ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು ನಗರ ಬಿಜೆಪಿ ಟಿಕೆಟ್ ಶೀಘ್ರ ಪ್ರಕಟಿಸಲು ಬಿಎಸ್‌ವೈಗೆ ಮನವಿ

By ಕುಮಾರಸ್ವಾಮಿ
|
Google Oneindia Kannada News

ತುಮಕೂರು, ಮಾರ್ಚ್ 20: ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಶೀಘ್ರವಾಗಿ ಘೋಷಿಸುವಂತೆ ಒತ್ತಾಯಿಸಿ ತುಮಕೂರು ನಗರ ವೀರಶೈವ ಸಮಾಜದ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿತು.

ತುಮಕೂರಿನಲ್ಲಿ ಬಿಜೆಪಿ ಯಾರಿಗೂ ಖಚಿತವಾಗದೆ ಕಾರ್ಯಕರ್ತರಲ್ಲಿ ಗೊಂದಲ ಏರ್ಪಟ್ಟಿರುವ ಕಾರಣ, ಬೆಂಗಳೂರಿನಲ್ಲಿ ಮಂಗಳವಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ವೀರಶೈವ ಸಮಾಜದ ಮುಖಂಡರು ಆದಷ್ಟು ಬೇಗ ಸಮರ್ಥ ಮತ್ತು ಈಗ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ಗೊಂದಲವನ್ನು ನಿವಾರಿಸುವ ಶಕ್ತಿ, ಜಾಣ್ಮೆಯುಳ್ಳ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು.

ತುಮಕೂರಿನಲ್ಲಿ ಪ್ರಸ್ತುತ ಬಿಜೆಪಿಯ ಟಿಕೆಟ್‌ ಬಗ್ಗೆ ಭಾರಿ ಚರ್ಚೆ ಮತ್ತು ಗೊಂದಲ ಏರ್ಪಟ್ಟಿದ್ದು, ಟಿಕೆಟ್‌ಗಾಗಿ ಹಲವು ಅಭ್ಯರ್ಥಿಗಳು ಪ್ರಯತ್ನಿಸುತ್ತಿದ್ದಾರೆ, ಹೀಗಾಗಿ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದು ವೀರಶೈವ ಮುಖಂಡರು ಬಿಎಸ್‌ವೈ ಅವರಿಗೆ ಮನವರಿಕೆ ಮಾಡಿಕೊಟ್ಟರು.

Veerashaiva leaders demand to announce Tumkur urban ticket urgently

ತುಮಕೂರು ನಗರ ವೀರಶೈವ ಸಮಾಜದ ಅಧ್ಯಕ್ಷರಾದ ಟಿ.ಬಿ ಶೇಕರ್. ಉಪಾಧ್ಯಕ್ಷ ಚಂದ್ರಮೌಳಿ.ವೀರಶೈವ ಸಮಾಜದ ಮುಖಂಡರಾದ ಹೆಬ್ಬಾಕ ಮಲ್ಲಿಕಾರ್ಜುನ್.ಕೋರಿ ಮಂಜಣ್ಣ.ಕಲ್ಯಾಣ್ ಕುಮಾರ್ .ಕೆಜೆ ರುದ್ರಪ್ಪ.ಏಕಾಂತ್ ಇತರರು ಈ ವೇಳೆ ಉಪಸ್ತಿತರಿದ್ದರು.

English summary
Tumkur Veerashaiva community leaders meet BJP state president Yeddyurappa and demand to announce Tumkur urban BJP ticket urgently. They explains BSY that party workers are now in confusion so soon announce the ticket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X