ಉಡುಪಿ: ಚಿನ್ನದ ವ್ಯಾಪಾರಿಯ ದರೋಡೆ
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಇಳಿಸಿ, ಕಾರಿನಲ್ಲಿ ಕರೆದೊಯ್ದು 40 ಲಕ್ಷ ಮೌಲ್ಯದ ಚಿನ್ನ, ಎರಡೂವರೆ ಲಕ್ಷ ರು. ನಗದು ದರೋಡೆ ಮಾಡಿರುವ ಕಳ್ಳರು.
ಉಡುಪಿ, ಮಾರ್ಚ್ 18: ಚಿನ್ನದ ವ್ಯಾಪಾರಿಯೊಬ್ಬರನ್ನು ಬಲವಂತವಾಗಿ ಕರೆದೊಯ್ದು ಲಕ್ಷಾಂತರ ರೂ. ಮೌಲ್ಯದ ನಗ-ನಗದು ದರೋಡೆಗೈದ ಘಟನೆ ಮಣಿಪಾಲ ಸಮೀಪದ ಈಶ್ವರ ನಗರದಲ್ಲಿ ನಡೆದಿದೆ.
ಕೇರಳದ ತ್ರಿಶೂರ್ ನಿವಾಸಿ ದಿಲೀಪ್ ದರೋಡೆಗೊಳಗಾದ ವ್ಯಾಪಾರಿ. ಇವರಲ್ಲಿದ್ದ ನಲವತ್ತು ಲಕ್ಷ ರೂ. ಮೌಲ್ಯದ ಚಿನ್ನ, ಎರಡೂವರೆ ಲಕ್ಷ ರೂ. ನಗದನ್ನು ದುಷ್ಕರ್ಮಿಗಳು ದರೋಡೆಗೈದಿದ್ದಾರೆ.
ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ದಿಲೀಪ್ ಅವರನ್ನು ಬಸ್ಸಿನಿಂದ ಕೆಳಗಿಳಿಸಿ ಕಾರಿನಲ್ಲಿ ಕರೆದೊಯ್ದು ಈ ಕೃತ್ಯ ಎಸಗಲಾಗಿದೆ. ಬಳಿಕ ದಿಲೀಪ್ ಅವರನ್ನು ಪಡುಬಿದ್ರೆಯಲ್ಲಿ ಬಿಟ್ಟು ದರೋಡೆಕೋರರು ಪರಾರಿಯಾಗಿದ್ದಾರೆ.

ಉಡುಪಿಯಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ?: ಉಡುಪಿ ಜಿಲ್ಲೆಯಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ಸ್ಥಾಪನೆಯಾಗಲಿದೆ. ಈ ಕುರಿತ ಪ್ರಸ್ತಾವವನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವ ಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಸುಸಜ್ಜಿತ ಮೆಡಿಕಲ್ ಕಾಲೇಜನ್ನು ಬ್ರಹ್ಮಾವರ ಕೊ-ಆಪರೇಟಿವ್ ಸಕ್ಕರೆ ಕಾರ್ಖಾನೆಗೆ ಸೇರಿದ 25 ಎಕ್ರೆ ಜಾಗದಲ್ಲಿ ಅಸ್ಥಿತ್ವಕ್ಕೆ ತರಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಕ್ಕರೆ ಕಾರ್ಖಾನೆಯು 110 ಎಕರೆ ಜಾಗವನ್ನು ಹೊಂದಿದೆ. 2004ರಿಂದ ಕೆಲಸವನ್ನು ಸ್ಥಗಿತಗೊಳಿಸಿದೆ.
ರಾಜ್ಯ ಸರ್ಕಾರ ಪ್ರಸ್ತಾವನೆಗೆ ಎರಡನೇ ಹಂತದಲ್ಲಿ ಅಂದರೆ ಈಗಾಗಲೇ ಅನುಮತಿ ನೀಡಲಾಗಿರುವ ಆರು ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ನಿಧಿ ಬಿಡುಗಡೆಗೊಳಿಸಿದ ಬಳಿಕ ಅನುಮತಿ ನೀಡುವ ಸಾಧ್ಯತೆ ಇದೆ. ಇನ್ನು ಇತ್ತೀಚಿಗೆ ಉಡುಪಿಯಲ್ಲಿ ಉದ್ಘಾಟನೆಗೊಂಡ ಸಾರ್ವಜನಿಕ ಔಷಧಿ ಅಂಗಡಿಗಳು ಪ್ರಾರಂಭದಲ್ಲಿ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಕಾರ್ಯಾರಂಭಿಸಲಿದೆ.
ನಂತರ ದಿನದ 24 ಗಂಟೆಗಳ ಕಾಲ ತೆರೆದಿರುತ್ತದೆ. ಇದೇ ವೇಳೆ ಈ ಔಷಧಿ ಅಂಗಡಿಗಳಲ್ಲಿ 90 ಶೇಕಡಾ ರಿಯಾಯಿತಿ, ಬ್ರಾಂಡೆಡ್ ಔಷಧಿಗಳಿಗೂ ಶೇಕಡಾ 10ರಷ್ಟು ರಿಯಾಯಿತಿ ನೀಡಲಿದೆ. ಶಸ್ತ್ರ ಚಿಕಿತ್ಸಾ ಉಪಕರಣಗಳು ಕೂಡ ಶೇಕಡಾ 25ರಷ್ಟು ರಿಯಾಯಿತಿ ದರದಲ್ಲಿ ದೊರೆಯಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications