ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಟಿಬಿ ಜಯಚಂದ್ರ ಅಸಮಾಧಾನ

|
Google Oneindia Kannada News

ತುಮಕೂರು, ನವೆಂಬರ್ 20: ರೈತ ಮಹಿಳೆಗೆ ಅಷ್ಟು ಲಘುವಾಗಿ ಕುಮಾರಸ್ವಾಮಿಯವರು ಮಾತನಾಡಬಾರದಿತ್ತು ಎಂದು ಮಾಜಿ ಸಚಿವ ಟಿಬಿ ಜಯಚಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ರೈತರ ಪ್ರತಿಭಟನೆ, ಕುಮಾರಸ್ವಾಮಿ ಕ್ಷಮೆ ಕೇಳಬೇಕೆನ್ನುವ ಪಟ್ಟು ಒಟ್ಟಿನಲ್ಲಿ ಈ ಎಲ್ಲಾ ಬೆಳವಣಿಗೆಗಳು ನನಗೆ ಬೇಸರ ತಂದಿದೆ, ಮಾತನಾಡುವಾಗ ಸೂಕ್ಷ್ಮವಾಗಿ ಎಚ್ಚರ ವಹಿಸಿ ಮಾತನಾಡಬೇಕು ಎಂದರು.

ರೈತ ಮಹಿಳೆಗೆ ಬೈಗುಳ, ವಿವಾದಕ್ಕೆ ಸ್ಪಷ್ಟನೆ ಕೊಟ್ಟರು ಕುಮಾರಸ್ವಾಮಿರೈತ ಮಹಿಳೆಗೆ ಬೈಗುಳ, ವಿವಾದಕ್ಕೆ ಸ್ಪಷ್ಟನೆ ಕೊಟ್ಟರು ಕುಮಾರಸ್ವಾಮಿ

ರೈತರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಬೇಕು, ಅವರ ಮನವಿಯನ್ನು ಜಾಗೃತೆಯಿಂದ ಪರಿಗಣಿಸಬೇಕು, ರೈತರ ಸಮಸ್ಯೆಗಳು ಬಂದಾಗ ನಾನು ಕೂಡ ಬಹಳ ಪ್ರಾಮುಖ್ಯತೆ ಕೊಟ್ಟು ಚರ್ಚೆ ಮಾಡುತ್ತಿದ್ದೆ, ರೈತರು ಈಗ ಬಹಳ ಕಷ್ಟದಲ್ಲಿದ್ದಾರೆ, ನೂತಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ. ರಾಜ್ಯದಲ್ಲಿ ಅತಿವೃಷ್ಟಿ-ಅನಾವೃಷ್ಟಿ ಎರಡೂ ಆಗಿವೆ. ಹಾಗಾಗಿ ರೈತರಿಗೆ ಕಷ್ಟ ಬಂದಿದೆ. ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸಬೇಕು, ರೈತರ ಸಾಲಮನ್ನಾ ವಿಚಾರ ಕಳೆದ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ ಎಂದರು.

Former minister jayachandra express his displeasure over HDK

ನಾನು ಕ್ಷೇತ್ರದಲ್ಲಿ ಕಾರ್ಯಕರ್ತರಿಂದ ದೂರ ಉಳಿದಿಲ್ಲ. ಅವರ ಜತೆ ಇದ್ದೇನೆ. ಶಿರಾದಲ್ಲಿ ಎಸ್‍ಡಿಪಿಐ ಪಕ್ಷ ತಲೆ ಎತ್ತಿದೆ. ನಿಮ್ಮ ಗಮನಕ್ಕೆ ಬಂದಿಲ್ಲವೆ ಎಂದಾಗ ನನಗೆ ಗೊತ್ತಿಲ್ಲ ಎಂದರು. ಶಿರಾದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ.

ಸರ್ಕಾರಕ್ಕೆ 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂಪಡೆದ ರೈತರು ಸರ್ಕಾರಕ್ಕೆ 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂಪಡೆದ ರೈತರು

ಕಾನೂನು ಬಾಹಿರ ಚಟುವಟಿಕೆಗಳು ಎಲ್ಲೆ ಮೀರಿ ನಡೆಯುತ್ತಿವೆ ಎಂಬ ಮಾಹಿತಿ ಇದೆ ಎಂದು ಕೇಳಿದ ಪ್ರಶ್ನೆಗೆ ನೂತನ ಶಾಸಕರಿದ್ದಾರೆ. ಈ ಬಗ್ಗೆ ಅವರನ್ನು ಕೇಳಿ ಎಂದು ಹೇಳಿದರು.

English summary
Former minister TB Jayachandra express his displeasure over chief minister HD Kumaraswamy remark about lady farmer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X