ನಾನು ಮುಖ್ಯಮಂತ್ರಿ ಆಗಿದ್ದರೆ ಮೂರೇ ದಿನಕ್ಕೆ ನೀರು ಬಿಡ್ತಿದ್ದೆ!
ಬೆಂಗಳೂರು, ಅ. 31: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಗ ವಿಜಯೇಂದ್ರನನ್ನು ಹೊಗಳುತ್ತಾರೆ. ಮಗ ಬಂದಿದ್ದಕ್ಕೆ ಶಿರಾದಲ್ಲಿ ಬಿಜೆಪಿಗೆ ನೆಲೆ ಬಂದಿದೆ ಅಂತಾರೆ. ಹಾಗಾದರೆ ಡಿಸಿಎಂ ಗೋವಿಂದ್ ಕಾರಜೋಳ, ಸಚಿವರಾದ ಶ್ರೀರಾಮುಲು, ಆರ್. ಅಶೋಕ್ ಅವರಿಗೆ ಕಿಮ್ಮತ್ತೇ ಇಲ್ಲವಾ? ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಲೇವಡಿ ಮಾಡಿದ್ದಾರೆ.
ತುಮಕೂರು ಜಿಲ್ಲಾ ಶಿರಾ ಪಟ್ಟಣದಲ್ಲಿ ಜಂಟಿ ಸುದ್ದಿಗೋಷ್ಟೀಯಲ್ಲಿ ಅವರು ಮಾತನಾಡಿದರು. ತಳಸಮುದಾಯಗಳನ್ನು ಕಡೆಗಣಿಸುವುದೇ ಸಿಎಂ ಯಡಿಯೂರಪ್ಪ ಅವರ ಕೆಲಸ. ಮಾಜಿ ಶಾಸಕ ಸುರೇಶ್ ಗೌಡ ಇಲ್ಲಿಯೇ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಡಿಸಿಎಂ ಗೋವಿಂದ್ ಕಾರಜೋಳ ಅವರು ತಳಸಮುದಾಯದ ಮುಖಂಡ, ಎಂಎಲ್ಸಿ ರವಿಕುಮಾರ್ ಅವರೂ ತಳಸಮುದಾಯದ ಮುಖಂಡ. ಪಾಪ ಇವರೆಲ್ಲರೂ ಉಪ ಚುನಾವಣೆಯಲ್ಲಿ ಓಡಾಡ್ತಿದ್ದಾರೆ. ಆದರೆ ಯಡಿಯೂರಪ್ಪ ಮಾತ್ರ ಮಗನನನು ಹೊಗಳುತ್ತಾರೆ. ಮಗ ಬಂದಿದ್ದಕ್ಕೆ ಇಲ್ಲಿ (ಶಿರಾದಲ್ಲಿ) ಬಿಜೆಪಿಗೆ ನೆಲೆ ಬಂತಂತೆ. ಅವರಿಗೆ ಮಾನ ಮರ್ಯಾದೆ ಇದೆಯಾ? ಎಂದು ರಾಜಣ್ಣ ಅವರು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದರು.
ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೊಗಳುತ್ತಿದ್ದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಇದೀಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಯಡಿಯೂರಪ್ಪ ಅವರಿಂದ ಅವಹೇಳನ
ಬಿಜೆಪಿಯ ತಳ ಸಮುದಾಯದ ಮುಖಂಡರಿಗಾದರೂ ಮಾನ-ಮರ್ಯಾದೆ ಇದೆಯಾ ಎಂದು ಪ್ರಶ್ನೆ ಮಾಡಿರುವ ರಾಜಣ್ಣ ಅವರು, ಮರ್ಯಾದೆ ಇದ್ದರೆ ಮೊದಲು ಎಲ್ಲರೂ ಶಿರಾ ಪಟ್ಟಣದಿಂದ ಹೊರಡಲಿ ಎಂದು ಆಗ್ರಹಿಸಿದರು. ಬಿಜೆಪಿಯ ತಳಸಮುದಾಯದ ನಾಯಕರನ್ನೇ ಸಿಎಂ ಯಡಿಯೂರಪ್ಪ ಅವರು ಅವಹೇಳನ ಮಾಡುತ್ತಾರೆ ಎಂದು ಸಿಎಂ ಅವರ ಮಗನ ಪರ ಹೇಳಿಕೆಗೆ ರಾಜಣ್ಣ ವ್ಯಂಗ್ಯವಾಡಿದ್ದಾರೆ.

ಎಲ್ಲ ಅಭಿವೃದ್ಧಿ ನಾವೇ ಮಾಡಿದ್ದು!
ತುಮಕೂರಿನಲ್ಲಿ ವಿಶ್ವವಿದ್ಯಾಲಯ ಆಗಿರುವುದಕ್ಕೆ ಎಸ್.ಎಂ. ಕೃಷ್ಣ, ಡಾ. ಜಿ. ಪರಮೇಶ್ವರ್ ಅವರು ಕಾರಣ. ನಮ್ಮ ಅಭ್ಯರ್ಥಿ, ಮಾಜಿ ಸಚಿವ ಟಿಬಿ ಜಯಚಂದ್ರ ಹಲವು ಕೊಡುಗೆಗಳನ್ನು ಕೊಟ್ಟಿದ್ದಾರೆ. ಕ್ಷೇತ್ರದ ಬ್ಯಾರೇಜ್ಗಳನ್ನು ನೋಡಿದ್ರೆ ಸಾಕು ಅರ್ಥವಾಗುತ್ತದೆ. ಕುರಿ ಸತ್ತರೆ 5 ಸಾವಿರ ರೂ. ಘೋಷಣೆ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಅದನ್ನ ರದ್ಧುಮಾಡಿದ್ದು ಬಿಜೆಪಿ ಸರ್ಕಾರ ಎಂದು ರಾಜಣ್ಣ ವಾಗ್ದಾಳಿ ನಡೆಸಿದರು.

ಮೂರೇ ದಿನಕ್ಕೆ ನೀರು ಬಿಡ್ತಿದ್ದೆ
ಸಿಎಂ ಯಡಿಯೂರಪ್ಪ ಅವರು ಭಾಷಣ ಮಾಡಿ ಹೋಗುತ್ತಾರೆ. ಆರು ತಿಂಗಳೊಳಗೆ ನೀರು ಬಿಡುತ್ತೇನೆ ಎಂದು ಹೇಳಿ ಹೋಗಿದ್ದಾರೆ. ನೀರು ಬಿಡುವುದಕ್ಕೆ ಆರು ತಿಂಗಳು ಬೇಕಾ? ನಾನು ಸಿಎಂ ಆಗಿದ್ದರೆ ಮೂರೇ ದಿನಕ್ಕೆ ನೀರು ಬಿಡ್ತಿದ್ದೆ. ನಾಲೆ ಇದೆ, ನೀರು ಬಿಟ್ಟರೆ ಸಾಕು ನೀರು ಬರುತ್ತದೆ ಎಂದು ಸಿಎಂ ಯಡಿಯೂರಪ್ಪ ಅವರ ಹೇಳಿಕೆಗೆ ಕೆ. ಎನ್. ರಾಜಣ್ಣ ಟಾಂಗ್ ಕೊಟ್ಟಿದ್ದಾರೆ.

ಕ್ಷೇತ್ರದವರಲ್ಲದವರು ಇಲ್ಲಿರಬಾರದು
ಕ್ಷೇತ್ರದವರಲ್ಲದವರು ಇಲ್ಲಿರಬಾರದು ಎಂದು ಕೆ.ಎನ್. ರಾಜಣ್ಣ ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗ ಆ ಕೆಲಸವನ್ನು ಮಾಡಬೇಕು. ಹಾಗೆ ಮಾಡದಿದ್ದರೆ ನಮ್ಮಹಳ್ಳಿಯವರೇ ಹೊರಗಿನವರನ್ನು ಹೊರ ಹಾಕುತ್ತಾರೆ ಎಂದು ಎಚ್ಚರಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications