ಸಿದ್ದಗಂಗಾಶ್ರೀಗಳ ನಿಧನವಾರ್ತೆ ತಡವಾಗಿ ಘೋಷಿಸಿದ ಕಾರಣ ಬಹಿರಂಗ!
Recommended Video

ಬೆಂಗಳೂರು, ಜನವರಿ 21 : ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ಸಮಯ ಹಾಗೂ ನಿಧನದ ವಾರ್ತೆಯನ್ನು ತಡವಾಗಿ ಘೋಷಿಸಿದ್ದೇಕೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಆದರೆ, ಇದೀಗ ನಿಧನ ವಾರ್ತೆ ತಡವಾಗಿ ಪ್ರಕಟಿಸಿದ ಕಾರಣ ಬಹಿರಂಗವಾಗಿದೆ. ಇದು ಶಿವಕುಮಾರ ಸ್ವಾಮೀಜಿಗಳ ಕೊನೆಆಸೆ ಕೂಡಾ ಆಗಿತ್ತು ಎಂಬುದು ಹುಬ್ಬೇರಿಸುವ ವಿಚಾರ.
ಸೋಮವಾರ ಜನವರಿ 21ರ ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ಮಧ್ಯಾಹ್ನ 1.56ಕ್ಕೆ ಅಧಿಕೃತವಾಗಿ ಘೋಷಿಸಲಾಗಿದೆ. ಅದರೆ, ನಿಧನ ವಾರ್ತೆಯನ್ನು ವಿಳಂಬವಾಗಿ ಪ್ರಕಟಿಸಲು ಶ್ರೀಗಳ ಅಂತಿಮ ಇಚ್ಛೆಯೇ ಕಾರಣವೆಂದು ಹೇಳಲಾಗಿದೆ.
ಮಂಗಳವಾರ ಮಧ್ಯಾಹ್ನ 3 ಗಂಟೆ ತನಕ ಸಾರ್ವಜನಿಕ ದರ್ಶನಕ್ಕಾಗಿ ಸಿದ್ದಗಂಗಾ ಮಠದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರದಂದೇ ವಿರಕ್ತ ಮಠದ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ.

ಅನ್ನದಾಸೋಹಕ್ಕೆ ಅಡ್ಡಿಯಾಗಬಾರದು: ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಹಲವು ದಶಕಗಳಿಂದ ನಿತ್ಯ ದಾಸೋಹ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ. ಊಟದ ಸಮಯಕ್ಕೂ ಮುನ್ನ ಶ್ರೀಗಳ ನಿಧನದ ಸುದ್ದಿ ತಿಳಿದು ಬಂದಿದೆ.
ಆದರೆ, ಸಿದ್ದಗಂಗಾ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು, ಮಠಕ್ಕೆ ಹಸಿದು ಬಂದವರಿಗೆ ಮೊದಲಿಗೆ ಅನ್ನವನ್ನು ನೀಡಿ, ಅನ್ನ ದಾಸೋಹ ನೆರವೇರಿದ ಬಳಿಕವೇ ಲಿಂಗೈಕ್ಯರಾದ ಸುದ್ದಿಯನ್ನು ಬಹಿರಂಗಪಡಿಸಲಾಗಿದೆ. ಈ ಬಗ್ಗೆ ಶ್ರೀಗಳು ಮುಂಚಿತವಾಗಿ ಕಿರಿಯ ಸ್ವಾಮೀಜಿಗಳಾದ ಸಿದ್ದಲಿಂಗ ಸ್ವಾಮೀಜಿಗಳಿಗೆ ತಿಳಿಸಿದ್ದರಂತೆ, ಮಠಕ್ಕೆ ಬರುವ ಭಕ್ತರು ಹಸಿದುಕೊಂಡಿರಬಾರದು, ತಾವು ಲಿಂಗೈಕ್ಯರಾದರೂ ನಿತ್ಯ ಕಾಯಕಕ್ಕೆ ಅಡ್ಡಿಯುಂಟಾಗಬಾರದು ಎಂದು ಸೂಚನೆ ನೀಡಿದ್ದರಂತೆ. ಹೀಗಾಗಿ, ಶ್ರೀಗಳ ನಿಧನದ ವಾರ್ತೆಯನ್ನು ತಡವಾಗಿ ಘೋಷಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications