2nd PUC Exam; ಉಡುಪಿಯಲ್ಲಿ ಹಿಜಾಬ್ ವಿದ್ಯಾರ್ಥಿನಿಯರ ಹೈಡ್ರಾಮ!
ಉಡುಪಿ, ಏಪ್ರಿಲ್ 22: ಹಿಜಾಬ್ ವಿಚಾರವಾಗಿ ರಾಷ್ಟ್ರದಾದ್ಯಂತ ಗದ್ದಲ ಎಬ್ಬಿಸಿದ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರ ಪೈಕಿ ನಾಲ್ವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಾರಾ? ಇಲ್ಲವಾ ಎಂಬ ಗೊಂದಲಕ್ಕೆ ಉತ್ತರ ಸಿಕ್ಕಿದೆ. ರಾಜ್ಯ ಸರ್ಕಾರದ ಆದೇಶದ ನಡುವೆಯೂ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ಇಬ್ಬರು ಹಿಜಾಬ್ ಪರ ಹೋರಾಟಗಾರ್ತಿ ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟು ಹಿಡಿದು ಪರೀಕ್ಷೆ ಬರೆಯದೇ ಮನೆ ಕಡೆ ಮುಖ ಮಾಡಿದ್ದಾರೆ.
ಆರು ಮಂದಿ ಹಿಜಾಬ್ ವಿದ್ಯಾರ್ಥಿನಿಯರ ಪೈಕಿ ಪ್ರಮುಖ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದ ಆಲಿಯಾ ಅಸಾದಿ ಮತ್ತು ರೇಶಂಗೆ ಇಂದು ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಇದ್ದ ಕಾರಣ ಪರೀಕ್ಷೆಯ ಕೊನೆಯ ಕ್ಷಣದಲ್ಲಿ ಈ ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು.
ಪರೀಕ್ಷೆ ಆರಂಭದ ಕೊನೆಯ ಕ್ಷಣದಲ್ಲಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಹಿಂಬದಿಯ ಗೇಟ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರು ಹಾಲ್ ಟಿಕೆಟ್ ಪಡೆದಿದ್ದಾರೆ.

ಬುರ್ಖಾ ತೊಟ್ಟು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿನಿಯರು ಹಾಲ್ ಟಿಕೆಟ್ ಪಡೆದು ಹಿಜಾಬ್ ಧರಿಸಿಯೇ ಪರೀಕ್ಷೆಗೆ ಹಾಜರಾಗುತ್ತೇವೆ ಅಂತಾ ಪಟ್ಟು ಹಿಡಿದಿದ್ದಾರೆ. ಈ ವೇಳೆ ಪರೀಕ್ಷೆ ಕೊಠಡಿಯಲ್ಲಿದ್ದ ಸಿಬ್ಬಂದಿ ಸರ್ಕಾರದ ಸುತ್ತೋಲೆ, ಹೈಕೋರ್ಟ್ನ ಆದೇಶದ ಬಗ್ಗೆ ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದ್ದಾರೆ.
ಆದರೆ ವಿದ್ಯಾರ್ಥಿನಿಯರು ಸಿಬ್ಬಂದಿ ಜೊತೆ ಗಟ್ಟಿ ಸ್ವರದಲ್ಲಿ ವಾಗ್ವಾದ ಮಾಡಿದ ಕಾರಣ ಪರೀಕ್ಷಾ ಕೇಂದ್ರಕ್ಕೆ ತಹಶೀಲ್ದಾರ ಅರ್ಚನಾ ಭಟ್, ಉಡುಪಿ ನಗರ ಠಾಣಾ ಪೊಲೀಸರು ಆಗಮಿಸಿ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಯೊಳಗೆ ತೆರಳಿ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದಿದ್ದಾರೆ. ಈ ವೇಳೆ ಅಧಿಕಾರಿಗಳು ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಿಗಳ ಎಚ್ಚರಿಕೆಯ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರಾದ ಆಲಿಯಾ ಅಸದಿ ಮತ್ತು ರೇಶಂ ಪರೀಕ್ಷೆ ಬರೆಯದೇ ಪರೀಕ್ಷಾ ಕೇಂದ್ರದಿಂದ ಹೊರನಡೆದಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ, ಅಧಿಕಾರಿಗಳು ವಿದ್ಯಾರ್ಥಿನಿಯರನ್ನು ಪರೀಕ್ಷಾ ಕೇಂದ್ರದಿಂದ ಹೊರಗೆ ಕಳುಹಿಸಿದ್ದಾರೆ.
ಈ ಮೂಲಕ ವಿದ್ಯಾರ್ಥಿನಿಯರು ಪರೀಕ್ಷೆಗಿಂತ ಹಿಜಾಬೇ ಮುಖ್ಯ ಅಂತಾ ತಮ್ಮ ನಿರ್ಧಾರ ಸ್ಪಷ್ಟಪಡಿಸಿದ್ದಾರೆ. ಪರೀಕ್ಷಾ ಕೇಂದ್ರದಿಂದ ಆಟೋ ಮೂಲಕ ವಿದ್ಯಾರ್ಥಿನಿಯರು ಮನೆಯತ್ತ ತೆರಳಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ.

ಉಡುಪಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಡೆಯಲಿದೆ. 14,597 ಹೊಸ, 326 ಖಾಸಗಿ ಮತ್ತು 349 ಪುನರಾವರ್ತಿತ ಅಭ್ಯರ್ಥಿಗಳು ಸೇರಿ 15,272 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಇದರಲ್ಲಿ ವಿಜ್ಞಾನ ವಿಭಾಗದ 2,203 ವಿದ್ಯಾರ್ಥಿಗಳು, 2,589 ವಿದ್ಯಾರ್ಥಿನಿಯರು, ವಾಣಿಜ್ಯ ವಿಭಾಗದ 3,935 ವಿದ್ಯಾರ್ಥಿಗಳು, 3,915 ವಿದ್ಯಾರ್ಥಿನಿಯರು, ಕಲಾ ವಿಭಾಗದ 796 ವಿದ್ಯಾರ್ಥಿಗಳು, 728 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಒಟ್ಟಾರೆಯಾಗಿ ವಿಜ್ಞಾನ ವಿಭಾಗದ 4,792, ವಾಣಿಜ್ಯ ವಿಭಾಗದ 7,850 ಹಾಗೂ ಕಲಾ ವಿಭಾಗದ 1,524 ವಿದ್ಯಾರ್ಥಿಗಳು ಇದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications