ಪೊಲೀಸ್ ಇಲಾಖೆಯಲ್ಲಿ ಶೇ.20ರಷ್ಟು ಮಹಿಳಾ ಪೇದೆಗಳ ನೇಮಕಾತಿಗೆ ಕ್ರಮ
ತುಮಕೂರು, ಸೆಪ್ಟೆಂಬರ್ 6: ರಾಜ್ಯದಲ್ಲಿ ಮಹಿಳಾ ಪೊಲೀಸರ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ಶೇ. 20 ರಷ್ಟು ಏರಿಕೆ ಮಾಡುವ ಚಿಂತನೆ ಸರ್ಕಾರದ ಮಟ್ಟದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ 120 ಮಹಿಳಾ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳುವ ಸಂಖ್ಯೆ ಹೆಚ್ಚಳವಾಗಿದೆ.
ರಾಜ್ಯದಲ್ಲಿರುವ 250 ಐಪಿಎಸ್ ಅಧಿಕಾಗಳ ಪೈಕಿ 20 ಮಹಿಳಾ ಅಧಿಕಾರಿಗಳಿದ್ದಾರೆ. ಒಟ್ಟಾರೆ ಶೆ. 6 ರಷ್ಟು ಮಹಿಳೆ ಪೇದೆಗಳು ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಂಖ್ಯೆಯನ್ನು ಶೇ.20 ಕ್ಕೆ ಏರಿಸಬೇಕೆಂಬ ಚಿಂತನೆ ಇದೆ ಎಂದರು.

ಇಂದು ವಿವಿಧ ಪದವಿ ಪಡೆದವರು ಪೊಲೀಸ್ ಇಲಾಖೆಯನ್ನೇ ಆಯ್ದುಕೊಳ್ಳುತ್ತಿರುವುದು ಸ್ವಾಗತಾರ್ಹ. ಪದವೀಧರರು, ಸ್ನಾತಕೋತ್ತರ ಪದವಿ ಪಡೆದವರು ಸಹ ನಮ್ಮ ಇಲಾಖೆಗೆ ಸೇರಲು ಆಸಕ್ತಿ ತೋರುತಿದ್ದಾರೆ. ಈಗ ತರಬೇತಿ ಪಡೆದಿರುವ 121 ಮಹಿಳಾ ಪ್ರಶಿಕ್ಷಣಾರ್ಥಿಗಳ ಪೈಕಿ 16 ಜನಸ್ನಾತಕೋತ್ತರ, 96 ಪದವೀಧರರಿದ್ದಾರೆ ಎಂದರು.
ಪೊಲೀಸ್ ಸಿಬ್ಬಂದಿಗೆ ವಸತಿ ಸಮ್ಮುಚ್ಛ ನಿರ್ಮಿಸಿಕೊಡುವ ಕೆಲಸ ಪ್ರಗತಿಯಲ್ಲಿದೆ. ವಿವಿಧ ತಾಲೂಕುಗಳಿಗೆ ಒಟ್ಟು 250ಹೆಚ್ಚು ವಸತಿ ಗೃಹ ನಿರ್ಮಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು. ಇದೀಗ ತರಬೇತಿ ಪಡೆದಿರುವ ಮಹಿಳೆಯರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಕೆಲಸ ನಿರ್ವಹಿಸಿ ಎಂದು ಶುಭಕೋರಿದರು.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications