ತುಮಕೂರಿಗೆ ಜ.22ರಂದು ಮೋದಿ ಆಗಮಿಸುವುದು ಅನುಮಾನ
Recommended Video
ತುಮಕೂರು, ಜನವರಿ 21 : ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆಯೇ?. ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸುವುದು ಇನ್ನೂ ಖಚಿವಾಗಿಲ್ಲ.
ತುಮಕೂರಿನಲ್ಲಿ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಶ್ರೀಗಳ ಅಂತಿಮ ದರ್ಶನಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರು ಆಪೇಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ, ಭದ್ರತಾ ದೃಷ್ಟಿಯಿಂದ ಅದು ಸಾಧ್ಯವಾಗುತ್ತಿಲ್ಲ' ಎಂದರು.
ಸರ್ಕಾರವೇ ಸಿದ್ದಗಂಗಾ ಶ್ರೀಗಳ ಮುಂದೆ ಕ್ಷಮಾಪಣೆ ಕೇಳಿತ್ತು ಆಗೊಮ್ಮೆ
'ಮಠದಲ್ಲಿ ಮಂಗಳವಾರ ಸುಮಾರು 8 ಲಕ್ಷ ಜನರು ಸೇರುವ ಸಾಧ್ಯತೆ ಇದೆ. ಮೋದಿ ಅವರು ಬಂದರೆ ಭಕ್ತರಿಗೆ ತೊಂದರೆ ಆಗುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಮೋದಿ ಭೇಟಿಗೆ ಪೊಲೀಸರು ಇನ್ನೂ ಅವಕಾಶ ನೀಡಿಲ್ಲ' ಎಂದು ಹೇಳಿದರು.
ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಸಮಯದ ಬಗ್ಗೆ ಜ್ಯೋತಿಷ್ಯ ಏನು ಹೇಳುತ್ತದೆ?
ಶಿವಕುಮಾರ ಶ್ರೀಗಳ ನಿಧನದ ಸುದ್ದಿ ತಿಳಿದ ಬಳಿಕ ನರೇಂದ್ರ ಮೋದಿ ಅವರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದರು. ಮಂಗಳವಾರ ಅವರು ತುಮಕೂರಿಗೆ ಭೇಟಿ ನೀಡಬಹುದು ಎಂಬ ನಿರೀಕ್ಷೆ ಇತ್ತು.
I have had the privilege to visit the Sree Siddaganga Mutt and receive the blessings of His Holiness Dr. Sree Sree Sree Sivakumara Swamigalu.
— Narendra Modi (@narendramodi) January 21, 2019
The wide range of community service initiatives being done there are outstanding and are at an unimaginably large scale. pic.twitter.com/wsmRp2cERd
'ಡಾ.ಶಿವಕುಮಾರ ಸ್ವಾಮಿಗಳು ಬಡವರು ಮತ್ತು ಹಿಂದುಳಿದವರಿಗಾಗಿ ಬದುಕಿದವರು. ಬಡತನ, ಹಸಿವು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮನ್ನು ಮೀಸಲಿಟ್ಟಿದ್ದರು. ಬಡವರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಒದಗಿಸಿದವರು. ಅವರು ಹಮ್ಮಿಕೊಂಡಿದ್ದ ಸಮಾಜ ಸೇವಾ ಕಾರ್ಯಗಳು ಅತ್ಯುತ್ತಮವಾಗಿದ್ದವಲ್ಲದೆ, ಕಲ್ಪಿಸಿಕೊಳ್ಳಲಾರದಷ್ಟು ಬೃಹತ್ತಾಗಿದ್ದವು' ಎಂದು ಮೋದಿ ಟ್ವೀಟ್ ಮಾಡಿದ್ದರು.