಮಾಸ್ತ್ರ' ಪ್ರಯೋಗಿಸಲು ಬಿಎಸ್ವೈ ಸಜ್ಜು?]

ಈಶ್ವರಪ್ಪ ಅವರು ರಾಯಣ್ಣ ಬ್ರಿಗೇಡ್ ಸ್ಥಾಪನೆಯಲ್ಲಿ ನಿರತರಾಗಿದ್ದಾರೆ. ನಮಗೆ ಅವರ ಮೇಲೆ ಯಾವುದೇ ದ್ವೇಷವಿಲ್ಲ. ಅವರು ನಮ್ಮ ಬಗ್ಗೆ ಕಂಸ ಎಂದು ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಯಾರು ಕಂಸ, ಯಾರು ಅರ್ಜುನ ಎಂಬುದು ತಿಳಿಯಲಿದೆ ಎಂದು ಮಾರ್ಮಿಕವಾಗಿ ನುಡಿದರು.
ಇನ್ನು ರಾಯಣ್ಣ ಬ್ರಿಗೇಡ್ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ರಾಜ್ಯದಲ್ಲಿ ಮೇಟಿ ಹೊರತು ಪಡಿಸಿ ಇನ್ನೂ ಮೂವರು ಸಚಿವರು ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ದೀರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪನವರು ಈ ಬಗ್ಗೆ ಗೃಹ ಸಚಿವರಾದ ಪರಮೇಶ್ವರ್ ಅವರಿಗೇ ತಿಳಿದಿದೆ. ಗುಪ್ತದಳದ ವರದಿ ತರಿಸಿಕೊಂಡು ಪರಿಶೀಲಿಸಲಿ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೊಲೆ-ಸುಲಿಗೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವನ್ನು ಕೋರಲು ಜನವರಿ 4ರ೦ದು ನಿಯೋಗದೊ೦ದಿಗೆ ಪ್ರಧಾನಿಗಳು ಮತ್ತು ಕೃಷಿ ಸಚಿವರನ್ನು ಭೇಟಿ ಮಾಡಿ ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಕಷ್ಟ ವಿವರಿಸಿ ನೆರವು ಕೇಳುವುದಾಗಿ ತಿಳಿಸಿದರು.
ಬರ ಅಧ್ಯಯನ ಪ್ರವಾಸಕ್ಕೆ ಈಶ್ವರಪ್ಪ ಅವರನ್ನು ಕೈಬಿಟ್ಟಿರುವ ಕಾರಣ ಈಶ್ವರಪ್ಪ, ಯಡಿಯೂರಪ್ಪ ಅವರನ್ನು ಕಂಸ ಎಂದು ಸಂಭೋದಿಸಿದ್ದಾರೆ, ಈ ಕಾರಣದಿಂದ ಬಿಜೆಪಿ ರಾಜಕೀಯದಲ್ಲಿ ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವೆ ಮತ್ತಷ್ಟು ಬಿರುಕಿಗೆ ಕಾರಣವಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications