ಉಡುಪಿ: ಕೋಳಿ ಅರಸಿ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗ ಸರ್ಪ
ಉಡುಪಿ, ನವೆಂಬರ್ 08: ಕಳೆದ ಒಂದು ತಿಂಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 4 ಬೃಹತ್ ಗಾತ್ರದ ಕಾಳಿಂಗ ಸರ್ಪಗಳು ಕಾಣಿಸಿಕೊಂಡಿವೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಪದೇ ಪದೇ ಭಾರೀ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಭೀತಿ ಹುಟ್ಟಿಸಿದೆ.
ಒಂದೇ ತಿಂಗಳಲ್ಲಿ ನಾಲ್ಕು ಕಡೆ ಕಾಳಿಂಗ ಸರ್ಪ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಜನ ಬೆಚ್ಚಿಬಿದ್ದಿದ್ದಾರೆ. ಇದೀಗ ಕಸಬಾ ಗ್ರಾಮದ ಪುಲ್ಕೇರಿ ಬೈಪಾಸ್ ಬಳಿಯ ಸುನಿಲ್.ಕೆ.ಆರ್. ಎಂಬವರ ಮನೆ ಅಂಗಳದಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಕಾಳಿಂಗ ಸರ್ಪದ ಗಾತ್ರ ಕಂಡು ಬೆಚ್ಚಿಬಿದ್ದ ಸುನಿಲ್ ತಕ್ಷಣವೇ ಉರಗ ತಜ್ಞ ಅನಿಲ್ ಪ್ರಭು ಅವರಿಗೆ ಮಾಹಿತಿ ನೀಡಿದ್ದಾರೆ.
ಕಾಳಿಂಗ ಸರ್ಪ ಕಾಣಿಸಿಕೊಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ ಅನಿಲ್ ಪ್ರಭು ಸುಮಾರು 15 ಅಡಿ ಉದ್ದ ಹಾಗೂ 28 ಕೆ ಜಿ ಯಷ್ಟು ತೂಗುತ್ತಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಈ ಭಯಂಕರ ಸರ್ಪವನ್ನು ಅನಿಲ್ ಪ್ರಭು ಸುರಕ್ಷಿತವಾಗಿ ಅಭಯಾರಣ್ಯಕ್ಕೆ ಬಿಡಲಾಗಿದೆ.

ಬೈಲೂರು, ತೆಳ್ಳಾರು, ಗಣಿತ ನಗರ ಪರಿಸರದಲ್ಲಿ ಪದೇ ಪದೇ ಕಾಳಿಂಗ ಸರ್ಪ ಕಾಣಿಸಿಕೊಳ್ಳುತ್ತಿದ್ದು, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಮಾತ್ರ ಈ ಮಾದರಿಯ ಕಾಳಿಂಗ ಕಾಣಸಿಗುತ್ತೆ. ಆಹಾರ ಹುಡುಕುತ್ತಾ ಬಂದು, ಕೋಳಿಯಾಸೆಗೆ ನಗರ ಪ್ರದೇಶದ ಮನೆಗಳತ್ತ ಮುಖಮಾಡುತ್ತಿವೆ ಈ ಕಾಳಿಂಗ ಸರ್ಪಗಳು ಎಂದು ಹೇಳಲಾಗುತ್ತಿದೆ.
ಭಯ ಬೇಡ, ಬೆದ್ರಕಾಡು ಪ್ರದೇಶದಲ್ಲಿ ಪತ್ತೆಯಾಗಿದ್ದು 'ಬೆಕ್ಕು ಹಾವು'
ನವೆಂಬರ್ 02 ರಂದು ಕಾರ್ಕಳ ತಾಲೂಕಿನ ಬೈಲೂರು ಪರಿಸರದಲ್ಲಿ ಭಾರೀ ಗಾತ್ರದ ಕಾಳಿಂಗ ಹಾವು ಕಾಣಿಸಿಕೊಂಡಿತ್ತು. ಕಳೆದ ಎರಡು ತಿಂಗಳ ಹಿಂದೆಯೂ ಕಾರ್ಕಳ ತಾಲೂಕಿನ ಜಾರ್ಕಳ ಅರ್ಜೆಡ್ಡು ಪ್ರದೇಶದಲ್ಲಿ ಇದೇ ಕಾಳಿಂಗ ಹಾವು ಮರವೇರಿ ಕುಳಿತು ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಗ್ರಾಮಸ್ಥರು ಕಾಳಿಂಗ ಹಾವನ್ನು ಸೆರೆ ಹಿಡಿಯಲು ಕಾದು ಕುಳಿತರೂ ಮರದಿಂದ ಹಾವು ಕೆಳಗೆ ಇಳಿಯಲೇ ಇಲ್ಲ. ಅದು ಮರದಲ್ಲೇ ಠಿಕಾಣಿ ಹೊಡಿತ್ತು.

ಬಳಿಕ ಬೆಳಗ್ಗಿನ ಜಾವ ಅಲ್ಲಿಂದ ಕಣ್ಮರೆಯಾಗಿತ್ತು. ಕೊನೆಗೂ ಬೈಲೂರು ಪೇಟೆಯಲ್ಲಿ ಮತ್ತೆ ಕಾಳಿಂಗ ಸರ್ಪ ಕಾಣಿಸಿ ಕೊಂಡಿತ್ತು. ಕೊಡಲೇ ಉರಗ ತಜ್ಞ ಅನಿಲ್ ಪ್ರಭು ಅವರಿಗೆ ಸ್ಥಳಿಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಅನಿಲ್ ಪ್ರಭು ಹಾವನ್ನು ಸರೆ ಹಿಡಿದಿದ್ದಾರೆ. 13 ಅಡಿಗಳಷ್ಟು ಉದ್ದ ಇರುವ ಕಾಳಿಂಗ ಸರ್ಪವನ್ನು ಹಿಡಿದು ಅರಣ್ಯಾಧಿಕಾರಿಗಳ ನೆರವಿನೊಂದಿಗೆ ಅಭಯಾರಣ್ಯ ಕ್ಕೆ ಬಿಟಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications