ಉಡುಪಿ: ಕೋಳಿ ಅರಸಿ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗ ಸರ್ಪ
ಉಡುಪಿ, ನವೆಂಬರ್ 08: ಕಳೆದ ಒಂದು ತಿಂಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 4 ಬೃಹತ್ ಗಾತ್ರದ ಕಾಳಿಂಗ ಸರ್ಪಗಳು ಕಾಣಿಸಿಕೊಂಡಿವೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಪದೇ ಪದೇ ಭಾರೀ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಭೀತಿ ಹುಟ್ಟಿಸಿದೆ.
ಒಂದೇ ತಿಂಗಳಲ್ಲಿ ನಾಲ್ಕು ಕಡೆ ಕಾಳಿಂಗ ಸರ್ಪ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಜನ ಬೆಚ್ಚಿಬಿದ್ದಿದ್ದಾರೆ. ಇದೀಗ ಕಸಬಾ ಗ್ರಾಮದ ಪುಲ್ಕೇರಿ ಬೈಪಾಸ್ ಬಳಿಯ ಸುನಿಲ್.ಕೆ.ಆರ್. ಎಂಬವರ ಮನೆ ಅಂಗಳದಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಕಾಳಿಂಗ ಸರ್ಪದ ಗಾತ್ರ ಕಂಡು ಬೆಚ್ಚಿಬಿದ್ದ ಸುನಿಲ್ ತಕ್ಷಣವೇ ಉರಗ ತಜ್ಞ ಅನಿಲ್ ಪ್ರಭು ಅವರಿಗೆ ಮಾಹಿತಿ ನೀಡಿದ್ದಾರೆ.
ಕಾಳಿಂಗ ಸರ್ಪ ಕಾಣಿಸಿಕೊಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ ಅನಿಲ್ ಪ್ರಭು ಸುಮಾರು 15 ಅಡಿ ಉದ್ದ ಹಾಗೂ 28 ಕೆ ಜಿ ಯಷ್ಟು ತೂಗುತ್ತಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಈ ಭಯಂಕರ ಸರ್ಪವನ್ನು ಅನಿಲ್ ಪ್ರಭು ಸುರಕ್ಷಿತವಾಗಿ ಅಭಯಾರಣ್ಯಕ್ಕೆ ಬಿಡಲಾಗಿದೆ.

ಬೈಲೂರು, ತೆಳ್ಳಾರು, ಗಣಿತ ನಗರ ಪರಿಸರದಲ್ಲಿ ಪದೇ ಪದೇ ಕಾಳಿಂಗ ಸರ್ಪ ಕಾಣಿಸಿಕೊಳ್ಳುತ್ತಿದ್ದು, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಮಾತ್ರ ಈ ಮಾದರಿಯ ಕಾಳಿಂಗ ಕಾಣಸಿಗುತ್ತೆ. ಆಹಾರ ಹುಡುಕುತ್ತಾ ಬಂದು, ಕೋಳಿಯಾಸೆಗೆ ನಗರ ಪ್ರದೇಶದ ಮನೆಗಳತ್ತ ಮುಖಮಾಡುತ್ತಿವೆ ಈ ಕಾಳಿಂಗ ಸರ್ಪಗಳು ಎಂದು ಹೇಳಲಾಗುತ್ತಿದೆ.
ಭಯ ಬೇಡ, ಬೆದ್ರಕಾಡು ಪ್ರದೇಶದಲ್ಲಿ ಪತ್ತೆಯಾಗಿದ್ದು 'ಬೆಕ್ಕು ಹಾವು'
ನವೆಂಬರ್ 02 ರಂದು ಕಾರ್ಕಳ ತಾಲೂಕಿನ ಬೈಲೂರು ಪರಿಸರದಲ್ಲಿ ಭಾರೀ ಗಾತ್ರದ ಕಾಳಿಂಗ ಹಾವು ಕಾಣಿಸಿಕೊಂಡಿತ್ತು. ಕಳೆದ ಎರಡು ತಿಂಗಳ ಹಿಂದೆಯೂ ಕಾರ್ಕಳ ತಾಲೂಕಿನ ಜಾರ್ಕಳ ಅರ್ಜೆಡ್ಡು ಪ್ರದೇಶದಲ್ಲಿ ಇದೇ ಕಾಳಿಂಗ ಹಾವು ಮರವೇರಿ ಕುಳಿತು ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಗ್ರಾಮಸ್ಥರು ಕಾಳಿಂಗ ಹಾವನ್ನು ಸೆರೆ ಹಿಡಿಯಲು ಕಾದು ಕುಳಿತರೂ ಮರದಿಂದ ಹಾವು ಕೆಳಗೆ ಇಳಿಯಲೇ ಇಲ್ಲ. ಅದು ಮರದಲ್ಲೇ ಠಿಕಾಣಿ ಹೊಡಿತ್ತು.

ಬಳಿಕ ಬೆಳಗ್ಗಿನ ಜಾವ ಅಲ್ಲಿಂದ ಕಣ್ಮರೆಯಾಗಿತ್ತು. ಕೊನೆಗೂ ಬೈಲೂರು ಪೇಟೆಯಲ್ಲಿ ಮತ್ತೆ ಕಾಳಿಂಗ ಸರ್ಪ ಕಾಣಿಸಿ ಕೊಂಡಿತ್ತು. ಕೊಡಲೇ ಉರಗ ತಜ್ಞ ಅನಿಲ್ ಪ್ರಭು ಅವರಿಗೆ ಸ್ಥಳಿಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಅನಿಲ್ ಪ್ರಭು ಹಾವನ್ನು ಸರೆ ಹಿಡಿದಿದ್ದಾರೆ. 13 ಅಡಿಗಳಷ್ಟು ಉದ್ದ ಇರುವ ಕಾಳಿಂಗ ಸರ್ಪವನ್ನು ಹಿಡಿದು ಅರಣ್ಯಾಧಿಕಾರಿಗಳ ನೆರವಿನೊಂದಿಗೆ ಅಭಯಾರಣ್ಯ ಕ್ಕೆ ಬಿಟಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications