ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು:ತೋಟದಲ್ಲಿ ನೀರು ಹಾಯಿಸುತ್ತಿದ್ದ ಯುವಕನ ಮೇಲೆ ಕರಡಿ ದಾಳಿ

By Nayana
|
Google Oneindia Kannada News

ತುಮಕೂರು, ಜು.28: ತುಮಕೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ವಿಪರೀತವಾಗಿದೆ. ಜಮೀನಿನಲ್ಲಿ ನೀರು ಹರಿಸುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗದಲ್ಲಿ ಈ ಘಟನೆ ನಡೆದಿದೆ, ದಿನೇಶ್‌(23) ದಾಳಿಗೆ ಒಳಗಾದವರು. ದಿನೇಶ್‌ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಕೊರಟಗೆರೆ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡುವಂತಾಗಿದೆ, ಚಿರತೆ, ಕರಡಿ, ಆನೆಯ ದಾಳಿಗಳು ಇಲ್ಲಿಯ ಜನಕ್ಕೆ ಹೊಸತೇನಲ್ಲ ಎನ್ನುವಂತಾಗಿದೆ.

Bear attacks man near Koratagere

ಕೊರಟಗೆರೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಮೇಲಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತ ಗಮನಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಾಲೆಗೆ ಹೋಗುವ ಪುಟ್ಟ ಮಕ್ಕಳಿದ್ದಾರೆ, ವೃದ್ಧರಿದ್ದಾರೆ ಏಕಾಏಕಿ ಪ್ರಾಣಿಗಳು ಕಾಡಿನಂದ ಬಂದರೆ ನಮ್ಮ ಗತಿಏನು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

English summary
A 23 years old man, who busy with supplying water in his farm land was attacked by a wild bear near Koratagere of Tumakur district on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X