ತುಮಕೂರಿನ ಪಿಡಿಒ ಮಂಜುಳಾ ದಲಿತರ ಕೇರಿಗೆ ಬರಲ್ವಂತೆ!
ತುಮಕೂರು, ಫೆಬ್ರವರಿ 8: ತಾಲೂಕಿನ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ. ದಲಿತ ಕೇರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೇಟಿ ನೀಡುತ್ತಿಲ್ಲ ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕತೊಟ್ಲುಕೆರೆಯಲ್ಲಿ ನಡೆದಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಅವರು ದಲಿತರ ಕೇರಿಗಳಿಗೆ ಭೇಟಿ ನೀಡುವುದಿಲ್ಲ. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ದಲಿತ ಕಾಲೋನಿ ನಿವಾಸಿಗಳು ಆಗ್ರಹಿಸಿದರು. ಆಕ್ರೋಶಗೊಂಡಿದ್ದ ಪ್ರತಿಭಟನಾನಿರತರು ಗ್ರಾಮಪಂಚಾಯಿತಿ ಕಚೇರಿಗೆ ಬೀಗ ಹಾಕಿದರು.[ತುಮಕೂರು: ಇನ್ನೇನು ತಾಳಿ ಕಟ್ಟಬೇಕಿದ್ದ ವರ ಹೃದಯಾಘಾತದಿಂದ ಸಾವು]

ಅದಕ್ಕೂ ಮೊದಲು ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವಿಚಾರ ತಿಳಿದ ಅಧಿಕಾರಿ ಮಂಜುಳಾ ಕಚೇರಿಗೆ ಬರಲಿಲ್ಲ. ಇದರಿಂದ ಮತ್ತೂ ಆಕ್ರೋಶಗೊಂಡ ಪ್ರತಿಭಟನಾನಿರತರು, ಪಿಡಿಒ ಸ್ಥಳಕ್ಕೆ ಬರಬೇಕು ಎಂದು ಘೋಷಣೆಗಳನ್ನು ಕೂಗಿದರು.[ಫೆ.13ರಂದು ಶೀಬಿ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ]

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಇಂಥ ವಿಚಾರಗಳ ಬಗ್ಗೆ ಗಮನ ಕೊಡುವಷ್ಟು ಸಮಯ ಇರುತ್ತದೋ ಇಲ್ಲವೋ? ಇನ್ನು ಡಾ.ಜಿ.ಪರಮೇಶ್ವರ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೊರಟಗೆರೆ ಕ್ಷೇತ್ರ ಚಿಕ್ಕತೊಟ್ಲುಕೆರೆಗೆ ಬಹಳ ಹತ್ತಿರ. ಆದರೆ ಇಂಥ ವಿಚಾರದಲ್ಲಿ ಅಧಿಕಾರಿಗಳ ಕಿವಿ ಹಿಂಡುವವರು ಯಾರು ಹೇಳಿ?
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications