ಕೃಷ್ಣನಗರಿಯಲ್ಲಿಂದು ಕೊರೊನಾ ವೈರಸ್ ಸ್ಪೋಟ: 109 ಪಾಸಿಟಿವ್, ಮೂರು ಸಾವು!
ಉಡುಪಿ, ಜುಲೈ 16: ಮಹಾಮಾರಿ ಕೊರೊನಾ ವೈರಸ್ ಇಂದು ಕೂಡಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಉಡುಪಿ ಜಿಲ್ಲೆಯಲ್ಲಿ ಹಲವು ದಿನಗಳ ಬಳಿಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶತಕ ಬಾರಿಸಿದೆ. ಗುರುವಾರ ಒಂದೇ ದಿನ 109 ಮಂದಿಗೆ ಸೋಂಕು ದೃಢಪಟ್ಟಿವೆ.
Recommended Video
Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada
ಗುರುವಾರ ಒಂದೇ ದಿನದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದ್ದು, ಕೃಷ್ಣನಗರಿ ಉಡುಪಿ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ.

ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿಂದು ಮೂವರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಇಂದು 80 ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಒಟ್ಟು ಸೊಂಕಿತರ ಸಂಖ್ಯೆ 1895 ಕ್ಕೆ ಏರಿಕೆ ಆಗಿದೆ. ಇನ್ನೂ 594 ವರದಿಗಳು ಬರಲು ಬಾಕಿ ಇವೆ. ಇಂದು 489 ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.












Click it and Unblock the Notifications