Get Updates
Get notified of breaking news, exclusive insights, and must-see stories!

ಮಲ್ಪೆ ಬಂದರಿಗೆ ದಾಳಿ: ಮೀನು ಆಯ್ದು ಮಾರಾಟ ಮಾಡುತ್ತಿದ್ದ 17 ಮಕ್ಕಳ ರಕ್ಷಣೆ

ಉಡುಪಿ, ಅಕ್ಟೋಬರ್ 29: ಬೆಳ್ಳಂಬೆಳಿಗ್ಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ದಾಳಿ ನಡೆಸಿ 17 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಕಲಾ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರಿಕ ಸೇವಾ ಟ್ರಸ್ಟ್ ಉಡುಪಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.

Udupi: 17 Child Labourers Rescued From Malpe Port

ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ, ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೀಶ್ ಇದ್ದರು.

Udupi: 17 Child Labourers Rescued From Malpe Port

ಅದೇ ರೀತಿ ಸುರಕ್ಷಾ-ಸುನಂದಾ ಮಹಿಳಾ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸವಿತಾ ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದಮನೆ ಶಂಕರಪುರ ಸಂಸ್ಥೆಯ ಕ್ರಿಸ್ಟೋಪರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ಧರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+