ಕಷ್ಟ ಹೇಳಿಕೊಂಡ ಶಾಸಕ: 'ಸುಮ್ಮನಿರ್ರಿ' ಎಂದ ಯಡಿಯೂರಪ್ಪ
ತುಮಕೂರು, ಅಕ್ಟೋಬರ್ 18: ಸಿಎಂ ಯಡಿಯೂರಪ್ಪ ಅವರ ಮುಂದೆ ತುಂಬಿದ ವೇದಿಕೆಯಲ್ಲಿ ಕ್ಷೇತ್ರದ ಕಷ್ಟ ಹೇಳಿಕೊಂಡ ಶಾಸಕನನ್ನು 'ಸಾಕು ಸುಮ್ಮನಾಗ್ರಿ' ಎಂದು ಯಡಿಯೂರಪ್ಪ ಗದರಿದ್ದಾರೆ.
ತುಮಕೂರಿನ ಕುಣಿಗಲ್ ಸಮೀಪದ ಎಡೆಯೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ಕುಣಿಗಲ್ನ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರು ಕ್ಷೇತ್ರದ ಸಮಸ್ಯೆಗಳನ್ನು ವೇದಿಕೆ ಮೇಲೆ ಯಡಿಯೂರಪ್ಪ ಗಮನಕ್ಕೆ ತರುವ ಯತ್ನ ಮಾಡಿದರು.
ಮೈತ್ರಿ ಸರ್ಕಾರವಿದ್ದಾಗ ಕುಣಿಗಲ್ ಕ್ಷೇತ್ರ ಅಭಿವೃದ್ಧಿಗೆ 720 ಕೋಟಿ ಅನುದಾನ ನೀಡಲಾಗಿತ್ತು, ಆದರೆ ಅದನ್ನು ತಡೆಹಿಡಿಯಲಾಗಿದೆ. ಯಾವ ಕಾರಣಕ್ಕೆ ತಡೆಹಿಡಿಯಲಾಗಿದೆ ಗೊತ್ತಿಲ್ಲ ಎಂದು ಶಾಸಕ ಡಾ.ರಂಗನಾಥ್ ಹೇಳಿದರು.
'ಎಡೆಯೂರು ನಿಮ್ಮ ಮನೆ ದೇವರು, ದೇವರು ಇರುವ ಕ್ಷೇತ್ರ ಕುಣಿಹಲ್ ಈ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಎಕ್ಸ್ಪ್ರೆಸ್ ಕೆನಾಲ್ ಯೋಜನೆ ವಿಚಾರದಲ್ಲಿ ಅನ್ಯಾಯವಾಗಿದೆ. ನೀರಾವರಿ ವಿಷಯದಲ್ಲಿ ಕಳೆದ 25 ವರ್ಷದಿಂದಲೂ ಕ್ಷೇತ್ರಕ್ಕೆ ಅನ್ಯಾಯವಾಗಿದೆ' ಎಂದು ಶಾಸಕ ರಂಗನಾಥ್ ಮಾತು ಮುಂದುವರೆಸಿದರು.

'ಆಯ್ತು ಸಾಕು ಮುಗಿಸ್ರಿ' ಎಂದು ಗದರಿದ ಯಡಿಯೂರಪ್ಪ
ಈ ನಡುವೆ ಶಾಸಕರನ್ನು ತಡೆದ ಯಡಿಯೂರಪ್ಪ, 'ಆಯ್ತು ರೀ ಸಾಕು ಮುಗಿಸ್ರಿ' ಎಂದು ಏರಿದ ಧ್ವನಿಯಲ್ಲಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ರಂಗನಾಥ್, 'ಎರಡು ನಿಮಿಷ ಕೊಡಿ ಮುಗಿಸ್ತೇನೆ' ಎಂದು ಹೇಳಿ ಮಾತು ಮುಂದುವರೆಸಿದರು.

ಹಣಕಾಸು ಸ್ಥಿತಿ ಬಗ್ಗೆ ನನಗೆ ಮಾತ್ರವೇ ಗೊತ್ತು: ಯಡಿಯೂರಪ್ಪ
ರಂಗನಾಥ್ ಮಾತಿನ ನಂತರ ಮಾತನಾಡಿದ ಯಡಿಯೂರಪ್ಪ, 'ರಾಜ್ಯದ ಹಣಕಾಸು ಸ್ಥಿತಿ ಹೇಗಿದೆ ಎಂದು ನನಗೆ ಮಾತ್ರ ಗೊತ್ತಿದೆ, ನೀರಾವರಿ ವಿಚಾರದಲ್ಲಿ ಅನ್ಯಾಯ ಮಾಡುವ ವ್ಯಕ್ತಿ ನಾನಲ್ಲ, ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಭವಿಷ್ಯದಲ್ಲಿ ನೀರಾವರಿಗೆ ಹಾಗೂ ಅಭಿವೃದ್ಧಿ ಯೋಜನೆಗೆ ಹಣಕಾಸು ನೀಡುತ್ತೇನೆ' ಎಂದು ಹೇಳಿದರು.

ಮೈತ್ರಿ ಸರ್ಕಾರ ಸರಿಯಾಗಿ ಯೋಜನೆ ಮಾಡಿಲ್ಲ: ಯಡಿಯೂರಪ್ಪ
'ಹಿಂದಿನ ಸರ್ಕಾರವು ಹಣಕಾಸಿನ ಸ್ಥಿತಿ ಅರಿವಿಲ್ಲದೆ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ. ನಮ್ಮ ಸರ್ಕಾರ ಇನ್ನೂ ಐದಾರು ವರ್ಷ ಹಣಕಾಸು ಕ್ರೂಡೀಕರಣ ಮಾಡಿದರೂ ಅಭಿವೃದ್ಧಿ ಕಾರ್ಯ ಪೂರೈಸುವುದು ಕಷ್ಟ ಎಂದು ಯಡಿಯೂರಪ್ಪ ಹೇಳಿದರು.

ನೆರೆ ಪರಿಸ್ಥಿತಿ ಕಡೆ ಹೆಚ್ಚಿನ ಗಮನ: ಯಡಿಯೂರಪ್ಪ
ನೆರೆ ಪರಿಸ್ಥಿತಿ ಇರುವ ಕಡೆಗಳಲ್ಲಿ ಸರ್ಕಾರವು ಹೆಚ್ಚಿನ ಹಣಕಾಸು ಖರ್ಚು ಮಾಡುತ್ತಿದೆ, ಅಲ್ಲಿನ ಪರಿಹಾರ ಕಾರ್ಯ, ಪುನರ್ವಸತಿ ಇನ್ನಿತರೆ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನವಹಿಸಿದೆ ಹಾಗಾಗಿ ಉಳಿದ ಕ್ಷೇತ್ರಗಳತ್ತ ಸೂಕ್ತಗಮನ ವಹಿಸಲಾಗಿಲ್ಲವೆಂದು ಸಬೂಬು ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications