ಒಂದೇ ಕುಟುಂಬದ 19 ಜನರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
ಉಡುಪಿ, ಜನವರಿ 20 : ನಿವೇಶನ ಕಳೆದುಕೊಂಡು ಸಂಕಷ್ಟಕ್ಕೀಡಾಗಿರುವ ಅವಿಭಕ್ತ ಕುಟುಂಬದ 19 ಸದಸ್ಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಮತ್ತಿತರರಿಗೆ ಪತ್ರ ಬರೆದಿದ್ದಾರೆ.
ಕಾರ್ಕಳ ತಾಲೂಕಿನ ಹೆಬ್ರಿ ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆ ನಿವಾಸಿ ಜಲಜ ಶೆಟ್ಟಿ, ರಾಮಣ್ಣ ಶೆಟ್ಟಿ ಮತ್ತು ಅವರ ಮಗ ವೆಂಕಟೇಶ ಶೆಟ್ಟಿ ಕುಟುಂಬದ ಒಟ್ಟು 19 ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಸಹಿತ ಜನಪ್ರತಿನಿಧಿಗಳು, ಗೃಹ ಸಚಿವರು, ಕಂದಾಯ ಸಚಿವರು ಮತ್ತು ಮುಖ್ಯಮಂತ್ರಿ ಅವರಿಗೆ ಪತ್ರ ರವಾನಿಸಿದ್ದಾರೆ.

ಪತ್ರದಲ್ಲಿ ಏನಿದೆ..?
ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳಿರುವ ಮಂದಿ ಬರೆದ ಪತ್ರ ಹೀಗಿದೆ:
"19 ಮಂದಿ ಇರುವ ಅವಿಭಕ್ತ ಕುಟುಂಬ ನಮ್ಮದು. ಡಿಕ್ಲೆರೇಶನ್ ಮತ್ತು ಸರ್ಕಾರಿ ನಿವೇಶನವನ್ನು ಪಡೆದುಕೊಂಡು ಜೀವನ ಸಾಗಿಸುತ್ತಿದ್ದೇವೆ. ಇದೀಗ ನಮ್ಮ ಜಾಗವನ್ನು ಬೇರೆಯವರು ಒತ್ತುವರಿ ಮಾಡಿಕೊಂಡು ನಮಗೆ ಪ್ರಯೋಜನವಿಲ್ಲದ ಜಾಗ ನೀಡಿದ್ದಾರೆ. ಅಲ್ಲದೇ ನಮ್ಮ ಕುಟುಂಬದ ವಿರುದ್ಧ ದೂರನ್ನ ದಾಖಲಿಸಿದ್ದಾರೆ. ಈ ಎಲ್ಲ ಘಟನೆಗಳಿಂದ ನೊಂದಿದ್ದ ನಮ್ಮ ತಾಯಿಗೆ ಈಗ ಹೃದಯಾಘಾತವಾಗಿದೆ. ಯಾವುದೇ ಇಲಾಖೆಗೆ ತೆರಳಿ ನ್ಯಾಯ ಕೇಳಿದರೂ ನಮಗೆ ನ್ಯಾಯ ಸಿಕ್ಕಿಲ್ಲ. ನಮ್ಮ ಕಷ್ಟವನ್ನು ಅರಿಯುವವರು ಇಲ್ಲದ ಕಾರಣ ಅವಿಭಕ್ತ ಕುಟುಂಬದಲ್ಲಿರುವ ನಾವೆಲ್ಲರೂ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿದ್ದೇವೆ."
ಹೀಗಂತ ಕುಟುಂಬ ಸದಸ್ಯ ವೆಂಕಟೇಶ ಶೆಟ್ಟಿ ಆತ್ಮಹತ್ಯೆ ಪತ್ರ ಬರೆದಿದ್ದಾರೆ. ಇದರ ಜೊತೆಗೆ ವಾಟ್ಸಾಪ್ ಮೂಲಕ ಈ ಪತ್ರವನ್ನು ಎಲ್ಲರೂ ಶೇರ್ ಮಾಡುವಂತೆಯೂ ಅವರು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ. ಈ ವಿಷಯ ತಿಳಿದ ಬಂಟ ಸಮಾಜದ ಮುಖಂಡರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಸಂತ್ರಸ್ತ ಕುಟುಂಬವನ್ನು ಶುಕ್ರವಾರ ಕಾರ್ಕಳ ತಹಶೀಲ್ದಾರ್ ಕರೆಯಿಸಿಕೊಂಡು ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications