ತುಮಕೂರಿನ ಬನ್ನಿಕುಪ್ಪೆ ಅರಣ್ಯದಲ್ಲಿ ಮಹಿಳೆಯನ್ನು ಕೊಂದು ತಿಂದಿರುವ ಚಿರತೆ
ತುಮಕೂರು, ಅಕ್ಟೋಬರ್ 17: ತುಮಕೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿ ಮಾಡಿ, ಮಹಿಳೆಯೊಬ್ಬರನ್ನು ಕೊಂದು ಹಾಕಿದೆ. ಸುಮಾರು ಅರವತ್ತು ವರ್ಷದ ಲಕ್ಷ್ಮಮ್ಮ ಚಿರತೆ ದಾಳಿಗೆ ಬಲಿಯಾದವರು. ಹಸು ಕಟ್ಟಲು ತೆರಳಿದ್ದ ವೇಳೆ ಈ ದಾಳಿ ನಡೆದಿದೆ. ಬುಧವಾರ ಮನೆ ಬಿಟ್ಟು ಹೋದ ಲಕ್ಷ್ಮಮ್ಮ ವಾಪಸ್ ಬಾರದ ಕಾರಣಕ್ಕೆ ಆಕೆಯ ಕುಟುಂಬದವರು ಹೆಬ್ಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಬನ್ನಿಕುಪ್ಪೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಲಕ್ಷ್ಮಮ್ಮ ಅವರ ಶವ ಪತ್ತೆಯಾಗಿದೆ. ಚಿರತೆಯು ತಲೆಯ ಭಾಗವನ್ನೇ ತಿಂದು ಹಾಕಿತ್ತು. ದೇಹದ ಇತರ ಭಾಗಗಳನ್ನು ಸಹ ತಿಂದು ಹಾಕಿದ್ದು, ಭೀಕರ ಸ್ಥಿತಿಯಲ್ಲಿ ಲಕ್ಷ್ಮಮ್ಮ ಅವರ ಶವ ಪತ್ತೆಯಾಗಿದೆ.
ತಜ್ಞರ ಪ್ರಕಾರ, ಚಿರತೆಯು ಲಕ್ಷ್ಮಮ್ಮ ಅವರನ್ನು ಬಲಿ ಪ್ರಾಣಿ ಎಂದು ಭಾವಿಸಿರಬಹುದು. ಆದರೆ ತಲೆಯ ಭಾಗದ ಮಾಂಸವೇ ಇಲ್ಲದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸಾಮಾನ್ಯವಾಗಿ ಕರಡಿಯು ಮನುಷ್ಯರ ತಲೆಯನ್ನು ಬಗೆಯುತ್ತದೆ. ಆದರೆ ಈ ಪ್ರಕರಣದಲ್ಲಿ ಚಿರತೆ ಬಲಿ ಪ್ರಾಣಿ ಎಂದು ಭಾವಿಸಿ ದಾಳಿ ನಡೆಸಿರುವುದು ಸ್ಪಷ್ಟವಾಗುತ್ತದೆ.

ಮನುಷ್ಯರ ಮಾಂಸದ ರುಚಿ ಕಂಡ ವನ್ಯ ಪ್ರಾಣಿಗಳು ಎಂದಿಗೂ ಅಪಾಯಕರ. ಅದನ್ನು ಬಂಧಿಸುವುದು ಅನಿವಾರ್ಯ ಎಂದು ಕೂಡ ಅಭಿಪ್ರಾಯ ವ್ಯಕ್ತವಾಗುತ್ತದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications