ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಣಿಪಾಲದಲ್ಲಿ ಹತ್ತಕ್ಕೂ ಹೆಚ್ಚು ನಾಯಿಗಳ ಸಾವು

|
Google Oneindia Kannada News

ಉಡುಪಿ, ಜೂನ್ 26: ಮಣಿಪಾಲದ ಮಾಂಡವಿ ಎಮೆರಾಲ್ಡ್ ಕಟ್ಟಡದ ಬಳಿ ನಾಯಿಗಳ ಮಾರಣ ಹೋಮ ನಡೆದ ಘಟನೆ ಬೆಳಕಿಗೆ ಬಂದಿದೆ. ಸುಮಾರು ಹತ್ತಕ್ಕೂ ಅಧಿಕ ನಾಯಿಗಳಿಗೆ ವಿಷ ಉಣಿಸಿ ಹತ್ಯೆ ಮಾಡಲಾಗಿದೆ. ಬೀದಿ ನಾಯಿಗಳ ಸಮಸ್ಯೆಯಿಂದ ಮುಕ್ತಿ ಪಡೆಯುವ ಉದ್ದೇಶದಿಂದ ಮೀನಿನಲ್ಲಿ ವಿಷ ಬೆರೆಸಿ ನಾಯಿಗಳಿಗೆ ಎಸೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಕೀಡಿಗೇಡಿಗಳ ಈ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

 ಮಣಿಪಾಲದ ಕೆಎಂಸಿ ಆವರಣದಲ್ಲಿ ಉರುಳಿದ ಮರ; ತಪ್ಪಿದ ಭಾರೀ ಅನಾಹುತ ಮಣಿಪಾಲದ ಕೆಎಂಸಿ ಆವರಣದಲ್ಲಿ ಉರುಳಿದ ಮರ; ತಪ್ಪಿದ ಭಾರೀ ಅನಾಹುತ

ಉಡುಪಿ ನಗರದಲ್ಲಿ ಬೀದಿನಾಯಿಗಳ ಕಾಟ ಹೆಚ್ಚಾಗಿದೆ. ಇತ್ತೀಚೆಗೆ ಬೀದಿ ನಾಯಿಗಳಿಂದ ಸಾಕಷ್ಟು ಜನ ಕಚ್ಚಿಸಿಕೊಂಡು ಆಸ್ಪತ್ರೆಗೆ ಸೇರಿದ್ದೂ ಇದೆ. ಆದ್ದರಿಂದ ಬೀದಿ ನಾಯಿಗಳ ಕಾಟದಿಂದ ಮುಕ್ತಿ ಪಡೆಯಲೆಂದೇ ಬೀದಿ ನಾಯಿಗಳಿಗೆ ಮೀನಿನಲ್ಲಿ ವಿಷ ಬೆರೆಸಿ ಹಾಕಿ ನಾಯಿಗಳ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿ ಪ್ರೇಮಿ ಬಬಿತಾ ಮಧ್ವರಾಜ್ ಅವರು ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

10 dogs found dead in Manipal poisoning suspected

ನಾಯಿಗಳನ್ನು ಕೊಂದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬೀದಿನಾಯಿಗಳ ಕಾಟದಿಂದ ಜನರ ಜೀವ ರಕ್ಷಿಸುವ ಕಡೆಗೂ ಜಿಲ್ಲಾಡಳಿತ ಗಂಭೀರವಾಗಿ ಚಿಂತನೆ ನಡೆಸಬೇಕಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

English summary
Nearly 10 dogs found dead near Mandavi Emerald building at Manipal. It is suspected that these dog were killed by Poison.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X