8 ವರ್ಷದ ಬಾಲಕಿ ಮೇಲ್ ರೇಪ್, ಬೆಚ್ಚಿಬಿದ್ದ ಕುಂದಾಪುರ
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಬಿದ್ಕಲ್ಕಟ್ಟೆಯಲ್ಲಿ ನಡೆದಿದೆ. 53 ವರ್ಷದ ರಾಮದಾಸ್ ಪ್ರಭು ಎಂಬಾತ ಚಾಕಲೇಟ್ ನೀಡಿ ಪುಸಲಾಯಿಸಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಉಡುಪಿ, ಎಪ್ರಿಲ್ 7: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಬಿದ್ಕಲ್ಕಟ್ಟೆಯಲ್ಲಿ ನಡೆದಿದೆ. 53 ವರ್ಷದ ರಾಮದಾಸ್ ಪ್ರಭು ಎಂಬಾತ ಚಾಕಲೇಟ್ ನೀಡಿ ಪುಸಲಾಯಿಸಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಕೂಲಿ ಕೆಲಸಕ್ಕೆಂದು ಕೋಟ ಠಾಣಾ ವ್ಯಾಪ್ತಿಯ ಬಿದ್ಕಲ್ ಕಟ್ಟೆ ಎಂಬ ಊರಿಗೆ ತಮಿಳುನಾಡು ಮೂಲದ ಬಡ ಕುಟುಂಬವೊಂದು ಬಂದಿತ್ತು. ಯಾರೂ ಇಲ್ಲದ ವೇಳೆ ರಾಮದಾಸ್ ಪ್ರಭು ಬಾಲಕಿಗೆ ಚಾಕಲೇಟ್ ನೀಡಿ, ಬೆದರಿಸಿ ಅತ್ಯಾಚಾರವೆಸಗಿದ್ದ ಎಂಬುದು ಬಯಲಾಗಿದೆ.['ನಾವು ಯಾರಿಗೂ ಹೆದರಲ್ಲ,' ಉಡುಪಿ ಡಿಸಿ ಪ್ರಿಯಾಂಕಾ ಖಡಕ್ ಮಾತು]

ಶುಕ್ರವಾರ ಬಾಲಕಿ ಹೊಟ್ಟೆ ನೋವು ಎಂದು ಮನೆಯವರಲ್ಲಿ ಹೇಳಿಕೊಂಡಿದ್ದಳು. ಹೀಗಾಗಿ ಬಾಲಕಿಯನ್ನು ಮನೆಯವರು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ವಿಷಯ ಗೊತ್ತಾಗುತ್ತಿದ್ದಂತೆ ಆರೋಪಿ ಪ್ರಭು ಪರಾರಿಯಾಗಿದ್ದ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.[ಗಲ್ಫ್ ಉದ್ಯೋಗ ನಂಬಿ ಮೋಸ ಹೋದ ಮಹಿಳೆಯ ದುರಂತ ಕಥೆ]
ಅಡಕೆ ತೋಟದಲ್ಲಿ ಕಿಂಗ್ ಕೋಬ್ರಾ
ಬೃಹತ್ ಗಾತ್ರದ ಕಾಳಿಂಗ ಸರ್ಪ ಶುಕ್ರವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಚೂರಿ ಕೊಡ್ಲು ವಿನಲ್ಲಿ ಕಂಡು ಬಂತು.

ಚೂರಿ ಕೊಡ್ಲು ನಿವಾಸಿ ಬಾಬು ಆಚಾರ್ ಎಂಬುವವರ ಅಡಿಕೆ ತೋಟದಲ್ಲಿ15 ಅಡಿ ಉದ್ದದ ಕಾಳಿಂಗ ಇರುವುದು ಗೊತ್ತಾಯಿತು. ವಿಷಯ ಗೊತ್ತಾಗುತ್ತಿದ್ದಂತೆ ಕಾಳಿಂಗನನ್ನ ನೋಡಲು ಜನರು ನೆರೆದರು. ಕೂಡಲೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿ ಕೃಷ್ಣ ಆಚಾರ್, ಅರಣ್ಯ ಇಲಾಖಾ ಸಿಬ್ಬಂದಿ ಜತೆಗೂಡಿ ಕಾಳಿಂಗವನ್ನ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟರು.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications