'ಮತಾಂತರ ತಪ್ಪಲ್ಲ ಅಂದರೆ ಮರು ಮತಾಂತರ ತಪ್ಪೇ?'
ತುಮಕೂರು, ಜ. 12 : ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ 'ಘರ್ ವಾಪಸಿ' ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಸಮರ್ಥಿಸಿಕೊಂಡಿದ್ದಾರೆ. 'ಮತಾಂತರ ತಪ್ಪಲ್ಲ ಅನ್ನುವುದಾದದರೆ ಮರು ಮತಾಂತರ ಹೇಗೆ ತಪ್ಪಾಗುತ್ತದೆ?' ಎಂದು ಅವರು ಪಶ್ನಿಸಿದ್ದಾರೆ.
ತುಮಕೂರಿನಲ್ಲಿ ಹೊಯ್ಸಳ ಕರ್ನಾಟಕ ಸಂಘದ ವಾರ್ಷಿಕೋತ್ಸವದಲ್ಲಿ ಭಾನುವಾರ ಪಾಲ್ಗೊಂಡಿದ್ದ ಎಸ್.ಎಲ್.ಭೈರಪ್ಪ ಅವರು ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದರು.

ಮರು ಮತಾಂತರ : 'ಘರ್ ವಾಪಸಿ' ಕಾರ್ಯಕ್ರಮದ ಬಗ್ಗೆ ಮಾತನಾಡಿದ ಭೈರಪ್ಪ ಅವರು, 'ಆಸೆ, ಆಮಿಷ ತೋರಿಸಿ ಮತಾಂತರ ಮಾಡುವುದು ತಪ್ಪು. ಆದರೆ, ಯಾವುದೇ ಮತದ ನಂಬಿಕೆಗಳನ್ನು ಒಪ್ಪಿ, ಅದಕ್ಕೆ ಸೇರ್ಪಡೆಯಾಗುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟರು. [ಭೈರಪ್ಪಗೆ ರಾಷ್ಟ್ರೀಯ ಪ್ರೊಫೆಸರ್ ಗೌರವ]
ಪ್ರತಿಭಟನೆಯಿಂದ ಪ್ರಯೋಜನವಿಲ್ಲ : ಜಾತಿ ವ್ಯವಸ್ಥೆ ಬಗ್ಗೆ ಮಾತನಾಡಿದ ಎಸ್.ಎಲ್.ಭೈರಪ್ಪ ಅವರು, 'ಜಾತಿ ಹೋಗಬೇಕೆಂದು ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ಮಾಡುವುದರಿಂದ ಪ್ರಯೋಜನವಿಲ್ಲ. ಶೇ 15 ರಷ್ಟು ಮಂದಿ ಅಂತರ್ಜಾತಿ ವಿವಾಹವಾದರೆ ಕ್ರಮೇಣ ಜಾತಿ ನಾಶವಾಗಲಿದೆ' ಎಂದು ಹೇಳಿದರು. [ಘರ್ ವಾಪಸಿ ಕರೀನಾ ಕಪೂರ್ ಚಿತ್ರ : ಸೈಫ್ ಗರಂ]
ಸಾಹಿತ್ಯ ಸಮ್ಮೇಳನಗಳು : ಸಾಹಿತ್ಯ ಸಮ್ಮೇಳನಗಳ ವೇದಿಕೆಗಳ ಮೇಲೆ ರಾಜಕಾರಣಿಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದ ಭೈರಪ್ಪ ಅವರು ಮಹಾರಾಷ್ಟ್ರದ ಉದಾಹರಣೆ ನೀಡಿದರು. ಮಹಾರಾಷ್ಟ್ರದಲ್ಲಿ ನಡೆದ ಸಮ್ಮೇಳನದಲ್ಲಿ ರಾಜಕಾರಣಿಗಳಿಗೆ ವೇದಿಕೆ ಮೇಲೆ ಅವಕಾಶ ಇರುವುದಿಲ್ಲ. ಒಂದು ವೇಳೆ ಇದ್ದರೂ ಅಲ್ಲಿ ಭಾಷಣ ಮಾಡುವುದಿಲ್ಲ ಎಂದು ತಿಳಿಸಿದರು. [ಅರಿವಿನ ಪರಿಧಿಯ ಹೊರಗೆ ಉಡಾಯಿಸುವ ವಿಮಾನ 'ಯಾನ']
ಊಟ-ತಿಂಡಿ ದೊಡ್ಡ ವಿಚಾರವಲ್ಲ : 'ನೆರೆಯ ರಾಜ್ಯಗಳಲ್ಲಿ ಸಾಹಿತ್ಯ ಸಮ್ಮೇಳನಗಳಲ್ಲಿ ಅತಿಥಿ ಸಾಹಿತಿಗಳನ್ನು ತುಂಬ ಚೆನ್ನಾಗಿ ನೋಡಿಕೊಳ್ಳುತ್ತಾರೆ. ಸಮ್ಮಳೇನದಲ್ಲಿ ಊಟ-ತಿಂಡಿ ದೊಡ್ಡ ವಿಚಾರ ಆಗಿರುವುದಿಲ್ಲ'. 'ನಮ್ಮ ರಾಜ್ಯದಲ್ಲಿ ಸಮ್ಮೇಳನಕ್ಕೆ ಒಂದು ತಿಂಗಳ ಹಿಂದೆಯೇ ಅಲ್ಲಿಂದ ಚಪಾತಿ, ರೊಟ್ಟಿ ಬಂತು ಎಂದು ಸುದ್ದಿ ಬರಲು ಆರಂಭವಾಗುತ್ತದೆ' ಇದು ನಿಲ್ಲಬೇಕು ಎಂದು ಅಭಿಪ್ರಾಯಪಟ್ಟರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications