ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರವಿ ಪೂಜಾರಿಯಿಂದ ಜೆಡಿಎಸ್ ಶಾಸಕನಿಗೆ ಕೊಲೆ ಬೆದರಿಕೆ

By Manjunatha
|
Google Oneindia Kannada News

ತುಮಕೂರು, ಜನವರಿ 17: ಭೂಗತ ಪಾತಕಿ ರವಿ ಪೂಜಾರಿ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಭೂಗತ ಪಾತಕಿ ರವಿ ಪೂಜಾರಿ ಎಂದು ಹೇಳಿಕೊಂಡ ವ್ಯಕ್ತಿ ನನ್ನ ಮೊಬೈಲ್‌ಗೆ ಕರೆ ಮಾಡಿ, ಬಳಿಕ ಸಂದೇಶ ಕಳುಹಿಸಿ ಬೆದರಿಕೆ ಹಾಕಿದ್ದಾನೆ' ಎಂದು ಸಿ.ಬಿ.ಸುರೇಶ್‌ ಬಾಬು ತಿಳಿಸಿದ್ದಾರೆ.

ಸಚಿವ ತನ್ವೀರ್ ಸೇಠ್ ಗೆ ರವಿ ಪೂಜಾರಿಯಿಂದ ಬೆದರಿಕೆ ಕರೆಸಚಿವ ತನ್ವೀರ್ ಸೇಠ್ ಗೆ ರವಿ ಪೂಜಾರಿಯಿಂದ ಬೆದರಿಕೆ ಕರೆ

'ಡಿಸೆಂಬರ್ 27ರಂದು ನನ್ನ ಮೊಬೈಲ್‌ಗೆ ಕರೆ ಮಾಡಿದ ರವಿಪೂಜಾರಿ 10 ಕೋಟಿ ರೂಪಾಯಿ ನೀಡಬೇಕು. ಕೊಡದಿದ್ದರೆ ನೀನು ಮತ್ತು ನಿನ್ನ ಕುಟುಂಬದವರು ಬದುಕಿ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದರು' ಎಂದು ತಿಳಿಸಿದರು.

Underworld don Ravi poojari threatens to jds MLA

'ಡಿ. 28ರ ಬೆಳಿಗ್ಗೆ ಅದೇ ನಂಬರ್‌ನಿಂದ 'ನಾನು ಮಾಫಿಯಾ ಡಾನ್‌ ರವಿ ಪೂಜಾರಿ. ನನಗೆ 10 ಕೋಟಿ ರೂಪಾಯಿ ನೀಡಬೇಕು. ಈ ಕುರಿತು ಪೊಲೀಸರಿಗೆ ತಿಳಿಸಿದರೆ ಜೀವ ತೆಗೆಯುತ್ತೇನೆ' ಎಂದು ಇಂಗ್ಲಿಷ್‌ನಲ್ಲಿ ಸಂದೇಶ ರವಾನಿಸಿದ್ದರು. ಈ ಬಗ್ಗೆ ಉಪ್ಪಾರಪೇಟೆ ಡಿವೈಎಸ್‌ಪಿ ಬಳಿ ನೇರವಾಗಿ ದೂರು ದಾಖಲಿಸಿದ್ದೇನೆ' ಎಂದು ಹೇಳಿದರು.

ಮಂಗಳೂರು ಶೂಟೌಟ್ ಹಿಂದೆ ಭೂಗತ ಪಾತಕಿ ರವಿ ಪೂಜಾರಿ?ಮಂಗಳೂರು ಶೂಟೌಟ್ ಹಿಂದೆ ಭೂಗತ ಪಾತಕಿ ರವಿ ಪೂಜಾರಿ?

ಕೆಲವೇ ದಿನಗಳ ಹಿಂದೆ ಮಂತ್ರಿ ತನ್ವೀರ್ ಸೇಠ್‌ಗೂ ರವಿ ಪೂಜಾರಿ ಬೆದರಿಕ ಹಾಕಿದ್ದಾ ಎನ್ನಲಾಗಿತ್ತು, ಅದಕ್ಕೂ ಮುಂಚೆ ಸಂಸದ ಡಿ.ಕೆ.ಸುರೇಶ್ ಅವರಿಗೂ ರವಿ ಪೂಜಾರಿ ಬೆದರಿಕೆ ಕರೆ ಮಾಡಿದ್ದ.

English summary
Chikkanayakanahalli JDS MLA CB Suresh siad Underworld don Ravi poojari threatened him. He said 'a guy called me and introduced him as Ravi Poojari and asked for 10 crore rupees. if i fails to give he said he will kill me'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X